AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2021 | 5:39 PM

Share

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು