AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್​​ನ್ನು ಬೆಂಗಳೂರಿಗೆ ಕರೆತಂದ ಐಎಫ್​​ಎಸ್​​​ಒ

ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸ್ ವಿಶೇಷ ಸೆಲ್​​ಗೆ ನೀಡಿದ ಪೊಲೀಸ್ ರಿಮಾಂಡ್ ಪ್ರಶ್ನಿಸಿ ಜುಬೇರ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್​​ನ್ನು ಬೆಂಗಳೂರಿಗೆ ಕರೆತಂದ ಐಎಫ್​​ಎಸ್​​​ಒ
ಮೊಹಮ್ಮದ್ ಜುಬೇರ್
TV9 Web
| Edited By: |

Updated on:Jun 30, 2022 | 2:41 PM

Share

ಆಲ್ಟ್ ನ್ಯೂಸ್ (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohd Zubair) ಅವರನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕ ಬೆಂಗಳೂರಿಗೆ ಕರೆತಂದಿದೆ. ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸ್ ವಿಶೇಷ ಸೆಲ್​​ಗೆ ನೀಡಿದ ಪೊಲೀಸ್ ರಿಮಾಂಡ್ ಪ್ರಶ್ನಿಸಿ ಜುಬೇರ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜುಬೇರ್  ಅವರ ವಕೀಲರು ಇಂದು ದೆಹಲಿ ಹೈಕೋರ್ಟ್‌ನ ರಜಾಕಾಲದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. ಪ್ರಸ್ತಾಪಕ್ಕೆ ಅವಕಾಶ ನೀಡಲಾಗಿದ್ದು, ನಾಳೆ ವಿಚಾರಣೆ ನಡೆಯಲಿದೆ. ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಅನ್ನು ಮರುಪಡೆಯಲು ಬೆಂಗಳೂರಿನ ನಿವಾಸಕ್ಕೆ ಕರೆದೊಯ್ಯುವುದಕ್ಕಾಗಿ ದೆಹಲಿ ನ್ಯಾಯಾಲಯವು ಮಂಗಳವಾರ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

2018 ರಲ್ಲಿ ಮಾಡಿದ ಟ್ವೀಟ್‌ಗಾಗಿ ಸೋಮವಾರ ಬಂಧಿಸಲ್ಪಟ್ಟ ಜುಬೇರ್ ಅವರನ್ನು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರ ಮುಂದೆ ಹಾಜರುಪಡಿಸಲಾಯಿತು ಅವರು ಆರೋಪಿಗಳ ಹೆಚ್ಚಿನ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರ ಮನವಿಯನ್ನು ಅನುಮತಿಸಿದರು.

ಜುಬೇರ್ ಅವರ 2018 ರ ಟ್ವೀಟ್ ಅನ್ನು ಫ್ಲ್ಯಾಗ್ ಮಾಡಿದ್ದ ಟ್ವಿಟರ್ ಹ್ಯಾಂಡಲ್ ಡಿಲೀಟ್

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಬಂಧನಕ್ಕೆ ಕಾರಣವಾದ ಅನಾಮಧೇಯ ಟ್ವಿಟರ್ ಹ್ಯಾಂಡಲ್ ಈಗ ಡಿಲೀಟ್ ಆಗಿದೆ. ಜುಬೈರ್ ಅವರ ಟ್ವೀಟ್ ವಿಷಯವನ್ನು ಎತ್ತಿದ್ದ ಟ್ವಿಟರ್ ಹ್ಯಾಂಡಲ್ ಅಳಿಸಲ್ಪಟ್ಟಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿವೆ. “ನಾವು ಟ್ವಿಟ್ಟರ್ ಖಾತೆಯ ಬಳಕೆದಾರರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಖಾತೆಯನ್ನು ಅಳಿಸುವುದರ ಹಿಂದಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ವಿಷಯ ಬೆಳಕಿಗೆ ಬಂದ ನಂತರ ವ್ಯಕ್ತಿಯು ಹೆದರಿಕೊಂಡಿರಬಹುದು ಎಂದು ಮೂಲವೊಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಹಿಂದೂ ದೇವತೆಯ ವಿರುದ್ಧ ಜುಬೈರ್ ಮಾಡಿದ 2018 ಟ್ವೀಟ್ ಅನ್ನು ಫ್ಲ್ಯಾಗ್ ಮಾಡಿದ ಟ್ವಿಟರ್ ಹ್ಯಾಂಡಲ್‌ನ ಫಾಲೋವರ್ ಗಳ ಸಂಖ್ಯೆ ಒಂದು ರಾತ್ರಿಯಲ್ಲಿ 1,200 ದಾಟಿದೆ.

“ಹನುಮಾನ್ ಭಕ್ತ @balajikijaiiin ಎಂಬ ಟ್ವಿಟರ್ ಹ್ಯಾಂಡಲ್ ಮೊಹಮ್ಮದ್ ಜುಬೈರ್ @zoo_bear ಹೆಸರಿನಲ್ಲಿ ಟ್ವಿಟರ್ ಹ್ಯಾಂಡಲ್ ಮಾಡಿರುವ ಟ್ವೀಟ್ ನ್ನು ಹಂಚಿಕೊಂಡಿತ್ತು. ಅದರಲ್ಲಿ ಜುಬೈರ್ ಅವರು ‘2014 ರ ಮೊದಲು: ಹನಿಮೂನ್ ಹೋಟೆಲ್. 2014 ರ ನಂತರ: ಹನುಮಾನ್ ಹೋಟೆಲ್’ ಎಂದು ಟ್ವೀಟ್ ಮಾಡಿದ್ದಾರೆ. “ಹನಿಮೂನ್ ಹೋಟೆಲ್” ಹೆಸರಿನ ಹೋಟೆಲ್‌ನ ಸೈನ್‌ಬೋರ್ಡ್‌ನ ಚಿತ್ರವನ್ನು “ಹನುಮಾನ್ ಹೋಟೆಲ್” ಎಂದು ಬದಲಾಯಿಸಲಾಗಿದೆ ಎಂದು ಎಫ್‌ಐಆರ್​​​ನಲ್ಲಿದೆ.

ಎಫ್ಐಆರ್ ಪ್ರಕಾರ @balajikijaiiin ಈ ರೀತಿ ಟ್ವೀಟ್ ಮಾಡಿದ್ದಾರೆ. ನಮ್ಮ ದೇವರು ಹನುಮಾನ್ ಜಿಯನ್ನು ಹನಿಮೂನ್‌ನೊಂದಿಗೆ ಲಿಂಕ್ ಮಾಡುವುದು ಹಿಂದೂಗಳಿಗೆ  ಅವಮಾನವಾಗಿದೆ. ಏಕೆಂದರೆ ಅವನು ಬ್ರಹ್ಮಚಾರಿ, ದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಿ.

ದೆಹಲಿ ನ್ಯಾಯಾಲಯವು ಮಂಗಳವಾರ ಜುಬೈರ್‌ನ ಕಸ್ಟಡಿಯಲ್ ವಿಚಾರಣೆಯನ್ನು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. 2018 ರಲ್ಲಿ ಪೋಸ್ಟ್ ಮಾಡಿದ ಅವರ ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಫ್ಯಾಕ್ಟ್ ಚೆಕಿಂಗ್ ವೆಬ್‌ಸೈಟ್‌ನ ಸಹ-ಸಂಸ್ಥಾಪಕ ಜುಬೇರ್​​ನ್ನು  ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

Published On - 2:08 pm, Thu, 30 June 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು