AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೆಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ
ಅಮೆಜಾನ್ ಕಚೇರಿ ಮೇಲೆ MNS ಕಾರ್ಯಕರ್ತರ ದಾಳಿ
TV9 Web
| Edited By: |

Updated on:Apr 06, 2022 | 11:20 PM

Share

ಮುಂಬೈ: ಭಾಷಾವಾರು ವಿಚಾರವಾಗಿ ಆಕ್ರೋಶ ಹೊರಹಾಕಿರುವ ರಾಜ್ ಠಾಕ್ರೆ ನಾಯಕತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಕಾರ್ಯಕರ್ತರು, ಮುಂಬೈ ಹಾಗೂ ಪುಣೆಯ ಅಮೇಜಾನ್ ರಿಟೈಲರ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ. ಅಮೇಜಾನ್ ಇ-ಕಾಮರ್ಸ್ ರಿಟೈಲರ್ ಅಪ್ಲಿಕೇಷನ್​ನಲ್ಲಿ ಮರಾಠಿ ಭಾಷೆಯ ಅವಕಾಶ ನೀಡದಿರುವುದಕ್ಕೆ ಈ ಕೃತ್ಯ ಎಸಗಲಾಗಿದೆ.

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೇಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಈಗಾಗಲೇ , ಅಮೇಜಾನ್ ರಿಟೈಲರ್​ನ ಪೋಸ್ಟರ್​ಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಅಮೆಜಾನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಜನವರಿ 5ರಂದು ಕೋರ್ಟ್ ಮುಂದೆ ಹಾಜರಿರುವಂತೆ ರಾಜ್ ಠಾಕ್ರೆಗೆ ನ್ಯಾಯಾಲಯ ಆದೇಶವನ್ನೂ ನೀಡಿದೆ. ರಾಜ್ ಠಾಕ್ರೆಗೆ ಕೋರ್ಟ್ ನೋಟೀಸ್ ನೀಡಿದ ಬೆನ್ನಲ್ಲೇ MNS ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದ್ದಾರೆ.

ಮರಾಠಿಗರ ಭಾಷಾವಾರು ಸ್ವಾಭಿಮಾನ ಅಥವಾ ದುರಭಿಮಾನದ ಕೃತ್ಯಗಳು ಹೊಸದೇನಲ್ಲ. ಹಿಂದೆಯೂ ಹಲವು ಬಾರಿ ಭಾಷೆಯ ವಿಷಯದಲ್ಲಿ ಮರಾಠಿಗರು ತಗಾದೆ ತೆಗೆದಿದ್ದಾರೆ. ಕರ್ನಾಟಕ ಗಡಿ ಭಾಗದಲ್ಲೂ ಮರಾಠಿ-ಕನ್ನಡ ಭಾಷಾ ವಿವಾದಗಳು ಆಗಿವೆ. ಇದೀಗ,  ಅಮೇಜಾನ್ ರಿಟೈಲರ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ವಿರುದ್ಧ ಗುದ್ದಾಟಗಳು ಶುರುವಾಗಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Published On - 12:48 pm, Sat, 26 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ