AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಅಮರನಾಥ ಯಾತ್ರೆ ಆರಂಭ; ಬಿಗಿ ಭದ್ರತೆಯ ನಡುವೆ ದರ್ಶನ ಪಡೆದ ಭಕ್ತರು

ವಾರ್ಷಿಕ ಅಮರನಾಥ ಯಾತ್ರೆ ಇಂದು ಪ್ರಾರಂಭವಾಯಿತು, ಯಾತ್ರಿಕರ ಮೊದಲ ತಂಡವು ಬಾಲ್ಟಾಲ್ ಮತ್ತು ನುನ್ವಾನ್‌ನಲ್ಲಿರುವ ಅವಳಿ ಮೂಲ ಶಿಬಿರಗಳಿಂದ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3880 ಮೀಟರ್ ಎತ್ತರದ ಗುಹಾ ದೇವಾಲಯದ ಕಡೆಗೆ ಹೊರಟಿತು. ಇದು ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗವನ್ನು ಹೊಂದಿರುವ ಗುಹೆಯಾಗಿದೆ.

ಇಂದಿನಿಂದ ಅಮರನಾಥ ಯಾತ್ರೆ ಆರಂಭ; ಬಿಗಿ ಭದ್ರತೆಯ ನಡುವೆ ದರ್ಶನ ಪಡೆದ ಭಕ್ತರು
Amarnath Yatra Today
ಸುಷ್ಮಾ ಚಕ್ರೆ
|

Updated on: Jul 03, 2025 | 7:44 PM

Share

ನವದೆಹಲಿ, ಜುಲೈ 3: ಇಂದಿನಿಂದ ಅಮರನಾಥ ಯಾತ್ರೆ (Amarnath Yatra) ಆರಂಭವಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಜಮ್ಮುವಿನಿಂದ ಬಂದ 5,892 ಯಾತ್ರಿಕರ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು. ಅಮರನಾಥ ಯಾತ್ರೆ ಎರಡು ಮಾರ್ಗಗಳ ಮೂಲಕ ಮುಂದುವರಿಯುತ್ತದೆ. ಒಂದು ಪಹಲ್ಗಾಮ್‌ನಿಂದ ಸಾಂಪ್ರದಾಯಿಕ 48 ಕಿಮೀ ಮಾರ್ಗ ಮತ್ತೊಂದು 14 ಕಿಮೀ ಕಡಿಮೆ ಉದ್ದದ ಬಾಲ್ಟಾಲ್ ಚಾರಣ. ಇಂದಿನಿಂದ ಶುರುವಾದ 38 ದಿನಗಳ ಈ ಯಾತ್ರೆ ಆಗಸ್ಟ್ 9ರಂದು ಕೊನೆಗೊಳ್ಳಲಿದೆ.

ಅಮರನಾಥ ಯಾತ್ರಿಕರ ಮೊದಲ ತಂಡವು ಬಾಲ್ಟಾಲ್ ಮತ್ತು ನುನ್ವಾನ್‌ನಲ್ಲಿರುವ ಅವಳಿ ಮೂಲ ಶಿಬಿರಗಳಿಂದ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3880 ಮೀಟರ್ ಎತ್ತರದ ಗುಹಾ ದೇವಾಲಯದ ಕಡೆಗೆ ಹೊರಟಿತು. ಇದು ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗವನ್ನು ಹೊಂದಿರುವ ಗುಹೆಯಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್‌ನ ಪಹಲ್ಗಾಮ್‌ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್ ಮತ್ತು ಮಧ್ಯ ಕಾಶ್ಮೀರದ ಗಂಡರ್‌ಬಾಲ್‌ನ ಸೋನಾಮಾರ್ಗ್ ಪ್ರದೇಶದ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಪುರುಷರು, ಮಹಿಳೆಯರು ಮತ್ತು ಸಾಧುಗಳು ಸೇರಿದಂತೆ ಯಾತ್ರಿಕರ ಗುಂಪುಗಳು ಬೆಳಗಿನ ಜಾವವೇ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಿಕರು ಇಂದು ಮಧ್ಯಾಹ್ನ ಕಾಶ್ಮೀರ ಕಣಿವೆಯನ್ನು ತಲುಪಿದರು. ಅವರಿಗೆ ಆಡಳಿತ ಮತ್ತು ಸ್ಥಳೀಯರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿತು.

ಇದನ್ನೂ ಓದಿ: ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ

ಅಮರನಾಥ ಯಾತ್ರೆಗೆ ಭದ್ರತೆಗಾಗಿ ಪೊಲೀಸರು, ಕೇಂದ್ರ ಮೀಸಲು ಪೊಲೀಸ್ ಪಡೆ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಇತರ ಅರೆಸೈನಿಕ ಪಡೆಗಳಿಂದ ಸಾವಿರಾರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡ್ರೋನ್ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!