AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

Amarnath Yatra 2021: ಈ ವರ್ಷ ಅಮರನಾಥ ಯಾತ್ರೆ ರದ್ದು; ಭಕ್ತರಿಗೆ ಆನ್​ಲೈನ್ ಮೂಲಕ ಆರತಿ ನೆರವೇರಿಸಲು ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Jun 21, 2021 | 5:39 PM

Share

ಕೊವಿಡ್ 19 ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು. ಇನ್ನು ಈಗಂತೂ ಜಮ್ಮು-ಕಾಶ್ಮೀರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಭದ್ರತೆ ಪರಿಶೀಲನೆಗಾಗಿ ಕಳೆದ ವಾರ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಜಮ್ಮು-ಕಾಶ್ಮೀರ ಲೆಫ್ಟಿನಂಟ್ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ದಳದ ಅಧಿಕಾರಿಗಳು, ಕೇಂದ್ರದ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್