AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra: ಪ್ರತಿಕೂಲ ಹವಾಮಾನದಿಂದ ಅಮರನಾಥ ಯಾತ್ರೆ ಮತ್ತೆ ಸ್ಥಗಿತ, ಈವರೆಗೆ 2.29 ಲಕ್ಷ ಭಕ್ತರಿಂದ ದರ್ಶನ

ಕಳೆದ ಜೂನ್ 30ರಂದು ಆರಂಭವಾದ ಅಮರನಾಥ್ ಯಾತ್ರೆಯಲ್ಲಿ ಈವರೆಗೆ 2.29 ಲಕ್ಷ ಮಂದಿ ಶಿವಲಿಂಗದ ದರ್ಶನ ಪಡೆದಿದ್ದಾರೆ.

Amarnath Yatra: ಪ್ರತಿಕೂಲ ಹವಾಮಾನದಿಂದ ಅಮರನಾಥ ಯಾತ್ರೆ ಮತ್ತೆ ಸ್ಥಗಿತ, ಈವರೆಗೆ 2.29 ಲಕ್ಷ ಭಕ್ತರಿಂದ ದರ್ಶನ
ಅಮರನಾಥ ಯಾತ್ರಿಗಳು (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 22, 2022 | 9:14 AM

ದೆಹಲಿ: ಅಮರನಾಥ ಯಾತ್ರೆಗೆ (Amarnath Yatra) ಬಳಕೆಯಾಗುವ ಜಮ್ಮು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯ ಸುಮಾರು 300 ಕಿಮೀ ಪ್ರದೇಶದಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಯಾತ್ರೆಯನ್ನು ಶುಕ್ರವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭೂಕುಸಿತ ಮತ್ತು ಬಂಡೆಗಳು ಉರುಳಿ ಬೀಳುವ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಸಂಚಾರವನ್ನು ಸಂಪೂರ್ಣ ನಿರ್ಬಂಭಿಸಲಾಗಿದೆ. ಕಳೆದ ಜೂನ್ 30ರಂದು ಆರಂಭವಾದ ಅಮರನಾಥ್ ಯಾತ್ರೆಯಲ್ಲಿ ಈವರೆಗೆ 2.29 ಲಕ್ಷ ಮಂದಿ ಶಿವಲಿಂಗದ ದರ್ಶನ ಪಡೆದಿದ್ದಾರೆ.

ಹೆದ್ದಾರಿಯಲ್ಲಿ ಇಂದು ವಾಹನ ಸಂಚಾರ ಇರುವುದಿಲ್ಲ. ಅದೇ ರೀತಿ ಜಮ್ಮುವಿನಿಂದ ಕಾಶ್ಮೀರ ಕಣಿವೆಯ ಕಡೆಗೆ, ಅಮರನಾಥ್ ಕಣಿವೆಗೆ ಪ್ರವಾಸಿಗರ ಸಂಚಾರವನ್ನೂ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 22 ದಿನಗಳಲ್ಲಿ 2,29,744 ಯಾತ್ರಿಗಳು ಪವಿತ್ರ ಗುಹೆಯಲ್ಲಿ ಶಿವಲಿಂಗದ ದರ್ಶನ ಪಡೆದುಕೊಂಡಿದ್ದಾರೆ. ನಿನ್ನೆ (ಜುಲೈ 21, ಗುರುವಾರ) ಒಂದೇ ದಿನ 10,310 ಯಾತ್ರಿಕರು ಪವಿತ್ರ ಗುಹೆ ಸಂದರ್ಶಿಸಿದ್ದರು. ಹಿಮಾಲಯದಲ್ಲಿರುವ ಅಮರನಾಥ ಗುಹೆಯು ಸಮುದ್ರ ಮಟ್ಟಕ್ಕಿಂತಲೂ 3,888 ಮೀಟರ್ ಎತ್ತರದಲ್ಲಿದೆ.

ಉತ್ತರ ಕಾಶ್ಮೀರದ ಬಲ್​ತಲ್ ಮಾರ್ಗವು ಅಮರನಾಥಕ್ಕೆ ಹತ್ತಿರದ ದಾರಿಯಾಗಿದೆ. ದಕ್ಷಿಣ ಕಾಶ್ಮೀರದ ಪಹಲ್​ಗಾಮ್ ಮಾರ್ಗದಲ್ಲಿ ಮತ್ತೊಂದು ಹಾದಿಯೂ ಇದೆ. ಆದರೆ ಇದು ತುಸು ದೂರವಾಗುತ್ತದೆ. ಬಲ್​ತಲ್ ಮಾರ್ಗದಲ್ಲಿ ಬರುವ ಯಾತ್ರಿಕರು ಪವಿತ್ರ ಗುಹೆ ತಲುಪಲು 14 ಕಿಮೀ ನಡೆದು ಬರಬೇಕಾಗುತ್ತದೆ. ಈ ಮಾರ್ಗದಲ್ಲಿ ಬರುವ ಭಕ್ತರು ದರ್ಶನದ ನಂತರ ಅಂದೇ ಮೂಲ ನೆಲೆಗೆ ಮರಳುತ್ತಾರೆ.

ಪಹಲ್​ಗಾಮ್ ಮಾರ್ಗವಾಗಿ ಬರುವವರು 48 ಕಿಮೀ ನಡೆಯಬೇಕಾಗಿದ್ದು, 4 ದಿನ ತೆಗೆದುಕೊಳ್ಳುತ್ತಾರೆ. ಎರಡೂ ಮಾರ್ಗಗಳಲ್ಲಿ ಯಾತ್ರಿಕರಿಗೆ ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯವಿದೆ. ಎರಡೂ ಮಾರ್ಗಗಳಲ್ಲಿ ಶುಕ್ರವಾರ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಚೆದುರಿದಂತೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಮರನಾಥ ಯಾತ್ರಿಕರು ಭೂ ಕುಸಿತ ಮತ್ತು ಹಠಾತ್ ಪ್ರವಾಹಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಪ್ರಸಕ್ತ ಸಾಲಿನ ಅಮರನಾಥ ಯಾತ್ರೆಯು ಆಗಸ್ಟ್ 11ರ ಶ್ರಾವಣ ಹುಣ್ಣಿಮೆ, ರಕ್ಷಾಬಂಧನದ ದಿನ ಅಂತ್ಯಗೊಳ್ಳಲಿದೆ.

Published On - 9:14 am, Fri, 22 July 22

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್