AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque: ಜ್ಞಾನವಾಪಿ ಮಸೀದಿಯೊಳಗೆ ವುಝುಗೆ ಅವಕಾಶ: ಆಡಳಿತ, ಎಲ್ಲಾ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸುಪ್ರೀಂ ಸೂಚನೆ

ಜ್ಞಾನವಾಪಿ ಮಸೀದಿಯಲ್ಲಿ ರಂಜಾನ್ ಸಮಯದಲ್ಲಿ ವುಝು (ಅಭ್ಯರ್ಥನ) ಕ್ಕೆ ಸೂಕ್ತ ವ್ಯವಸ್ಥೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮನವಿಗೆ ಸೌಹಾರ್ದಯುತ ತೀರ್ಮಾನಕ್ಕೆ ಬರುವಂತೆ ಸುಪ್ರೀಂ ಕೋರ್ಟ್​ ತಿಳಿಸಿದೆ.

Gyanvapi Mosque: ಜ್ಞಾನವಾಪಿ ಮಸೀದಿಯೊಳಗೆ ವುಝುಗೆ ಅವಕಾಶ: ಆಡಳಿತ, ಎಲ್ಲಾ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸುಪ್ರೀಂ ಸೂಚನೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 4:51 PM

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ರಂಜಾನ್ ಸಮಯದಲ್ಲಿ ವುಝು (ಅಭ್ಯರ್ಥನ) ಕ್ಕೆ ಸೂಕ್ತ ವ್ಯವಸ್ಥೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮನವಿಗೆ ಸೌಹಾರ್ದಯುತ ತೀರ್ಮಾನಕ್ಕೆ ಬರುವಂತೆ ಸುಪ್ರೀಂ ಕೋರ್ಟ್​ ತಿಳಿಸಿದೆ. ಇದಕ್ಕಾಗಿ ನಾಳೆ (ಏ.18) ಸೌಹಾರ್ದಯುತ ಮಾತುಕತೆ ನಡೆಸುವಂತೆ ವಾರಣಾಸಿ ಜಿಲ್ಲಾಡಳಿತ ಮತ್ತು ಎಲ್ಲಾ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ  ಶುಕ್ರವಾರ ಮುಂದಿನ ವಿಚಾರಣೆ ನಡೆಯಲಿದೆ ಎಂದು ಹೇಳಿದೆ. ಅಲ್ಲಿ ಕಳೆದ ವರ್ಷ ನಡೆದ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿತ್ತು. ಈ ಕಾರಣಕ್ಕೆ ಅಲ್ಲಿ ಯಾರಿಗೂ ಹೋಗಲು ಅವಕಾಶ ನೀಡದ ಕಾರಣ, ಅಲ್ಲಿ ಮುಸ್ಲಿಂ ಸಮುದಾಯಕ್ಕೂ ಪ್ರವೇಶ ನೀಡಿರಲಿಲ್ಲ. ಇದೀಗ ರಂಜಾನ್ ವೇಳೆ ನಮಾಜ್ ಮಾಡಲು ಅವಕಾಶ ನೀಡಬೇಕು ಎಂದು ಕೇಳಿದ್ದಾರೆ, ಆದರೆ ಸುಪ್ರೀಂ, ಇದೀಗ ಈ ಬಗ್ಗೆ ಪ್ರಕರಣ ನಮ್ಮ ಮುಂದೆ ಇದೆ, ಒಂದು ವೇಳೆ ನಿಮಗೆ ಇಲ್ಲಿ ಪ್ರಾರ್ಥನೆ ಸಲ್ಲಿಸಲೇಬೇಕೆಂದರೆ ಸೌಹಾರ್ದಯುತ ಮಾತುಕತೆಯ ನಡೆಸಿ ಒಂದು ತೀರ್ಮಾನಕ್ಕೆ ಬನ್ನಿ ಎಂದು ಹೇಳಿದೆ.

ಮಸೀದಿ ಆಡಳಿತ ಸಮಿತಿಯ ಪ್ರತಿನಿಧಿಗಳು ಮತ್ತು ಇತರ ಮಧ್ಯಸ್ಥಗಾರರ ಜತೆ ಜಿಲ್ಲಾಧಿಕಾರಿ ಮಂಗಳವಾರ ಸಭೆ ನಡೆಸಲಿದ್ದಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಪೀಠವು, ಶುಕ್ರವಾರ ‘ವುಝು’ ವ್ಯವಸ್ಥೆಗೆ ಸೂಕ್ತ ನಿರ್ದೇಶನಗಳನ್ನು ನೀಡಿದಾಗ ಈ ವಿಷಯವನ್ನು ಮತ್ತೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ಪ್ರಕಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಇಂತೇಝಾಮಿಯಾ ಮಸೀದಿ ಪರವಾಗಿ ಪ್ರತಿನಿಧಿಸುವ ಹಿರಿಯ ವಕೀಲ ಹುಝೆಫಾ ಅಹ್ಮದಿ, ರಂಜಾನ್ ಸಮಯದಲ್ಲಿ ಭಾರೀ ಜನದಟ್ಟಣೆಯನ್ನು ಇರುವ ಕಾರಣ ಅವರು ವುಝು ಮಾಡಲು ಅಲ್ಲಿ ವ್ಯವಸ್ಥೆ ಮಾಡಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅಹ್ಮದಿ, ವಕೀಲ ಫುಜೈಲ್ ಅಹ್ಮದ್ ಅಯ್ಯುಬಿ ಕೂಡ ಈ ಬಗ್ಗೆ ಸಿಜೆಐಗೆ ಮನವಿ ಮಾಡಿದ್ದಾರೆ. ಹಿಂದಿನ ನ್ಯಾಯಾಲಯದ ಆದೇಶಗಳು ಈಗಾಗಲೇ ‘ವುಝು’ ಗಾಗಿ ಸರಿಯಾದ ವ್ಯವಸ್ಥೆಯನ್ನು ತಿಳಿಸುವಂತೆ ಜಿಲ್ಲಾಡಳಿತವನ್ನು ಕೇಳಿದೆ ಮತ್ತು ರಂಜಾನ್ ದೃಷ್ಟಿಯಿಂದ ಈ ನಿರ್ದೇಶನಗಳನ್ನು ಸೂಕ್ತ ಅನುಷ್ಠಾನಕ್ಕೆ ತರಲು ಪ್ರಯತ್ನಗಳು ನಡೆಯುತ್ತಿದೆ ಎಂದು ವಕೀಲರು ಹೇಳಿದರು.

ಇದನ್ನೂ ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಮಸೀದಿ ಆಡಳಿತ ಸಮಿತಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಬಹುದಾಗಿದೆ ಎಂದು ಹೇಳಿದರು. ಇತರ ಸಮುದಾಯದ (ಹಿಂದೂಗಳ) ಧಾರ್ಮಿಕ ಸಂವೇದನೆಗಳ ದೃಷ್ಟಿಯಿಂದ ಈ ಕ್ರಮವನ್ನು ಸರಿಯಾಗಿ ನಿರ್ಧಾರಿಸಬೇಕು ಎಂದು ಸಿಜೆಐಗೆ ತಿಳಿಸಿದ್ದಾರೆ. ಇದಕ್ಕೆ ಪೀಠವು, ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಸರಿಯಾದ ತೀರ್ಮಾನವನ್ನು ತಿಳಿಸಿ, ನಂತರ ನಮ್ಮ ಮುಂದೆ ಬನ್ನಿ ಮತ್ತು ನ್ಯಾಯಾಲಯವು ಎಲ್ಲಾ ಪಕ್ಷಗಳ ಒಮ್ಮತದ ಮೂಲಕ ಆದೇಶವನ್ನು ನೀಡಬಹುದು ಎಂದು ಹೇಳಿದರು.

ಮಸೀದಿಯ ಪಶ್ಚಿಮ ಗೋಡೆಯ ಹಿಂದೆ ಇದೆ ಎನ್ನಲಾದ ಪಾರ್ವತಿ ದೇವಿಯ ದೇಗುಲವಾದ ಮಾ ಶೃಂಗಾರ್ ಗೌರಿ ಸ್ಥಳದಲ್ಲಿ ಪೂಜೆ ಸಲ್ಲಿಸಲು ಅವಕಾಶವನ್ನು ಕೋರಿದ ಐವರು ಹಿಂದೂ ಮಹಿಳೆಯರ ಮೊಕದ್ದಮೆಯನ್ನು ವಿರೋಧಿಸಿ ಮೇ ತಿಂಗಳಲ್ಲಿ ಮಸೀದಿ ಸಮಿತಿಯು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪ್ರಸ್ತುತ ಪಡೆದುಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Mon, 17 April 23

Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್