AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarinder Singh: ಕೃಷಿ ತಜ್ಞರ ಜೊತೆ ನಾಳೆ ಅಮರೀಂದರ್ ಸಿಂಗ್ ಅವರಿಂದ ಅಮಿತ್ ಶಾ ಭೇಟಿ

ನಾಳೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ನನ್ನೊಂದಿಗೆ 25-30 ಜನರು ಕೂಡ ಬರಲಿದ್ದಾರೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

Amarinder Singh: ಕೃಷಿ ತಜ್ಞರ ಜೊತೆ ನಾಳೆ ಅಮರೀಂದರ್ ಸಿಂಗ್ ಅವರಿಂದ ಅಮಿತ್ ಶಾ ಭೇಟಿ
ಅಮರೀಂದರ್ ಸಿಂಗ್- ಅಮಿತ್ ಶಾ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 27, 2021 | 8:32 PM

Share

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಗೆ ಸಂಭವನೀಯ ಪರಿಹಾರಗಳನ್ನು ಚರ್ಚಿಸಲು ನಾಳೆ (ಗುರುವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಕೆಲವು ಕೃಷಿ ತಜ್ಞರೊಂದಿಗೆ ನಾಳೆ ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

“ನಾಳೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ನನ್ನೊಂದಿಗೆ 25-30 ಜನರು ಕೂಡ ಬರಲಿದ್ದಾರೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ. ನಾನು ಪಂಜಾಬ್‌ನ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಕೃಷಿಕನಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ನಾಳೆ ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದರು. ಸಿಎಂ ಸ್ಥಾನದಿಂದ ಕೆಳಗಿಳದ ನಂತರ ಇದು ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಅವರ ಮೂರನೇ ಭೇಟಿಯಾಗಿದೆ.

ನಾನು ಈ ವಿಚಾರವಾಗಿ ಯಾವುದೇ ರೈತ ಮುಖಂಡರನ್ನು ಭೇಟಿ ಮಾಡಿಲ್ಲ ಎಂದು ಅಮರೀಂದರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಹಾಗೇ, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಿಎಂ ಅಮರೀಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಇಂದು ಘೋಷಿಸಿದ್ದಾರೆ. ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತೂ ಕ್ಯಾ. ಅಮರೀಂದರ್ ಸಿಂಗ್ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸುಳಿವು ನೀಡಿದ್ದಾರೆ.

ನಾನು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ. ನನ್ನ ವಕೀಲರು ಈ ಕುರಿತಂತೆ ಕೆಲಸದಲ್ಲಿ ತೊಡಗಿದ್ದಾರೆ. ಸಮಯ ಬಂದಾಗ 117 ವಿಧಾನಸಭಾ ಕ್ಷೇತ್ರಗಳಲ್ಲಿ ನಾವು ಸ್ಪರ್ಧಿಸುತ್ತೇವೆ. ಸೀಟು ಹಂಚಿಕೆ ಅಥವಾ ನಾವೇ ಸ್ವಂತವಾಗಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸುವುದೇ ಎಂದು ನೋಡಬೇಕು ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Amit Shah: ಗಡಿ ನಿರ್ಣಯ, ಚುನಾವಣೆ ಬಳಿಕ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಾಸ್; ಅಮಿತ್ ಶಾ ಭರವಸೆ

Amit Shah: ಶ್ರೀನಗರ- ಶಾರ್ಜಾ ನೇರ ವಿಮಾನ ಸೇವೆಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್ ಶಾ

Published On - 8:31 pm, Wed, 27 October 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ