AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Politics: ಪಂಜಾಬ್​​ ಸಿಎಂ ಅಮರಿಂದರ್​ ಸಿಂಗ್​ ರಾಜೀನಾಮೆ?-ಬಿಜೆಪಿ ಹಾದಿಯನ್ನೇ ತುಳಿಯಿತಾ ಕಾಂಗ್ರೆಸ್​ !

ಮುಂದಿನ ಮುಖ್ಯಮಂತ್ರಿಗಳು ಯಾರು ಎಂಬ ಬಗ್ಗೆಯೂ ಊಹಾಪೋಹಗಳು ಹರಿದಾಡುತ್ತಿದ್ದು, ಸುನಿಲ್ ಜಖರ್, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಪ್ರತಾಪಸಿಂಹ ಬಾಜ್ವಾ ಹೆಸರು ಕೇಳಿಬರುತ್ತಿದೆ.

Punjab Politics: ಪಂಜಾಬ್​​ ಸಿಎಂ ಅಮರಿಂದರ್​ ಸಿಂಗ್​ ರಾಜೀನಾಮೆ?-ಬಿಜೆಪಿ ಹಾದಿಯನ್ನೇ ತುಳಿಯಿತಾ ಕಾಂಗ್ರೆಸ್​ !
ಅಮರಿಂದರ್ ಸಿಂಗ್​
TV9 Web
| Updated By: Lakshmi Hegde|

Updated on:Sep 18, 2021 | 3:54 PM

Share

ಚಂಡಿಗಢ್​: ಪಂಜಾಬ್​​ನ ಕಾಂಗ್ರೆಸ್​ ಸರ್ಕಾರದಲ್ಲಿ ಎದ್ದಿರುವ ಬಿಕ್ಕಟ್ಟು ಅದ್ಯಾಕೋ ಸರಿಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಅಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಮತ್ತು ನವಜೋತ್​ ಸಿಂಗ್​ ಸಿಧು ಅವರ ನಡುವಿನ ವಿವಾದ ಮುಗಿದಂತಿಲ್ಲ. ಈ ಮಧ್ಯೆ ಸಿಎಂ ಅಮರಿಂದರ್​ ಸಿಂಗ್​ ಅವರ ರಾಜೀನಾಮೆ ನೀಡುವಂತೆ ಕಾಂಗ್ರೆಸ್​ ಹೈಕಮಾಂಡ್​​ ಕೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಇಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಬಳಿಕ ನಿರ್ಧಾರ ಸ್ಪಷ್ಟವಾಗಲಿದೆ. 

ಪಂಜಾಬ್​​ ಮುಖ್ಯಮಂತ್ರಿಯನ್ನು ಬದಲಿಸುವಂತೆ ಅನೇಕ ಶಾಸಕರು ಹೈಕಮಾಂಡ್​ಗೆ ಒತ್ತಡ ಹೇರಿದ್ದಾರೆ. ಆದರೆ ಅಮರಿಂದರ್​ ಸಿಂಗ್​ ರಾಜೀನಾಮೆ ನೀಡಲು ಸಿದ್ಧರಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಇನ್ನೊಂದು ಮಾಹಿತಿ ಬಂದಿದೆ. ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತುಂಬ ಕ್ರೋಧಗೊಂಡಿದ್ದಾರೆ. ‘ಇಂಥ ಅವಮಾನ ಸಹಿಸಿಕೊಂಡು ಪಕ್ಷದಲ್ಲಿ ಇರಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹೇಳಿದ್ದಾರೆ ಎಂದು ಬಲವಾದ ಮೂಲಗಳಿಂದಲೇ ತಿಳಿದುಬಂದಿದೆ. ಸದ್ಯಕ್ಕಂತೂ ಎಲ್ಲರ ಗಮನ ಇಂದು ನಡೆಯಲಿರುವ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯ ಮೇಲೇ ನೆಟ್ಟಿದೆ.

ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಮತ್ತು ನವಜೋತ್​ ಸಿಂಗ್ ಸಿಧು ನಡುವೆ ಎರಡು ವರ್ಷಗಳಿಂದ ಸಂಘರ್ಷ ಇದ್ದೇ ಇದೆ. ನವಜೋತ್​ ಸಿಂಗ್​ ಸಿಧು ಸತತವಾಗಿ ಅಮರಿಂದರ್ ಸಿಂಗ್​ ವಿರುದ್ಧ ಟೀಕೆ ಮಾಡುತ್ತಲೇ ಬಂದಿದ್ದರು. ಇವರಿಬ್ಬರ ಜಗಳ ಎರಡು ತಿಂಗಳ ಹಿಂದೆ ತಾರಕ್ಕಕ್ಕೇರಿತ್ತು. ಬರುವ ವರ್ಷ ಫೆಬ್ರವರಿ-ಮಾರ್ಚ್​ ವೇಳೆಗೆ ಪಂಜಾಬ್​​ನಲ್ಲಿ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷದಲ್ಲಿ ಇಂಥ ಕಿತ್ತಾಟ ಒಳ್ಳೆಯದಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್​ ಹೈಕಮಾಂಡ್ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿಯಾಗಿ ಅಮರಿಂದರ್​ ಸಿಂಗ್​ ಮುಂದುವರಿಯಲಿ, ಹಾಗೇ, ನವಜೋತ್​ ಸಿಂಗ್ ಸಿಧು, ಪಂಜಾಬ್​ ಪ್ರಾದೇಶಿಕ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಲಿ ಎಂದು ಹೇಳಿತ್ತು. ಇನ್ನೇನು ಎಲ್ಲ ಸರಿಯಾಯ್ತು ಎಂದುಕೊಳ್ಳುತ್ತಿರುವ ಹೊತ್ತಲ್ಲಿ ಇದೀಗ ಮುಖ್ಯಮಂತ್ರಿ ಬದಲಾವಣೆ ಮಾತು ಬಲವಾಗಿ ಕೇಳಿಬರುತ್ತಿದೆ.

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್​? ವಿಧಾನಸಭೆ ಚುನಾವಣೆಯ ಹೊತ್ತಲ್ಲಿ ಬಿಜೆಪಿ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ದಿಢೀರ್​ ಎಂದು ಬದಲಾವಣೆ ಮಾಡುತ್ತಿದೆ. ಉತ್ತರಾಖಂಡ, ಕರ್ನಾಟಕ ಮತ್ತು ಇತ್ತೀಚೆಗೆ ಗುಜರಾತ್​ ಆ ಸಾಲಿಗೆ ಸೇರ್ಪಡೆಯಾಗಿವೆ. ಗುಜರಾತ್​​ನಲ್ಲಂತೂ ಇನ್ನೊಂದೇ ವರ್ಷ ಬಾಕಿ ಇರುವಾಗ ಮೊನ್ನೆ ತಾನೇ ವಿಜಯ್​ ರೂಪಾನಿಯವರನ್ನು ಕೆಳಗಿಳಿಸಿ, ಒಂದೇ ಬಾರಿ ಶಾಸಕರಾದ ಅನುಭವ ಇರುವ ಭೂಪೇಂದ್ರ ಪಟೇಲ್​ರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಇದೀಗ ಕಾಂಗ್ರೆಸ್​ ಕೂಡ ಪಂಜಾಬ್​​ನಲ್ಲಿ ಇದೇ ಮಾರ್ಗ ಅನುಸರಿಸಿದೆ. ಅಮರಿಂದರ್ ಸಿಂಗ್​ರನ್ನು ಕೆಳಗಿಳಿಸಲು ಒಂದು ವರ್ಗದ  ಶಾಸಕರ, ಕೆಲವು ಕಾಂಗ್ರೆಸ್​ ನಾಯಕರ ಒತ್ತಡ ಹೆಚ್ಚಾಗಿರುವುದರಿಂದ ಕಾಂಗ್ರೆಸ್ ಹೈಕಮಾಂಡ್​ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.

ಮುಂದಿನ ಮುಖ್ಯಮಂತ್ರಿ ಯಾರು? ಮೊನ್ನೆ ತಾನೆ ಒಲಿಂಪಿಕ್ಸ್​ ವಿಜೇತರಿಗೆ ಭರ್ಜರಿ ಔತಣ ಕೂಟ ನೀಡಿದ್ದ ಅಮರಿಂದರ್​ ಸಿಂಗ್​ ಇಂದು ರಾಜೀನಾಮೆ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಸ್ವತಃ ಅವರೇ ಪಕ್ಷ ಬಿಡಲೂ ಸಿದ್ಧರಾಗಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಇನ್ನು ಮುಂದಿನ ಮುಖ್ಯಮಂತ್ರಿಗಳು ಯಾರು ಎಂಬ ಬಗ್ಗೆಯೂ ಊಹಾಪೋಹಗಳು ಹರಿದಾಡುತ್ತಿದ್ದು, ಸುನಿಲ್ ಜಖರ್, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಪ್ರತಾಪಸಿಂಹ ಬಾಜ್ವಾ ಮತ್ತು ಬಿಯಾಂತ್ ಸಿಂಗ್ ಅವರ ಮೊಮ್ಮಗ, ಸಂಸದ ರಣನೀತ್ ಸಿಂಗ್ ಬಿಟ್ಟು ಅವರ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ಓದಿ: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!

Bigg Boss OTT Finale: ಬಿಗ್​ ಬಾಸ್​ ಓಟಿಟಿ ಫಿನಾಲೆಯ ಟಾಪ್​ 5ರಲ್ಲಿ ಶಮಿತಾ ಶೆಟ್ಟಿ; ಗೆದ್ದರೆ ಸಿಗುವ ಹಣವೆಷ್ಟು?

Published On - 2:15 pm, Sat, 18 September 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ