AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Cloudburst: ಮೇಘಸ್ಫೋಟದಿಂದ ಬದುಕುಳಿದವರನ್ನು ಭೇಟಿ ಮಾಡಿದ ಜಮ್ಮು- ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶನಿವಾರ ಶ್ರೀನಗರದ ಶೇರ್-ಇ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (SKIMS) ಗೆ ಭೇಟಿ ನೀಡಿ ಅಮರನಾಥ ಗುಹೆಯ ಕೆಳಭಾಗದಲ್ಲಿ ನಿನ್ನೆ ಸಂಭವಿಸಿದ ಮೇಘಸ್ಫೋಟದ ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

Amarnath Cloudburst: ಮೇಘಸ್ಫೋಟದಿಂದ ಬದುಕುಳಿದವರನ್ನು ಭೇಟಿ ಮಾಡಿದ ಜಮ್ಮು- ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್
Lieutenant Governor
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 09, 2022 | 5:02 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶನಿವಾರ ಶ್ರೀನಗರದ ಶೇರ್-ಇ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (SKIMS) ಗೆ ಭೇಟಿ ನೀಡಿ ಅಮರನಾಥ ಗುಹೆಯ ಕೆಳಭಾಗದಲ್ಲಿ ನಿನ್ನೆ ಸಂಭವಿಸಿದ ಮೇಘಸ್ಫೋಟದ ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಅಮರನಾಥದ ಪವಿತ್ರ ದೇಗುಲದ ಬಳಿ ಮೋಡ ಕವಿದ ಘಟನೆಯಲ್ಲಿ ಸುಮಾರು 16 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಡಿಜಿ ಅತುಲ್ ಕರ್ವಾಲ್ ಶನಿವಾರ ಮಾಹಿತಿ ನೀಡಿದ್ದಾರೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಮತ್ತು ರಾಜ್ಯ ಪಡೆಗಳು ಸೇರಿದಂತೆ ಎಲ್ಲಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ. ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ನಿಖರವಾದ ಸಮಯವನ್ನು ಹೇಳುವುದು ಕಷ್ಟ ಎಂದು ಲೆಫ್ಟಿನೆಂಟ್ ಕರ್ನಲ್ ಸಚಿನ್ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು. ಇದುವರೆಗೆ 28 ​​ಗಾಯಾಳುಗಳು ಆಸ್ಪತ್ರೆ ದಾಖಲಿಸಿದ್ದು, ಕೆಲವರನ್ನು ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ. ವಾಯುಪಡೆ ಮತ್ತು ಸೇನಾ ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು 8 ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯದಲ್ಲಿವೆ ಎಂದು ಶರ್ಮಾ ತಿಳಿಸಿದ್ದಾರೆ.

ಇದನ್ನು ಓದಿ : ಭಾರೀ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೇದಾರನಾಥ ಯಾತ್ರೆ ಸ್ಥಗಿತ

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಬಾಲ್ಟಾಲ್‌ನಲ್ಲಿರುವಾಗ, ಅಮರನಾಥ ಗುಹೆಯಿಂದ ಸಂಗಮ್ ನೆಲೆಯ ಪಂಜತರ್ನಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲ್ಪಟ್ಟ ಜನರು ಭಾರತೀಯ ಸೇನೆಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಮಳೆ ಬಂದಾಗ ಸೇನೆಯು ನಮಗೆ ಸಾಕಷ್ಟು ಸಹಾಯ ಮಾಡಿತು. ಅವರು ಕೆಲವರನ್ನು ಬಾಲ್ಟಾಲ್‌ಗೆ ಮತ್ತು  ಪಂಜತರ್ನಿಗೆ ಕಳುಹಿಸಿದರು.  ನಮಗೆ ಸಾಕಷ್ಟು ಬೆಂಬಲ ನೀಡಿದ್ದಾರೆ ಮತ್ತು ಜನರನ್ನು ಗುಹೆಯಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರುಎಂದು ಬದುಕುಳಿದವರಲ್ಲಿ ಒಬ್ಬರು ANI ಗೆ ತಿಳಿಸಿದರು.

ಸೈನಿಕರು ನಮ್ಮನ್ನು ರಕ್ಷಿಸಿದ ರೀತಿ. ಅವರಿಗೆ ನಾನು ನಮಸ್ಕರಿಸುತ್ತೇನೆ ಎಂದು ವಯಸ್ಸಾದ ಮಹಿಳೆಯೊಬ್ಬರು ಹೇಳಿದರು. ಅಮರನಾಥದ ಪವಿತ್ರ ಗುಹೆ ಪ್ರದೇಶದಲ್ಲಿ ಶುಕ್ರವಾರ ಮೇಘಸ್ಫೋಟದ ಘಟನೆ ನಡೆದಿದ್ದು, ಪವಿತ್ರ ಗುಹೆಯ ಪಕ್ಕದಲ್ಲಿರುವ ‘ನಲ್ಲಾ’ದಲ್ಲಿ ಭಾರೀ ಪ್ರಮಾಣದ ನೀರು ಹೊರಹೋಗಿದೆ.

Published On - 5:01 pm, Sat, 9 July 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?