AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಮುಕ್ಕಾಲು ಪಾಲು ಶಾಸಕ ಮಹಾಶಯರು ಕ್ರಿಮಿನಲ್ ಹಿನ್ನೆಲೆಯುಳ್ಳವರು!

ಬಿಹಾರ: ಬಿಹಾರದ ವಿಧಾನಸಭೆ ಇನ್ಮುಂದೆ ಕ್ರಿಮಿನಲ್ ಹಿನ್ನೆಲೆಯವರಿಂದ ತುಂಬಲಿದೆ. ಹೌದು.. ಇದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಿದು. ಇತ್ತೀಚೆಗೆ ನಡೆದ ಬಿಹಾರ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾದ ಶೇ. 70 ಎಂಎಲ್ಎಗಳ ಮೇಲೆ ಕ್ರಿಮಿನಲ್ ಆರೋಪಗಳಿವೆ. ಹಿಂದಿನ ಚುನಾವಣೆಗಿಂತ ಕ್ರಿಮಿನಲ್ ಹಿನ್ನೆಲೆಯಿರುವ ಎಂಎಲ್ಎಗಳ ಸಂಖ್ಯೆ ಈ ಚುನಾವಣೆಯಲ್ಲಿ 10 ಪರ್ಸೆಂಟ್ ಹೆಚ್ಚಾಗಿದೆ! ಮಹಿಳೆಯರ ಮೇಲಿನ ದೌರ್ಜನ್ಯದ ಕೇಸ್​ಗಳು ಇವೆ.. ಸರ್ಕಾರೇತರ ಸಂಸ್ಥೆ ADR ನಡೆಸಿದ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ. ಆಯ್ಕೆಯಾದ 168 ಶಾಸಕರ ಮೇಲೆ ಅಪರಾಧದ ಪ್ರಕರಣಗಳಿವೆ. ಅದರಲ್ಲಿ […]

ಬಿಹಾರ: ಮುಕ್ಕಾಲು ಪಾಲು ಶಾಸಕ ಮಹಾಶಯರು ಕ್ರಿಮಿನಲ್ ಹಿನ್ನೆಲೆಯುಳ್ಳವರು!
ಪೃಥ್ವಿಶಂಕರ
|

Updated on:Nov 13, 2020 | 4:58 PM

Share

ಬಿಹಾರ: ಬಿಹಾರದ ವಿಧಾನಸಭೆ ಇನ್ಮುಂದೆ ಕ್ರಿಮಿನಲ್ ಹಿನ್ನೆಲೆಯವರಿಂದ ತುಂಬಲಿದೆ. ಹೌದು.. ಇದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಿದು. ಇತ್ತೀಚೆಗೆ ನಡೆದ ಬಿಹಾರ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾದ ಶೇ. 70 ಎಂಎಲ್ಎಗಳ ಮೇಲೆ ಕ್ರಿಮಿನಲ್ ಆರೋಪಗಳಿವೆ. ಹಿಂದಿನ ಚುನಾವಣೆಗಿಂತ ಕ್ರಿಮಿನಲ್ ಹಿನ್ನೆಲೆಯಿರುವ ಎಂಎಲ್ಎಗಳ ಸಂಖ್ಯೆ ಈ ಚುನಾವಣೆಯಲ್ಲಿ 10 ಪರ್ಸೆಂಟ್ ಹೆಚ್ಚಾಗಿದೆ!

ಮಹಿಳೆಯರ ಮೇಲಿನ ದೌರ್ಜನ್ಯದ ಕೇಸ್​ಗಳು ಇವೆ.. ಸರ್ಕಾರೇತರ ಸಂಸ್ಥೆ ADR ನಡೆಸಿದ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ. ಆಯ್ಕೆಯಾದ 168 ಶಾಸಕರ ಮೇಲೆ ಅಪರಾಧದ ಪ್ರಕರಣಗಳಿವೆ. ಅದರಲ್ಲಿ 123 ಎಂಎಲ್ಎಗಳ ಮೇಲೆ ಗಂಭೀರ ಕ್ರಿಮಿನಲ್ ಆರೋಪಗಳಿವೆ. ಇನ್ನು 19 ಎಂಎಲ್ಎಗಳ ಮೇಲೆ ಐಪಿಸಿ ಸೆಕ್ಷನ್ 302 ಪ್ರಕಾರ ಕೊಲೆ ಪ್ರಕರಣದ ಕೇಸ್​ಗಳಿದ್ದರೆ 32 ಶಾಸಕರ ಮೇಲೆ ಕೊಲೆ ಯತ್ನದ ಆರೋಪಗಳಿವೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪದಲ್ಲಿ 8 ಶಾಸಕರ ಮೇಲೆ ಪ್ರಕರಣಗಳಿವೆ ಎಂದು ವರದಿ ತಿಳಿಸಿದೆ.

ಸರ್ವೋಚ್ಛ ನ್ಯಾಯಾಲಯ ಇದರ ಬಗ್ಗೆ ಹೇಳುವುದಾದರೂ ಏನು? ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯನ್ನು ಪಕ್ಷಗಳು ತಿಳಿಸಬೇಕು. ಜೊತೆಗೆ ಯಾವ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಕಾರಣ ನೀಡಬೇಕು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿತ್ತು. ನ್ಯಾಯಾಲಯವೊಂದು ಚುನಾವಣೆಗೆ ಸಂಬಂಧಿಸಿ ಹೀಗೆ ಹೇಳಿದ್ದು ದೇಶದಲ್ಲೇ ಮೊದಲು.

Published On - 4:57 pm, Fri, 13 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ