AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2021 | 5:39 PM

Share

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!