AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು

ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ.

Amarnath Yatra Registration 2022: ಜೂನ್​ 30ರಿಂದ ಅಮರನಾಥ ಯಾತ್ರೆ; ಯಾತ್ರಾರ್ಥಿಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರು
ಅಮರನಾಥ ಯಾತ್ರೆ ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 11, 2022 | 4:23 PM

Share

ಕೊವಿಡ್ 19 ಸಾಂಕ್ರಾಮಿಕದ ಕಾರಣ ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಕಳೆದ ಎರಡು ವರ್ಷಗಳಿಂದಲೂ ನಿರ್ಬಂಧ ವಿಧಿಸಲಾಗಿತ್ತು. ಕಳೆದ ವರ್ಷ ಎರಡು ಬಾರಿ ಮುಂದೂಡಿ ಮತ್ತೆ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು. ಆದರೆ ಈ ವರ್ಷ ಜೂನ್​ 30ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಆಗಸ್ಟ್​ 11ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್​ನಿಂದ ಯಾತ್ರೆ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಅದರ ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದ (ಏಪ್ರಿಲ್​ 11) ಶುರು ಮಾಡಲಾಗಿದೆ ಎಂದು ಅಮರನಾಥ ದೇವಾಲಯ ಮಂಡಳಿ ಸಿಇಒ ನಿತೀಶ್ವರ್ ಕುಮಾರ್ ತಿಳಿಸಿದ್ದಾರೆ. ಜೂನ್​ 30ರಿಂದ ಪ್ರಾರಂಭವಾಗಿ ಆಗಸ್ಟ್​ 11ವರೆಗೆ ಅಂದರೆ 43 ದಿನಗಳ ಕಾಲ ನಡೆಯುವ ಈ ಸುದೀರ್ಘ ಯಾತ್ರೆಗಾಗಿ ಭಕ್ತರು ಅಮರನಾಥ ದೇಗುಲದ ವೆಬ್​ಸೈಟ್​ನಲ್ಲಿ ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಯಲ್ಲಿ ಐದು ವಿಧಾನಗಳಿದ್ದು, ಅವು ಹೀಗಿವೆ: 1) ಮುಂಗಡ ಕಾಯ್ದಿರಿಸುವಿಕೆ 2)ಆನ್​ಲೈನ್​ ಮೂಲಕ ರಿಜಿಸ್ಟ್ರೇಶನ್​ 3)ಗ್ರೂಪ್​ ರಿಜಿಸ್ಟ್ರೇಶನ್​ 4)ಎನ್​ಆರ್​ಐ ನೋಂದಣಿ (ಭಾರತದ ನಿವಾಸಿಗಳು ಅಲ್ಲದವರಿಗೆ ನೋಂದಣಿ ಅವಕಾಶ) 5)ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ. 

13 ವರ್ಷ ಮೇಲ್ಪಟ್ಟು, 75 ವರ್ಷದ ಒಳಗಿನವರು ಯಾತ್ರೆಗಾಗಿ ವೆಬ್​ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದ್ದು ಅದಕ್ಕಾಗಿ ಮೊದಲು  ಮೊದಲು ಶ್ರೀ ಅಮರನಾಥಜಿ ದೇಗುಲ ಮಂಡಳಿ ವೆಬ್​ಸೈಟ್​ (SASB)ಗೆ ಭೇಟಿ ನೀಡಬೇಕು. ಅಲ್ಲಿ Registration for Amarnath Yatra 2022 ಎಂಬ ಲಿಂಕ್ ಕಾಣಿಸುತ್ತದೆ, ಅಲ್ಲಿ ಕ್ಲಿಕ್ ಮಾಡಿ ವಿವರಗಳನ್ನು ತುಂಬಬೇಕು. ವೈದ್ಯಕೀಯ ಪ್ರಮಾಣ ಪತ್ರ, ನಾಲ್ಕು ಪಾಸ್​ಪೋರ್ಟ್ ಅಳತೆಯ ಫೋಟೋಗಳೂ ಬೇಕಾಗುತ್ತವೆ. ಇನ್ನು ಗ್ರೂಪ್​ ನೋಂದಣಿ ಮಾಡಿಕೊಳ್ಳುವವರ ಗುಂಪಿನಲ್ಲಿ 5ಕ್ಕಿಂತ ಹೆಚ್ಚು ಮತ್ತು 50ಕ್ಕಿಂತಲೂ ಕಡಿಮೆ ಜನರು ಇರಬೇಕು.

ಇನ್ನು ಆನ್​ಲೈನ್​ ಮೂಲಕವಲ್ಲದೆ ಸಮೀಪದ ಬ್ಯಾಂಕ್ ಶಾಖೆಗಳಿಗೆ ಹೋಗಿ ನೋಂದಣಿ ಮಾಡಕೊಳ್ಳಬಹುದು. ಜಮ್ಮು-ಕಾಶ್ಮೀರ ಬ್ಯಾಂಕ್​, ಪಿಎನ್​ಬಿ ಬ್ಯಾಂಕ್​, ಯೆಸ್ ಬ್ಯಾಂಕ್​ ಮತ್ತು ಎಸ್​ಬಿಐ ಬ್ಯಾಂಕ್​​ನ 100 ಶಾಖೆ ಸೇರಿ ದೇಶಾದ್ಯಂತ ಒಟ್ಟು 446 ಶಾಖೆಗಳಲ್ಲಿ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ನಡೆಯುತ್ತದೆ. ಹಾಗೇ ಕುದುರೆಗಳ ಮೂಲಕ ಯಾತ್ರಿಗಳನ್ನು ಬೆಟ್ಟ ಹತ್ತಿಸುವವರಿಗೆ ವಿಮಾ ಅವಧಿಯನ್ನು ಒಂದು ವರ್ಷಕ್ಕೆ ಏರಿಸಲಾಗಿದೆ. ಅಷ್ಟೇ ಅಲ್ಲ, ಇನ್ಶೂರೆನ್ಸ್ ಹಣವನ್ನು 3 ಲಕ್ಷ ರೂ.ದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?