ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
Follow us
|

Updated on:Jun 27, 2023 | 1:19 PM

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!