AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ

ದೆಹಲಿ ಚಲೋ ಕೇವಲ ಪಂಜಾಬ್​ನ ಆರ್ಥಿಕತೆಗಷ್ಟೇ ಅಲ್ಲದೇ  ದೇಶದ ಭದ್ರತೆಗೇ ಸವಾಲಾಗಬಹುದು. ಸರ್ಕಾರ ಮತ್ತು ರೈತರು ತಕ್ಷಣ ಸಮಸ್ಯೆ ಪರಿಹರಿಸಬೇಕು ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದಾರೆ.

ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ
ಅಮಿತ್ ಶಾ ಮತ್ತು ಅಮರಿಂದರ್ ಸಿಂಗ್
guruganesh bhat
|

Updated on:Dec 05, 2020 | 11:25 AM

Share

ದೆಹಲಿ: ದೆಹಲಿ ಚಲೋ ಸದ್ಯಕ್ಕೆ ಕೇವಲ ಪಂಜಾಬ್​ನ ಆರ್ಥಿಕತೆಗಷ್ಟೇ ಅಲ್ಲ; ಮುಂದೆ ದೇಶದ ಭದ್ರತೆಗೇ ಸವಾಲಾಗಬಹುದು. ತಕ್ಷಣ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರ ಮತ್ತು ರೈತ ನಾಯಕರಿಗೆ ಮನವಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತ್ತು ಪಂಜಾಬ್ ರೈತರ ನಡುವಿನ ಶೀತಲ ಸಮರವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಬ್ಬರೂ ಯೋಚಿಸಬೇಕು. ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಮೊದಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಸ್ಯೆ ಕೊನೆಗಾಣಿಸಲು ಮನವಿ ಇಂದು ಕೇಂದ್ರ ಮತ್ತು ರೈತರ ನಡುವೆ ಮಾತುಕತೆ ನಡೆಯಲಿದೆ. ಗೃಹ ಸಚಿವರ ಬಳಿ ರೈತರ ಸಮಸ್ಯೆಯನ್ನು ಕೊನೆಗಾಣಿಸುವಂತೆ ಮನವಿ ಮಾಡಿದ್ದೇನೆ. ದೆಹಲಿ ಚಲೋದಿಂದ ಪಂಜಾಬ್​ನ ಆರ್ಥಿಕತೆ ಬಿಗಡಾಯಿಸುವ ಸಾಧ್ಯತೆಯಿದೆ. ಅಲ್ಲದೇ, ದೇಶದ ಭದ್ರತೆಗೂ ಗಂಭೀರ ಪರಿಣಾಮ ಬೀರಲಿದೆ ಎಂದು ಮನವಿ ಮಾಡಿದ್ದಾಗಿ ತಿಳಿಸಿದರು.

ಪದ್ಮ ವಿಭೂಷಣ ಗೌರವ ಹಿಂದಿರುಗಿಸಿದ ಬಾದಲ್: ಈ ಬೆನ್ನಲ್ಲೇ ಕೇಂದ್ರ ಸರ್ಕಾರ ತರ ಹೊರಟಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಪದ್ಮವಿಭೂಷಣ ಗೌರವ ಹಿಂದಿರುಗಿಸಿದ್ದಾರೆ.

Published On - 1:46 pm, Thu, 3 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ