AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
ಸಾಧು ಶ್ರೀನಾಥ್​
|

Updated on:Jun 27, 2023 | 1:19 PM

Share

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!