AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amar Jawan Jyoti: ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನವಾಗಲಿದೆ ಅಮರ್ ಜವಾನ್ ಜ್ಯೋತಿ

Amar Jawan Jyoti: ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನ ಮಾಡುತ್ತಿದ್ದೇವೆ. ಅಮರ ಸೈನಿಕರ ಜ್ಯೋತಿ ಯುದ್ಧ ಸ್ಮಾರಕದಲ್ಲಿ ಉರಿಯಲಿದೆ ಎಂದು ಈ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಹಾಗೂ ಜ್ಯೋತಿಯನ್ನು ಆರಿಸುತ್ತಿಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದೆ.

Amar Jawan Jyoti: ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನವಾಗಲಿದೆ ಅಮರ್ ಜವಾನ್ ಜ್ಯೋತಿ
ಅಮರ್ ಜವಾನ್ ಜ್ಯೋತಿ
TV9 Web
| Edited By: |

Updated on:Jan 21, 2022 | 12:05 PM

Share

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ನಿಮ್ಮ ಕಣ್ಣಮುಂದೆಯೇ ಇರಬಹುದು. ನೆನಪಿಸಿಕೊಂಡರೆ ಆ ಚಿತ್ರ ಹಾಗೇ ಪಟ್ಟನೆ ಬರಬಹುದು. ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವ ಸೂಚಕವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ (Amar Jawan Jyoti) ಇನ್ನು ಮುಂದೆ ಆ ಸ್ಥಳದಲ್ಲಿ ಕಾಣಸಿಗುವುದಿಲ್ಲ. ಗಣರಾಜ್ಯೋತ್ಸವಕ್ಕೆ (Republic Day) ಕೆಲವೇ ದಿನಗಳಿರುವ ವೇಳೆ ಈ ಹೊಸ ಬೆಳವಣಿಗೆಯೊಂದು ಘಟಿಸಲಿದೆ.

ಅಮರ್ ಜವಾನ್ ಜ್ಯೋತಿಯ ಸಮೀಪದಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕ (National War Memorial Flame) ಜ್ಯೋತಿಯಲ್ಲಿ ಅಮರ್ ಜವಾನ್ ಜ್ಯೋತಿ ಲೀನವಾಗಲಿದೆ. ಅಮರ್ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಲೀನ ಮಾಡುತ್ತಿದ್ದೇವೆ. ಅಮರ ಸೈನಿಕರ ಜ್ಯೋತಿ ಯುದ್ಧ ಸ್ಮಾರಕದಲ್ಲಿ ಉರಿಯಲಿದೆ ಎಂದು ಈ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಹಾಗೂ ಜ್ಯೋತಿಯನ್ನು ಆರಿಸುತ್ತಿಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದೆ.

ಶುಕ್ರವಾರ (ಜನವರಿ 21) ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಸಮಗ್ರ ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ, ಏರ್ ಮಾರ್ಷಲ್ ಬಲಭದ್ರ ರಾಧಾಕೃಷ್ಣ ಸಮ್ಮುಖದಲ್ಲಿ ಈ ಕಾರ್ಯ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ಇರುವ ಸಂದರ್ಭ ಅಮರ ಸೈನಿಕರಿಗೆ ಎರಡು ಪ್ರತ್ಯೇಕ ಜ್ಯೋತಿ ಸರಿ ಕಾಣುವುದಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲದೆ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಈಗಾಗಲೇ ಇಂಡಿಯಾ ಗೇಟ್ ನಲ್ಲಿ ಕೆತ್ತಲಾಗಿರುವ ಹುತಾತ್ಮರ ಹೆಸರುಗಳನ್ನೂ ಸಹ ಹೊಂದಿದೆ. ಅದರೊಂದಿಗೆ 1947-48ರ ಪಾಕಿಸ್ತಾನದೊಂದಿಗಿನ ಯುದ್ಧದಿಂದ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯವರೆಗೆ ವಿವಿಧ ಕಾರ್ಯಾಚರಣೆಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಕ್ಷಣಾ ಸಿಬ್ಬಂದಿಯ ಹೆಸರು, ಭಯೋತ್ಪಾದಕ ವಿರೋಧಿ ಚಟುವಟಿಕೆಯಲ್ಲಿ ಹುತಾತ್ಮರಾದ ಸೈನಿಕರ ಹೆಸರನ್ನೂ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗಿದೆ.

ಇದನ್ನೂ ಓದಿ: ಸೈನಿಕರ ನೆನಪಿಗೆ ದಾವಣಗೆರೆಯಲ್ಲಿ ನಿರ್ಮಾಣವಾಗುತ್ತಿದೆ ಅಮರ್ ಜವಾನ್ ಪಾರ್ಕ್

ಇದನ್ನೂ ಓದಿ: ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು

Published On - 12:04 pm, Fri, 21 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ