AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ದಕ್ಷಿಣ ದಂಡಯಾತ್ರೆ: ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುತ್ತೇವೆ ಎಂದ AIDMK

ತಮಿಳುನಾಡು: ಚುನಾವಣಾ ಚಾಣಕ್ಯ ಅಮಿತ್ ಶಾನ ದಕ್ಷಿಣ ದಂಡಯಾತ್ರೆ ಶುರುವಾಗಿದೆ. ತಮಿಳುನಾಡಿಗೆ ಭೇಟಿ ನೀಡಿರೋ ಅಮಿತ್ ಶಾ, ಯೋಜನೆಗೆ ಚಾಲನೆ ನೀಡೋ ಜೊತೆಗೆ, ಮೆಗಾ ಪ್ಲ್ಯಾನ್‌ಗೆ ಕೈ ಹಾಕಿದ್ದಾರೆ. ತಮಿಳುನಾಡಿನಲ್ಲಿಂದು ಎರಡನೇ ದಿನದ ಪ್ರವಾಸ! ಹೌದು.. ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್‌ ಶಾ ತಮಿಳುನಾಡು ಪ್ರವಾಸದಲ್ಲಿದ್ದಾರೆ. ನಿನ್ನೆಯಿಂದ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅಮಿತ್ ಶಾರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಎಂಟ್ರಿ ಕೊಟ್ಟ ಮೊದಲ ದಿನವೇ ಅಮಿತ್‌ ಶಾ, ರಸ್ತೆಯಲ್ಲೇ ನಡೆದು ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ. […]

ಅಮಿತ್ ಶಾ ದಕ್ಷಿಣ ದಂಡಯಾತ್ರೆ: ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುತ್ತೇವೆ ಎಂದ AIDMK
ಪೃಥ್ವಿಶಂಕರ
| Updated By: ಆಯೇಷಾ ಬಾನು|

Updated on: Nov 22, 2020 | 12:38 PM

Share

ತಮಿಳುನಾಡು: ಚುನಾವಣಾ ಚಾಣಕ್ಯ ಅಮಿತ್ ಶಾನ ದಕ್ಷಿಣ ದಂಡಯಾತ್ರೆ ಶುರುವಾಗಿದೆ. ತಮಿಳುನಾಡಿಗೆ ಭೇಟಿ ನೀಡಿರೋ ಅಮಿತ್ ಶಾ, ಯೋಜನೆಗೆ ಚಾಲನೆ ನೀಡೋ ಜೊತೆಗೆ, ಮೆಗಾ ಪ್ಲ್ಯಾನ್‌ಗೆ ಕೈ ಹಾಕಿದ್ದಾರೆ.

ತಮಿಳುನಾಡಿನಲ್ಲಿಂದು ಎರಡನೇ ದಿನದ ಪ್ರವಾಸ! ಹೌದು.. ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್‌ ಶಾ ತಮಿಳುನಾಡು ಪ್ರವಾಸದಲ್ಲಿದ್ದಾರೆ. ನಿನ್ನೆಯಿಂದ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅಮಿತ್ ಶಾರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಎಂಟ್ರಿ ಕೊಟ್ಟ ಮೊದಲ ದಿನವೇ ಅಮಿತ್‌ ಶಾ, ರಸ್ತೆಯಲ್ಲೇ ನಡೆದು ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ.

ತಮಿಳುನಾಡಲ್ಲಿ ‘ಕಮಲ’ ಅರಳಿಸಲು ಮೆಗಾ ಪ್ಲ್ಯಾನ್!  ದಿಗ್ಗಜ ನಾಯಕರನ್ನು ಕಳೆದುಕೊಂಡ ಬಳಿಕ ಅಂದ್ರೆ, ಜಯಲಲಿತಾ ಮತ್ತು ಕರುಣಾನಿಧಿ ನಿಧನದ ನಂತ್ರ ತಮಿಳುನಾಡಲ್ಲಿ 2021ಕ್ಕೆ ಮೊದಲ ಸಾರ್ವತ್ರಿಕ ಚುನಾವಣೆ ನಡೀತಿದೆ. ಈ ಎಲೆಕ್ಷನ್‌ಗೆ ಈಗಲೇ ರಣತಂತ್ರ ಹೆಣೆದಿರೋ ಅಮಿತ್‌ ಶಾ, ಮಾಸ್ಟರ್‌ ಪ್ಲ್ಯಾನ್ ರೂಪಿಸಿದ್ದಾರೆ.

ಇಂದು ಸೂಪರ್ ಸ್ಟಾರ್ ರಜಿನಿ ಕಾಂತ್ ಭೇಟಿಯಾಗ್ತಾರಾ ಅಮಿತ್ ಶಾ? ಇನ್ನೂ ಸೂಪರ್ ಸ್ಟಾರ್ ತಲೈವಾ ರಜಿನಿಕಾಂತ್‌ರನ್ನ ಅಮಿತ್ ಶಾ, ಭೇಟಿಯಾಗ್ತಾರೆ ಎನ್ನಲಾಗಿದೆ. ಆದ್ರೆ ಭೇಟಿಗೆ ಯಾವುದೇ ಟೈಮ್ ನಿಗದಿಯಾಗಿಲ್ಲ. ಒಂದ್ವೇಳೆ ಭೇಟಿಯಾದ್ರೆ, ರಜಿನಿಕಾಂತ್ ಜೊತೆಗೆ ಅಮಿತ್ ಶಾ ಮೈತ್ರಿ ಮಾತುಕತೆ ನಡೆಸ್ತಾರಾ.. ತಲೈವಾ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ಮಾಡ್ತಾರಾ ಅನ್ನೋದು ಭಾರಿ ಕುತೂಹಲ ಕೆರಳಿಸಿದೆ.

ಬಿಜೆಪಿಯೊಂದಿಗೆ ಮುಂದುವರಿದ ಆಡಳಿತಾರೂಢ ಎಐಡಿಎಂಕೆ ಮೈತ್ರಿ ಮುಂದಿನ ನಾಲ್ಕೈದು ತಿಂಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ತಮಿಳುನಾಡಿನ ಆಡಳಿತಾರೂಢ ಎಐಡಿಎಂಕೆ ಸ್ಪಷ್ಟಪಡಿಸಿದೆ. ಸಿಎಂ ಪಳನಿಸ್ವಾಮಿ ನಿನ್ನೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಪ್ರವಾಸದಲ್ಲಿರುವ ಅಮಿತ್ ಶಾ ಚೆನ್ನೈ ಮೆಟ್ರೋ ಎರಡನೇ ಹಂತ ಮತ್ತು ನೂತನ ಜಲಾಶಯ ಸೇರಿ ವಿವಿಧ ಯೋಜನೆಗಳ ಒಟ್ಟು 67 ಸಾವಿರ ಕೋಟಿ ರೂಪಾಯಿಯ ಪ್ರಾಜೆಕ್ಟ್‌ಗೆ ಚಾಲನೆ ನೀಡಿದ್ದಾರೆ.  ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ತಮಿಳುನಾಡಿನಲ್ಲಿ ಪಕ್ಷ ಬೇರೂರುವಂತೆ ಮಾಡಲು ಅಮಿತ್ ಶಾ ತಂತ್ರ ರೂಪಿಸುತ್ತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ