ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

|

Updated on: Jun 27, 2023 | 1:19 PM

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
Follow us on

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23