AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarinder Singh: ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಯುವ ಮಾತೇ ಇಲ್ಲ, ಆ ಕಾಲ ಮುಗಿದಿದೆ; ಅಮರೀಂದರ್ ಸಿಂಗ್ ಸ್ಪಷ್ಟನೆ

ನಾನು ಇನ್ನೂ ಕಾಂಗ್ರೆಸ್​ನೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂಬುದು ಸುಳ್ಳು. ಪಕ್ಷದೊಂದಿಗಿನ ಹೊಂದಾಣಿಕೆಯ ಸಮಯ ಮುಗಿದಿದೆ ಎಂದು ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಹೇಳಿದ್ದಾರೆ.

Amarinder Singh: ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಯುವ ಮಾತೇ ಇಲ್ಲ, ಆ ಕಾಲ ಮುಗಿದಿದೆ; ಅಮರೀಂದರ್ ಸಿಂಗ್ ಸ್ಪಷ್ಟನೆ
ಅಮರಿಂದರ್ ಸಿಂಗ್​
TV9 Web
| Edited By: |

Updated on:Oct 30, 2021 | 6:47 PM

Share

ಚಂಡೀಗಢ: ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬ ವದಂತಿಯನ್ನು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ. ನಾನು ಇನ್ನೂ ಕಾಂಗ್ರೆಸ್​ನೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂಬುದು ಸುಳ್ಳು. ಪಕ್ಷದೊಂದಿಗಿನ ಹೊಂದಾಣಿಕೆಯ ಸಮಯ ಮುಗಿದಿದೆ. ಇಷ್ಟರವರೆಗೆ ಸೋನಿಯಾ ಗಾಂಧಿ ಅವರ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ, ಇನ್ನು ಕಾಂಗ್ರೆಸ್‌ ಪಕ್ಷದಲ್ಲಿ ಉಳಿಯುವ ಮಾತೇ ಇಲ್ಲ ಎಂದು ಅವರು ಹೇಳಿದ್ದಾರೆ.

ಅಮರೀಂದರ್ ಸಿಂಗ್ ಪಂಜಾಬ್​ನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ, ಅಗತ್ಯವಿದ್ದರೆ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳಲು ಕೂಡ ಸಿದ್ಧವಿರುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಅಮರಿಂದರ್ ಸಿಂಗ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮತಗಳು ವಿಭಜನೆಯಾಗುವ ಭೀತಿಯಿಂದ ಕಾಂಗ್ರೆಸ್ ಪಕ್ಷದ ಒಳಗಿನ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಅಮರೀಂದರ್ ಸಿಂಗ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಕಾಂಗ್ರೆಸ್​ ನಾಯಕರಿಗೆ ಇಷ್ಟವಿಲ್ಲ ಎಂದು ಪತ್ರಿಕೆ ವರದಿ ಮಾಡಿತ್ತು. ಹಾಗೇ, ಕಾಂಗ್ರೆಸ್​ನಿಂದ ಟಿಕೆಟ್ ನಿರಾಕರಿಸಲಾದ ಅತೃಪ್ತ ಕಾಂಗ್ರೆಸ್ ನಾಯಕರನ್ನು ಅಮರೀಂದರ್ ಸಿಂಗ್ ತಮ್ಮ ಹೊಸ ಪಕ್ಷದತ್ತ ಸೆಳೆಯುವ ಸಾಧ್ಯತೆಯಿದೆ ಎನ್ನಲಾಗಿತ್ತು.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೊಸ ಪಕ್ಷದ ಯೋಜನೆಗಳನ್ನು ಘೋಷಿಸುವಾಗ, ಅನೇಕ ನಾಯಕರು ಈಗಾಗಲೇ ತನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಸೂಕ್ತ ಸಮಯ ಬಂದಾಗ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದರು. ತಮ್ಮ ಹೊಸ ಪಕ್ಷವು ಪಂಜಾಬ್‌ನ ಎಲ್ಲಾ 117 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಚನೆ ಮಾಡಿದೆ. ಹಾಗೇ, ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ಚರ್ಚಿಸುತ್ತಿದೆ ಎಂದು ಕೂಡ ಅವರು ಹೇಳಿದ್ದರು.

ಇದನ್ನೂ ಓದಿ: Amarinder Singh: ಕೃಷಿ ತಜ್ಞರ ಜೊತೆ ನಾಳೆ ಅಮರೀಂದರ್ ಸಿಂಗ್ ಅವರಿಂದ ಅಮಿತ್ ಶಾ ಭೇಟಿ

Amarinder Singh: ಅಮರೀಂದರ್ ಸಿಂಗ್ ಹೊಸ ಪಕ್ಷದ ಹೆಸರು ಪಂಜಾಬ್ ವಿಕಾಸ್ ಪಾರ್ಟಿ?; ಕಾಂಗ್ರೆಸ್​ಗೆ ಮತ್ತೊಂದು ಹೊಡೆತ

Published On - 6:47 pm, Sat, 30 October 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ