Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು

ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ.

Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು
ಅಮರನಾಥ ಯಾತ್ರೆ ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: Apr 11, 2022 | 4:23 PM

ಕೊವಿಡ್ 19 ಸಾಂಕ್ರಾಮಿಕದ ಕಾರಣ ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಕಳೆದ ಎರಡು ವರ್ಷಗಳಿಂದಲೂ ನಿರ್ಬಂಧ ವಿಧಿಸಲಾಗಿತ್ತು. ಕಳೆದ ವರ್ಷ ಎರಡು ಬಾರಿ ಮುಂದೂಡಿ ಮತ್ತೆ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು. ಆದರೆ ಈ ವರ್ಷ ಜೂನ್​ 30ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಆಗಸ್ಟ್​ 11ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್​ನಿಂದ ಯಾತ್ರೆ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಅದರ ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದ (ಏಪ್ರಿಲ್​ 11) ಶುರು ಮಾಡಲಾಗಿದೆ ಎಂದು ಅಮರನಾಥ ದೇವಾಲಯ ಮಂಡಳಿ ಸಿಇಒ ನಿತೀಶ್ವರ್ ಕುಮಾರ್ ತಿಳಿಸಿದ್ದಾರೆ. ಜೂನ್​ 30ರಿಂದ ಪ್ರಾರಂಭವಾಗಿ ಆಗಸ್ಟ್​ 11ವರೆಗೆ ಅಂದರೆ 43 ದಿನಗಳ ಕಾಲ ನಡೆಯುವ ಈ ಸುದೀರ್ಘ ಯಾತ್ರೆಗಾಗಿ ಭಕ್ತರು ಅಮರನಾಥ ದೇಗುಲದ ವೆಬ್​ಸೈಟ್​ನಲ್ಲಿ ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಯಲ್ಲಿ ಐದು ವಿಧಾನಗಳಿದ್ದು, ಅವು ಹೀಗಿವೆ: 1) ಮುಂಗಡ ಕಾಯ್ದಿರಿಸುವಿಕೆ 2)ಆನ್​ಲೈನ್​ ಮೂಲಕ ರಿಜಿಸ್ಟ್ರೇಶನ್​ 3)ಗ್ರೂಪ್​ ರಿಜಿಸ್ಟ್ರೇಶನ್​ 4)ಎನ್​ಆರ್​ಐ ನೋಂದಣಿ (ಭಾರತದ ನಿವಾಸಿಗಳು ಅಲ್ಲದವರಿಗೆ ನೋಂದಣಿ ಅವಕಾಶ) 5)ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ. 

13 ವರ್ಷ ಮೇಲ್ಪಟ್ಟು, 75 ವರ್ಷದ ಒಳಗಿನವರು ಯಾತ್ರೆಗಾಗಿ ವೆಬ್​ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದ್ದು ಅದಕ್ಕಾಗಿ ಮೊದಲು  ಮೊದಲು ಶ್ರೀ ಅಮರನಾಥಜಿ ದೇಗುಲ ಮಂಡಳಿ ವೆಬ್​ಸೈಟ್​ (SASB)ಗೆ ಭೇಟಿ ನೀಡಬೇಕು. ಅಲ್ಲಿ Registration for Amarnath Yatra 2022 ಎಂಬ ಲಿಂಕ್ ಕಾಣಿಸುತ್ತದೆ, ಅಲ್ಲಿ ಕ್ಲಿಕ್ ಮಾಡಿ ವಿವರಗಳನ್ನು ತುಂಬಬೇಕು. ವೈದ್ಯಕೀಯ ಪ್ರಮಾಣ ಪತ್ರ, ನಾಲ್ಕು ಪಾಸ್​ಪೋರ್ಟ್ ಅಳತೆಯ ಫೋಟೋಗಳೂ ಬೇಕಾಗುತ್ತವೆ. ಇನ್ನು ಗ್ರೂಪ್​ ನೋಂದಣಿ ಮಾಡಿಕೊಳ್ಳುವವರ ಗುಂಪಿನಲ್ಲಿ 5ಕ್ಕಿಂತ ಹೆಚ್ಚು ಮತ್ತು 50ಕ್ಕಿಂತಲೂ ಕಡಿಮೆ ಜನರು ಇರಬೇಕು.

ಇನ್ನು ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ. ಹಾಗೇ ಕುದುರೆಗಳ ಮೂಲಕ ಯಾತ್ರಿಗಳನ್ನು ಬೆಟ್ಟ ಹತ್ತಿಸುವವರಿಗೆ ವಿಮಾ ಅವಧಿಯನ್ನು ಒಂದು ವರ್ಷಕ್ಕೆ ಏರಿಸಲಾಗಿದೆ. ಅಷ್ಟೇ ಅಲ್ಲ, ಇನ್ಶೂರೆನ್ಸ್ ಹಣವನ್ನು 3 ಲಕ್ಷ ರೂ.ದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್