AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಹವಾಮಾನ ವೈಪರೀತ್ಯದಿಂದಾಗಿ ಇಂದು (ಗುರುವಾರ) ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 14, 2022 | 1:48 PM

Share

ಅಮರನಾಥ: ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಇಂದು (ಗುರುವಾರ) ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಯಾತ್ರೆ ಮಾಡುವುದನ್ನು  ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆ ದೇಗುಲದ ಕಡೆಗೆ ತೆರಳಲು ಅನುಮತಿ ಇಲ್ಲ ಎಂದು ಅವರು ಹೇಳಿದರು.

ಇದನ್ನು ಓದಿ: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತ: ಭಾರೀ ವಾಹನಗಳ ಸಂಚಾರ ನಿರ್ಬಂಧ

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಮೇಘಸ್ಫೋಟದಿಂದ ಜುಲೈ 8 ರಂದು 16 ಜನರು ಸಾವನ್ನಪ್ಪಿದರು ಮತ್ತು 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು   ನಂತರ ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಜುಲೈ 11 ರಂದು ಮತ್ತೆ  ಪಹಲ್ಗಾಮ್ ಮಾರ್ಗದ ಮೂಲಕ ಮತ್ತು ಜುಲೈ 12 ರಂದು ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆಯು  ಪುನರಾರಂಭಗೊಂಡಿತು. ಇದೀಗ ಭಾರೀ ಮಳೆಯಿಂದ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.