Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on: Jun 21, 2021 | 5:39 PM

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ