AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೆಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ
ಅಮೆಜಾನ್ ಕಚೇರಿ ಮೇಲೆ MNS ಕಾರ್ಯಕರ್ತರ ದಾಳಿ
TV9 Web
| Edited By: |

Updated on:Apr 06, 2022 | 11:20 PM

Share

ಮುಂಬೈ: ಭಾಷಾವಾರು ವಿಚಾರವಾಗಿ ಆಕ್ರೋಶ ಹೊರಹಾಕಿರುವ ರಾಜ್ ಠಾಕ್ರೆ ನಾಯಕತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಕಾರ್ಯಕರ್ತರು, ಮುಂಬೈ ಹಾಗೂ ಪುಣೆಯ ಅಮೇಜಾನ್ ರಿಟೈಲರ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ. ಅಮೇಜಾನ್ ಇ-ಕಾಮರ್ಸ್ ರಿಟೈಲರ್ ಅಪ್ಲಿಕೇಷನ್​ನಲ್ಲಿ ಮರಾಠಿ ಭಾಷೆಯ ಅವಕಾಶ ನೀಡದಿರುವುದಕ್ಕೆ ಈ ಕೃತ್ಯ ಎಸಗಲಾಗಿದೆ.

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೇಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಈಗಾಗಲೇ , ಅಮೇಜಾನ್ ರಿಟೈಲರ್​ನ ಪೋಸ್ಟರ್​ಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಅಮೆಜಾನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಜನವರಿ 5ರಂದು ಕೋರ್ಟ್ ಮುಂದೆ ಹಾಜರಿರುವಂತೆ ರಾಜ್ ಠಾಕ್ರೆಗೆ ನ್ಯಾಯಾಲಯ ಆದೇಶವನ್ನೂ ನೀಡಿದೆ. ರಾಜ್ ಠಾಕ್ರೆಗೆ ಕೋರ್ಟ್ ನೋಟೀಸ್ ನೀಡಿದ ಬೆನ್ನಲ್ಲೇ MNS ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದ್ದಾರೆ.

ಮರಾಠಿಗರ ಭಾಷಾವಾರು ಸ್ವಾಭಿಮಾನ ಅಥವಾ ದುರಭಿಮಾನದ ಕೃತ್ಯಗಳು ಹೊಸದೇನಲ್ಲ. ಹಿಂದೆಯೂ ಹಲವು ಬಾರಿ ಭಾಷೆಯ ವಿಷಯದಲ್ಲಿ ಮರಾಠಿಗರು ತಗಾದೆ ತೆಗೆದಿದ್ದಾರೆ. ಕರ್ನಾಟಕ ಗಡಿ ಭಾಗದಲ್ಲೂ ಮರಾಠಿ-ಕನ್ನಡ ಭಾಷಾ ವಿವಾದಗಳು ಆಗಿವೆ. ಇದೀಗ,  ಅಮೇಜಾನ್ ರಿಟೈಲರ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ವಿರುದ್ಧ ಗುದ್ದಾಟಗಳು ಶುರುವಾಗಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Published On - 12:48 pm, Sat, 26 December 20

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?