AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

ಭಾರತದ ಪ್ರಸಿದ್ಧ ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಅಮರನಾಥ ಯಾತ್ರೆಗೆ ದಿನಗಣನೆ ಶುರುವಾಗಿದೆ. ಅಮರನಾಥ ಯಾತ್ರೆಯ ಪ್ರದೇಶದಲ್ಲಿ ಭಯೋತ್ಪಾದಕ ದಾಳಿಗಳ ನಂತರ ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಅಧಿಕಾರಿಗಳು ಇಂದು ಪರಿಶೀಲಿಸಿದ್ದಾರೆ.

Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ
ಅಮರನಾಥ ಯಾತ್ರೆ
ಸುಷ್ಮಾ ಚಕ್ರೆ
|

Updated on: Jun 13, 2024 | 9:43 PM

Share

ನವದೆಹಲಿ: ವಾರ್ಷಿಕವಾಗಿ ನಡೆಯುವ ಅಮರನಾಥ ಯಾತ್ರೆಯು (Amarnath Yatra) ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿದ್ದು, ಇತ್ತೀಚಿನ ಭಯೋತ್ಪಾದಕ ದಾಳಿಗಳಿಗೆ (Terrorists Attack) ಪ್ರತಿಕ್ರಿಯೆಯಾಗಿ ಅಧಿಕಾರಿಗಳು ಇಂದು (ಗುರುವಾರ) ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಭಾರತೀಯ ರೈಲ್ವೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶೈಲೇಂದರ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಸರ್ಕಾರಿ ರೈಲ್ವೆ ಪೊಲೀಸ್, ಜಮ್ಮು ಮತ್ತು ಇತರ ಭದ್ರತಾ ಏಜೆನ್ಸಿಗಳ ಅಧಿಕಾರಿಗಳು ಭಾಗವಹಿಸಿದ್ದರು.

ಕಳೆದ ನಾಲ್ಕು ದಿನಗಳಲ್ಲಿ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಸತತ 4 ಭಯೋತ್ಪಾದಕ ದಾಳಿಗಳ ನಂತರ ಜಮ್ಮುವಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಈ ದಾಳಿಯಲ್ಲಿ 9 ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಜವಾನ ಸಾವನ್ನಪ್ಪಿದ್ದರು. 7 ಭದ್ರತಾ ಸಿಬ್ಬಂದಿ ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ಇದಲ್ಲದೆ, ಅಮರನಾಥ ಯಾತ್ರೆಯ ಸಮಯದಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರೈಲ್ವೆ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುವ ಬಗ್ಗೆ ಈ ಸಭೆಯು ಗಮನಹರಿಸಿದೆ ಎಂಬುದು ಗಮನಿಸಬೇಕಾದ ಸಂಗತಿ. ದಕ್ಷಿಣ ಕಾಶ್ಮೀರ ಹಿಮಾಲಯದ ಅಮರನಾಥದ 3,880 ಮೀಟರ್ ಎತ್ತರದ ಪವಿತ್ರ ಗುಹಾ ದೇಗುಲಕ್ಕೆ 52 ದಿನಗಳ ತೀರ್ಥಯಾತ್ರೆ ಜೂನ್ 29ರಂದು ಪ್ರಾರಂಭವಾಗುತ್ತದೆ.

ಇದನ್ನೂ ಓದಿ: PM Modi: ಇಟಲಿಯ ಜಿ7 ಶೃಂಗಸಭೆಗೆ ತೆರಳಿದ ನರೇಂದ್ರ ಮೋದಿ; 3ನೇ ಅವಧಿಯ ಮೊದಲ ವಿದೇಶ ಪ್ರವಾಸ

ಮೊದಲ ಬ್ಯಾಚ್ ಯಾತ್ರಿಕರು ಜಮ್ಮು ಬೇಸ್ ಕ್ಯಾಂಪ್‌ನಿಂದ ಕಣಿವೆಗೆ ಒಂದು ದಿನ ಮುಂಚಿತವಾಗಿ ಹೊರಡುತ್ತಾರೆ. ಜಮ್ಮು ರೈಲು ನಿಲ್ದಾಣದಲ್ಲಿ ಜಂಟಿ ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್