AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೆಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ
ಅಮೆಜಾನ್ ಕಚೇರಿ ಮೇಲೆ MNS ಕಾರ್ಯಕರ್ತರ ದಾಳಿ
TV9 Web
| Edited By: |

Updated on:Apr 06, 2022 | 11:20 PM

Share

ಮುಂಬೈ: ಭಾಷಾವಾರು ವಿಚಾರವಾಗಿ ಆಕ್ರೋಶ ಹೊರಹಾಕಿರುವ ರಾಜ್ ಠಾಕ್ರೆ ನಾಯಕತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಕಾರ್ಯಕರ್ತರು, ಮುಂಬೈ ಹಾಗೂ ಪುಣೆಯ ಅಮೇಜಾನ್ ರಿಟೈಲರ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ. ಅಮೇಜಾನ್ ಇ-ಕಾಮರ್ಸ್ ರಿಟೈಲರ್ ಅಪ್ಲಿಕೇಷನ್​ನಲ್ಲಿ ಮರಾಠಿ ಭಾಷೆಯ ಅವಕಾಶ ನೀಡದಿರುವುದಕ್ಕೆ ಈ ಕೃತ್ಯ ಎಸಗಲಾಗಿದೆ.

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೇಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಈಗಾಗಲೇ , ಅಮೇಜಾನ್ ರಿಟೈಲರ್​ನ ಪೋಸ್ಟರ್​ಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಅಮೆಜಾನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಜನವರಿ 5ರಂದು ಕೋರ್ಟ್ ಮುಂದೆ ಹಾಜರಿರುವಂತೆ ರಾಜ್ ಠಾಕ್ರೆಗೆ ನ್ಯಾಯಾಲಯ ಆದೇಶವನ್ನೂ ನೀಡಿದೆ. ರಾಜ್ ಠಾಕ್ರೆಗೆ ಕೋರ್ಟ್ ನೋಟೀಸ್ ನೀಡಿದ ಬೆನ್ನಲ್ಲೇ MNS ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದ್ದಾರೆ.

ಮರಾಠಿಗರ ಭಾಷಾವಾರು ಸ್ವಾಭಿಮಾನ ಅಥವಾ ದುರಭಿಮಾನದ ಕೃತ್ಯಗಳು ಹೊಸದೇನಲ್ಲ. ಹಿಂದೆಯೂ ಹಲವು ಬಾರಿ ಭಾಷೆಯ ವಿಷಯದಲ್ಲಿ ಮರಾಠಿಗರು ತಗಾದೆ ತೆಗೆದಿದ್ದಾರೆ. ಕರ್ನಾಟಕ ಗಡಿ ಭಾಗದಲ್ಲೂ ಮರಾಠಿ-ಕನ್ನಡ ಭಾಷಾ ವಿವಾದಗಳು ಆಗಿವೆ. ಇದೀಗ,  ಅಮೇಜಾನ್ ರಿಟೈಲರ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ವಿರುದ್ಧ ಗುದ್ದಾಟಗಳು ಶುರುವಾಗಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Published On - 12:48 pm, Sat, 26 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ