AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2021 | 5:39 PM

Share

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?