AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarawati Andhra Capital: ನೂತನ ನಗರ ಅಮರಾವತಿಯೇ ಆಂಧ್ರ ಪ್ರದೇಶದ ರಾಜಧಾನಿ -ಆಂಧ್ರ ಹೈಕೋರ್ಟ್​ ಅಂತಿಮ ತೀರ್ಪು

ನೂತನ ನಗರ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ. ಮಾಸ್ಟರ್ ಪ್ಲಾನ್ ನಲ್ಲಿ ಏನಿದೆಯೋ ಅದನ್ನು ಅನುಷ್ಠಾನಗೊಳಿಸಬೇಕು. ಕಾಲಕಾಲಕ್ಕೆ ಅಭಿವೃದ್ಧಿ ಕಾಮಗಾರಿಗಳ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಂಧ್ರ ಹೈಕೋರ್ಟ್ ಸೂಚಿಸಿದೆ. ಭೂಮಿ ನೀಡಿದ ರೈತರಿಗೆ 3 ತಿಂಗಳಲ್ಲಿ ಪರ್ಯಾಯ ಭೂಮಿ ನೀಡಬೇಕು ಎಂದೂ ಸರ್ಕಾರಕ್ಕೆ ತಾಕೀತು ಮಾಡಿದೆ.

Amarawati Andhra Capital: ನೂತನ ನಗರ ಅಮರಾವತಿಯೇ ಆಂಧ್ರ ಪ್ರದೇಶದ ರಾಜಧಾನಿ -ಆಂಧ್ರ ಹೈಕೋರ್ಟ್​ ಅಂತಿಮ ತೀರ್ಪು
ನೂತನ ನಗರ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ
TV9 Web
| Updated By: ಸಾಧು ಶ್ರೀನಾಥ್​|

Updated on:Mar 03, 2022 | 5:06 PM

Share

ಹೈದರಾಬಾದ್: ನೂತನ ನಗರವಾಗಿ ನಿರ್ಮಾಣವಾಗಲಿರುವ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ. ಇದೇ ಅಂತಿಮ ಎಂದು ಆಂಧ್ರ ಹೈಕೋರ್ಟ್​ ತನ್ನ ಅಂತಿಮ ತೀರ್ಪು ಪ್ರಕಟಿಸಿದೆ. ಆದರೆ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ (YS Jagan Mohan Reddy) ಮೂರು ರಾಜಧಾನಿಗಳನ್ನು ಹೊಂದುವ ಆಶಯವಿತ್ತು. ಅಮರಾವತಿ ಶಾಸಕಾಂಗ ರಾಜಧಾನಿ (Legislative Capital), ವಿಶಾಖಪಟ್ಟಣಂ ಕಾರ್ಯಾಂಗ ರಾಜಧಾನಿ (Executive) ಮತ್ತು ಕರ್ನೂಲ್ ನ್ಯಾಯಾಂಗ (Judiciary) ರಾಜಧಾನಿ ಆಗಬೇಕೆಂದು ರಾಜ್ಯ ಸರ್ಕಾರ ಬಯಸಿತ್ತು. ಒಂದು ರಾಜ್ಯಕ್ಕೆ ಮೂರು ರಾಜಧಾನಿಗಳಿರಲು ಸಾಧ್ಯವಿಲ್ಲ ಎಂದು ಆಂಧ್ರ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಇತಿಶ್ರೀ ಹಾಡಿದೆ. ಅಮರಾವತಿಯೇ ರಾಜಧಾನಿಯಾಗಿರಲಿದೆ ಎಂದು ತೀರ್ಪು ನೀಡಿದೆ (Amarawati Andhra Pradesh Capital City).

ಅಮರಾವತಿಯಿಂದ ಯಾವುದೇ ಕಚೇರಿ ಸ್ಥಳಾಂತರ ಮಾಡದಂತೆ ಆದೇಶಿಸಿರುವ ಆಂಧ್ರ ಹೈಕೋರ್ಟ್, ಪ್ರಕರಣದಲ್ಲಿ ಎಲ್ಲಾ ಅರ್ಜಿದಾರರಿಗೆ ವೆಚ್ಚವಾಗಿ 50,000 ರೂ. ಪಾವತಿಸುವಂತೆ ಸೂಚಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಒಪ್ಪಂದದಂತೆ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಲು ಆದೇಶಿಸಲಾಗಿದೆ.

ಮಾಸ್ಟರ್ ಪ್ಲಾನ್ ನಲ್ಲಿ ಏನಿದೆಯೋ ಅದನ್ನು ಅನುಷ್ಠಾನಗೊಳಿಸಬೇಕು. ಕಾಲಕಾಲಕ್ಕೆ ಅಭಿವೃದ್ಧಿ ಕಾಮಗಾರಿಗಳ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಭೂಮಿ ನೀಡಿದ ರೈತರಿಗೆ 3 ತಿಂಗಳಲ್ಲಿ ಪರ್ಯಾಯ ಭೂಮಿ ನೀಡಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿರುವ ಆಂಧ್ರ ಹೈಕೋರ್ಟ್ ಎಲ್ಲ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಿದ ನಿವೇಶನಗಳನ್ನು 3 ತಿಂಗಳೊಳಗೆ ಜಮೀನು ನೀಡಿದ ರೈತರಿಗೆ ಹಸ್ತಾಂತರಿಸಬೇಕು ಎಂದಿದೆ. ಅಧೀನಕ್ಕೆ ಪಡೆದ ಭೂಮಿಯನ್ನು ರಾಜಧಾನಿ ಅಭಿವೃದ್ಧಿಗಾಗಿ ಮಾತ್ರ ಬಳಕೆ ಮಾಡಬೇಕು. ಇತರ ಕಾರಣಗಳಿಗಾಗಿ ಯಾವುದೇ ಕಾರಣಕ್ಕಾಗಿ ಉಪಯೋಗಿಸುವಂತಿಲ್ಲ ಎಂದೂ ಸ್ಪಷ್ಟಮಾಡಿದೆ.

Also Read: Dabaspet: ದಾಬಸ್ ​ಪೇಟೆ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ, ತಂದೆ-ಮಗಳು ಸಾವು

Also Read: ಕಾಫಿನಾಡಿನಲ್ಲಿ ಆನೆಗಳಿಂದ ಬೆಳೆಗಳನ್ನು ಉಳಿಸಲು ಗಿಡಗಳಿಗೆ ಮೈಕ್ ಸೆಟ್, ಡಿಜೆ ಸಿಸ್ಟಮ್ ಅಳವಡಿಸಿದ ರೈತರು!

Published On - 4:50 pm, Thu, 3 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ