AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಅಮೇಜಾನ್​; ಟ್ವಿಟರ್​ನಲ್ಲಿ ಟ್ರೆಂಡ್​ ಆಗ್ತಿದೆ Boycott Amazon ಹ್ಯಾಷ್​ಟ್ಯಾಗ್​

ಅಮೇಜಾನ್ ಹೀಗೆ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲ ಬಾರಿಯಲ್ಲ. 2019ರಲ್ಲಿ ಇಂಥದ್ದೇ ಒಂದು ಕೆಲಸ ಮಾಡಿತ್ತು. ಹಿಂದು ದೇವತೆಗಳು, ದೇವರ ಚಿತ್ರ ಮುದ್ರಿಸಲಾದ ಟಾಯ್ಲೆಟ್​ ಸೀಟ್​ ಕವರ್​ಗಳು, ಬಾಗಿಲು ಮ್ಯಾಟ್​​ಗಳನ್ನು ಮಾರಾಟಕ್ಕಿಟ್ಟಿತ್ತು.

ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಅಮೇಜಾನ್​; ಟ್ವಿಟರ್​ನಲ್ಲಿ ಟ್ರೆಂಡ್​ ಆಗ್ತಿದೆ Boycott Amazon ಹ್ಯಾಷ್​ಟ್ಯಾಗ್​
ಅಮೇಜಾನ್​​ನಲ್ಲಿ ಮಾರಾಟಕ್ಕಿಟ್ಟ ವಸ್ತುಗಳು
TV9 Web
| Edited By: |

Updated on: Jan 25, 2022 | 2:30 PM

Share

ಇ -ಕಾಮರ್ಸ್​ ದಿಗ್ಗಜ, ಅತ್ಯಂತ ದೊಡ್ಡ ಆನ್​ಲೈನ್​ ಶಾಪಿಂಗ್ ಸಂಸ್ಥೆ ಅಮೇಜಾನ್​ ಮತ್ತೊಮ್ಮೆ ವಿವಾದ ಸೃಷ್ಟಿಸಿದೆ. ಈ ಬಾರಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಮೇಜಾನ್​ ಬಹಿಷ್ಕರಿಸಿ (Boycott Amazon), ಅಮೇಜಾನ್​ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುತ್ತಿದೆ (Amazon_Insults_National_Flag)ಎಂಬಿತ್ಯಾದಿ ಹ್ಯಾಷ್​​ಟ್ಯಾಗ್​ನಡಿ ಪೋಸ್ಟ್ ಹಾಕುತ್ತಿದ್ದಾರೆ. 73ನೇ ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಬೆನ್ನಲ್ಲೇ, ಅಮೇಜಾನ್​ ಹೀಗೊಂದು ಎಡವಟ್ಟು ಮಾಡಿಕೊಂಡಿದೆ. ರಾಷ್ಟ್ರಧ್ವಜದ ಮುದ್ರೆ, ಚಿತ್ರವುಳ್ಳ ವಸ್ತುಗಳನ್ನು ಅಮೇಜಾನ್​ ಮಾರಾಟ ಮಾಡುತ್ತಿರುವುದೇ ಇದಕ್ಕೆ ಕಾರಣ.

ಅಮೇಜಾನ್​ ಇಂಡಿಯಾದಲ್ಲ, ಧ್ವಜದ ಚಿತ್ರ ಮುದ್ರಿಸಲಾದ ಟಿ-ಶರ್ಟ್​ಗಳು, ಮಾಸ್ಕ್​ಗಳು, ಕೀ ಚೈನ್​​ಗಳು, ಚಾಕಲೇಟ್ ಕವರ್​​ಗಳು ​, ಸೆರಾಮಿಕ್ ಮಗ್​​ಗಳು, ಮಕ್ಕಳ ಬಟ್ಟೆಗಳನ್ನು ಮಾರಾಟಕ್ಕೆ ಇಡಲಾಗಿದೆ. ಇದು ರಾಷ್ಟ್ರಧ್ವಜಕ್ಕೆ ಮಾಡುವ ಅವಮಾನ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಧ್ವಜ ಸಂಹಿತೆ 2022ರ ಉಲ್ಲಂಘನೆ ಎಂದೂ ಹೇಳಲಾಗಿದೆ.  ಈ ಸಂಹಿತೆಯ ಪ್ರಕಾರ, ಯಾವುದೇ ಉಡುಪಿನ ಭಾಗದಲ್ಲಿ ರಾಷ್ಟ್ರಧ್ವಜ ಮುದ್ರಿಸುವಂತಿಲ್ಲ. ಕುಶನ್​ಗಳು, ಕರವಸ್ತ್ರಗಳು, ನ್ಯಾಪ್​ಕಿನ್​ ಅಥವಾ ಪೆಟ್ಟಿಗೆಗಳ ಮೇಲೆಲ್ಲ ಪ್ರಿಂಟ್​ ಅಥವಾ ಕಸೂತಿ ಮಾಡುವಂತಿಲ್ಲ. ಆದರೆ ಅಮೇಜಾನ್​ ತನ್ನ ಮಾರಾಟ ಪ್ರಮಾಣ ಹೆಚ್ಚಿಸಿಕೊಳ್ಳಲು, ಮಾರ್ಕೆಟಿಂಗ್​ ಪ್ರಚಾರಕ್ಕಾಗಿ ಭಾರತದ ಧ್ವಜದ ಚಿತ್ರ ಬಳಸಿಕೊಳ್ಳುತ್ತಿದೆ ಎಂದು ಅನೇಕರು ತಮ್ಮ ಟ್ವಿಟರ್​ನಲ್ಲಿ ಆರೋಪಿಸಿದ್ದಾರೆ.

ನೆಟ್ಟಿಗರೊಬ್ಬರು ತ್ರಿವರ್ಣ ಧ್ವಜದ ಮಾದರಿಯಲ್ಲಿ ಹೊಲಿಯಲಾದ ಮಾಸ್ಕ್​ ಚಿತ್ರ ಶೇರ್​ ಮಾಡಿಕೊಂಡು, ಇದು ಅಮೇಜಾನ್​​ನಲ್ಲಿ ಮಾರಾಟಕ್ಕಿದೆ. ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ. ಮಾಸ್ಕ್​​ನ್ನು ಬಳಸಿ ಸುಡುತ್ತಾರೆ ಇಲ್ಲವೇ ಬಿಸಾಡುತ್ತಾರೆ. ಹೀಗೆ ಮಾಡಿದರೆ ನಮ್ಮ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತೆ ಆಗುತ್ತದೆ. ಅಮೇಜಾನ್ ಕೂಡಲೇ ಇದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹೀಗೆ ಇನ್ನೊಬ್ಬರು ಟ್ವೀಟ್ ಮಾಡಿ, ರಾಷ್ಟ್ರಧ್ವಜದ ಚಿತ್ರವಿರುವ ಎಲ್ಲ ಉತ್ಪನ್ನಗಳನ್ನೂ ಅಮೇಜಾನ್​ ಹಿಂಪಡೆಯಬೇಕು. ಬೇಷರತ್ತು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ರಾಷ್ಟ್ರ ಧ್ವಜ ಸಂಹಿತೆಯನ್ನು ಅವಮಾನಿಸಿದ ಅಮೇಜಾನ್​ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಅನೇಕರು ಆಗ್ರಹಿಸಿದ್ದಾರೆ.

ಇದೇ ಮೊದಲಲ್ಲ:  ಅಮೇಜಾನ್ ಹೀಗೆ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲ ಬಾರಿಯಲ್ಲ. 2019ರಲ್ಲಿ ಇಂಥದ್ದೇ ಒಂದು ಕೆಲಸ ಮಾಡಿತ್ತು. ಹಿಂದು ದೇವತೆಗಳು, ದೇವರ ಚಿತ್ರ ಮುದ್ರಿಸಲಾದ ಟಾಯ್ಲೆಟ್​ ಸೀಟ್​ ಕವರ್​ಗಳು, ಬಾಗಿಲು ಮ್ಯಾಟ್​​ಗಳನ್ನು ಮಾರಾಟಕ್ಕಿಟ್ಟಿತ್ತು. ಆಗಲೂ ಸಹ ಅಮೇಜಾನ್​ ಬಹಿಷ್ಕರಿಸಿ ಎಂಬ ಅಭಿಯಾನ ಇಂಟರ್​​ನೆಟ್​​ನಲ್ಲಿ ನಡೆದಿತ್ತು. ಅಮೇಜಾನ್​ ಕ್ಷಮೆ ಕೋರಿತ್ತು. ಅದಕ್ಕೂ ಮೊದಲು 2017ರಲ್ಲಿ ಭಾರತದ ರಾಷ್ಟ್ರಧ್ವಜದ ಚಿತ್ರವಿರುವ ಬಾಗಿಲಿಗೆ ಹಾಕುವ ಮ್ಯಾಟ್​ಗಳು ಅಮೇಜಾನ್​​ನ ಕೆನಡಾ ವಿಭಾಗದ ವೆಬ್​ಸೈಟ್​​ನಲ್ಲಿ ಮಾರಾಟಕ್ಕೆ ಇದ್ದವು. ಆಗಲೂ ಸಹ ಬಹಿಷ್ಕಾರ ಅಭಿಯಾನ ನಡೆದಿತ್ತು.

ಇಲ್ಲಿವೆ ನೋಡಿ ಅಮೇಜಾನ್​ ವಿರುದ್ಧದ ಕೆಲವು ಟ್ವೀಟ್​ಗಳು

ಇದನ್ನೂ ಓದಿ: ಸಾಧನೆಗೆ ವಯಸ್ಸಿನ ಹಂಗಿಲ್ಲ, 60ರ ಇಳಿ ವಯಸ್ಸಿನಲ್ಲೂ ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್​​ಗೆ ಸೇರ್ಪಡೆ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು