AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಬೆನ್ನ ಹಿಂದೆಯೇ ಭಾರತಕ್ಕೆ ಬರಲಿವೆ ಇನ್ನಷ್ಟು ಕೊರೊನಾ ಲಸಿಕೆಗಳು

ಜೈಡಸ್​ ಕ್ಯಾಡಿಲಾ ಸಂಸ್ಥೆಯ ಜೈಕೊವ್​-ಡಿ ಮತ್ತು ರಷ್ಯಾದ ಸ್ಪುಟ್ನಿಕ್-ವಿ ಕೊರೊನಾ ಲಸಿಕೆಗಳು ಅನುಮತಿ ಗಿಟ್ಟಿಸಿಕೊಳ್ಳಲು ಸರತಿಯಲ್ಲಿ ನಿಂತಿವೆ. ಇನ್ನು ಮಾಡೆರ್ನಾ ಮತ್ತು ಫೈಜರ್​-ಬಯೋಎನ್​ಟೆಕ್​ ಲಸಿಕೆಗಳು ಸಹ ಭಾರತದ ಮಾರುಕಟ್ಟೆಗೆ ಕಾಲಿಡುವ ಸಾಧ್ಯತೆ ದಟ್ಟವಾಗಿದೆ.

ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಬೆನ್ನ ಹಿಂದೆಯೇ ಭಾರತಕ್ಕೆ ಬರಲಿವೆ ಇನ್ನಷ್ಟು ಕೊರೊನಾ ಲಸಿಕೆಗಳು
ಪ್ರಾತಿನಿಧಿಕ ಚಿತ್ರ
Skanda
|

Updated on:Jan 11, 2021 | 7:12 PM

Share

ಭಾರತದಲ್ಲಿ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ತಯಾರಿಸಿದ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಲಸಿಕೆಗಳನ್ನು ಜನವರಿ 16 ರಿಂದ ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಇನ್ನೂ 6 ಹೊಸ ಲಸಿಕೆಗಳು ಭಾರತದ ಮಾರುಕಟ್ಟೆಗೆ ಪ್ರವೇಶಿಸಲಿವೆ ಎಂದು ಹೇಳುವ ಮೂಲಕ ಎಲ್ಲರ ಕಿವಿ ನೆಟ್ಟಗಾಗಿಸಿದ್ದಾರೆ.

ಪುಣೆ ಮೂಲದ ಸೆರಮ್ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿರುವ ಕೊವಿಶೀಲ್ಡ್​ ಲಸಿಕೆಯನ್ನು ಮೊದಲು ಅಭಿವೃದ್ಧಿಪಡಿಸಿರುವುದು ಆಕ್ಸ್​ಫರ್ಡ್ ಮತ್ತು ಆಸ್ಟ್ರಾಜೆನೆಕಾ ಸಂಸ್ಥೆಗಳು. ಬ್ರಿಟನ್​ನಲ್ಲಿ ಈ ಸಂಸ್ಥೆಗಳ ಸಹಯೋಗದಲ್ಲಿ ತಯಾರಿಸಲಾದ ಲಸಿಕೆಯನ್ನು ಭಾರತದಲ್ಲಿ ಸೆರಮ್​ ಉತ್ಪಾದಿಸುತ್ತಿದೆ. ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ 2 ಡೋಸ್​ ಲಸಿಕೆಯನ್ನು ನೀಡಿ ಪರಿಶೀಲಿಸಿದಾಗ ಶೇ.62ರಷ್ಟು ಪರಿಣಾಮಕಾರಿಯಾಗಿ ಕಂಡುಬಂದಿದೆ. ವಿಪರ್ಯಾಸವೆಂದರೆ ಇದೇ ಲಸಿಕೆಯನ್ನು ಕಡಿಮೆ ಡೋಸ್ ನೀಡಿದಾಗ ಶೇ.90ರಷ್ಟು ಪರಿಣಾಮ ದಾಖಲಾಗಿದೆ.

ಒಟ್ಟು 1.1 ಕೋಟಿ ಡೋಸ್​ ಕೊವಿಶೀಲ್ಡ್ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರ ಈಗಾಗಲೇ ಸೆರಮ್​ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರವಾಗಿ ಒಂದು ಡೋಸ್​ಗೆ ₹200ರಂತೆ ಲಸಿಕೆ ನೀಡಲು ಸೆರಮ್​ ತೀರ್ಮಾನಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ ಇದೇ ಲಸಿಕೆಯ ದರ ಒಂದು ಡೋಸ್​ಗೆ ₹1000 ಆಗುವ ಕುರಿತು ಸಂಸ್ಥೆಯ ಸಿಇಓ ಅದರ್​ ಪೂನಾವಾಲಾ ಸುಳಿವು ನೀಡಿದ್ದಾರೆ.

ಹೈದರಾಬಾದ್​ನಲ್ಲಿರುವ ಭಾರತ್ ಬಯೋಟೆಕ್​ ಸಂಸ್ಥೆ ಸ್ವಯಂ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್​ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿರುವ ಕುರಿತು ಈಗಾಗಲೇ ಹಲವರು ಆಕ್ಷೇಪ ಎತ್ತಿದ್ದಾರೆ. ಕೊವ್ಯಾಕ್ಸಿನ್​ 3ನೇ ಹಂತದ ವೈದ್ಯಕೀಯ ಪರೀಕ್ಷೆಯನ್ನು ಇನ್ನೂ ಮುಗಿಸಿಲ್ಲವಾದ್ದರಿಂದ ಅದು ಎಷ್ಟು ಪರಿಣಾಮಕಾರಿ ಎಂದು ನಿಖರವಾಗಿ ಹೇಳುವುದು ಕಷ್ಟ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ಲಸಿಕೆಯ ಬಗ್ಗೆ ಅನುಮಾನ ಬೇಡ ಎಂದಿದ್ದಾರೆ. ಕೊವ್ಯಾಕ್ಸಿನ್​ ಲಸಿಕೆಯ ದರ ಇನ್ನೂ ಸ್ಪಷ್ಟವಾಗಿ ನಿಗದಿಯಾಗಿಲ್ಲವಾದರೂ ಕೆಲ ಮೂಲಗಳ ಪ್ರಕಾರ ಒಂದು ಡೋಸ್ ಲಸಿಕೆಗೆ ₹100 ನಿಗದಿಪಡಿಸುವ ಸಾಧ್ಯತೆ ಇದೆ.

ಭಾರತದ ಮಟ್ಟಿಗೆ ಈ ಲಸಿಕೆಗಳು ಅನುಕೂಲಕರ ಈ ಎರಡೂ ಲಸಿಕೆಗಳನ್ನು 2ರಿಂದ 8 ಡಿಗ್ರಿ ಸೆಲ್ಸಿಯಸ್​ ತಾಪಮಾನದಲ್ಲಿ ಶೇಖರಿಸಿಡಬಹುದಾಗಿದೆ. ಈ ಕಾರಣದಿಂದ ಭಾರತದಲ್ಲಿ ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಬಳಕೆ ಅನುಕೂಲಕರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸೆರಮ್​ ಸಂಸ್ಥೆ ಕೊವಿಶೀಲ್ಡ್​ ಲಸಿಕೆಗೆ ಅನುಮತಿ ನೀಡುವಂತೆ ಕೋರಿ ಡಿಸೆಂಬರ್​ 6ರಂದು ಭಾರತೀಯ ಔಷಧ ನಿಯಂತ್ರಣಾ ಮಂಡಳಿಗೆ (DCGI) ಮನವಿ ಮಾಡಿತ್ತು. ಇತ್ತ ಭಾರತ್​ ಬಯೋಟೆಕ್​ ಅದರ ಮರುದಿನವೇ (ಡಿ.7) ಕೊವ್ಯಾಕ್ಸಿನ್​ ಲಸಿಕೆಗೆ ಒಪ್ಪಿಗೆ ನೀಡುವಂತೆ DCGIಗೆ ಕೋರಿಕೆ ಸಲ್ಲಿಸಿತ್ತು.

ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳಲ್ಲಿ ಕೆಲ ಸಾಮ್ಯತೆಗಳಿದ್ದು ಈ ಎರಡೂ ಲಸಿಕೆಗಳು ದೇಹದಲ್ಲಿ ಪ್ರತಿಕಾಯ ಹುಟ್ಟುಹಾಕುವ ಮತ್ತು ವೈರಾಣುಗಳ ಶಕ್ತಿಯನ್ನು ಕುಗ್ಗಿಸುವ ಸಾಮರ್ಥ್ಯ ಹೊಂದಿವೆ. ಆದರೆ, ವಿದೇಶಿ ಮೂಲದ ಫೈಜರ್​-ಬಯೋಎನ್​ಟೆಕ್ ಸಂಸ್ಥೆಯ ಕೊರೊನಾ ಲಸಿಕೆ mRNA ತಂತ್ರಜ್ಞಾನದ ಮೇಲೆ ಅವಲಂಬಿತವಾಗಿದೆ.

ಈ ಎರಡು ಲಸಿಕೆಗಳಲ್ಲದೇ ಭಾರತದಲ್ಲಿ ಜೈಡಸ್​ ಕ್ಯಾಡಿಲಾ ಸಂಸ್ಥೆಯ ಜೈಕೊವ್​-ಡಿ ಮತ್ತು ರಷ್ಯಾದ ಸ್ಪುಟ್ನಿಕ್-ವಿ ಕೊರೊನಾ ಲಸಿಕೆಗಳು ಅನುಮತಿ ಗಿಟ್ಟಿಸಿಕೊಳ್ಳಲು ಸರತಿಯಲ್ಲಿ ನಿಂತಿವೆ. ಇನ್ನು ಮಾಡೆರ್ನಾ ಮತ್ತು ಫೈಜರ್​-ಬಯೋಎನ್​ಟೆಕ್​ ಲಸಿಕೆಗಳು ಸಹ ಭಾರತದ ಮಾರುಕಟ್ಟೆಗೆ ಕಾಲಿಡುವ ಸಾಧ್ಯತೆ ದಟ್ಟವಾಗಿದ್ದು, ಪ್ರಧಾನ ಮಂತ್ರಿಗಳು ಇಂದು ಹೇಳಿರುವ ಮಾತು ಇನ್ನಷ್ಟು ಪುಷ್ಠಿ ನೀಡಿದೆ.

ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು

Published On - 7:08 pm, Mon, 11 January 21

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?