AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೆಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ
ಅಮೆಜಾನ್ ಕಚೇರಿ ಮೇಲೆ MNS ಕಾರ್ಯಕರ್ತರ ದಾಳಿ
Follow us
TV9 Web
| Updated By: ganapathi bhat

Updated on:Apr 06, 2022 | 11:20 PM

ಮುಂಬೈ: ಭಾಷಾವಾರು ವಿಚಾರವಾಗಿ ಆಕ್ರೋಶ ಹೊರಹಾಕಿರುವ ರಾಜ್ ಠಾಕ್ರೆ ನಾಯಕತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಕಾರ್ಯಕರ್ತರು, ಮುಂಬೈ ಹಾಗೂ ಪುಣೆಯ ಅಮೇಜಾನ್ ರಿಟೈಲರ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ. ಅಮೇಜಾನ್ ಇ-ಕಾಮರ್ಸ್ ರಿಟೈಲರ್ ಅಪ್ಲಿಕೇಷನ್​ನಲ್ಲಿ ಮರಾಠಿ ಭಾಷೆಯ ಅವಕಾಶ ನೀಡದಿರುವುದಕ್ಕೆ ಈ ಕೃತ್ಯ ಎಸಗಲಾಗಿದೆ.

ಅಮೆಜಾನ್ ಇ-ಕಾಮರ್ಸ್ ರಿಟೈಲರ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ದಾಳಿ ನಡೆಸಿರುವ MNS ಕಾರ್ಯಕರ್ತರು, ಪುಣೆಯ ಕೋಂಧ್ವಾ ಹಾಗೂ ಮುಂಬೈನ ಚಂಡಿವ್ಲಿ ಪ್ರದೇಶದ ಅಮೇಜಾನ್ ಕಚೇರಿ ಮತ್ತು ಗೋದಾಮುಗಳನ್ನು ಧ್ವಂಸ ಮಾಡಿದ್ದಾರೆ.

ಈಗಾಗಲೇ , ಅಮೇಜಾನ್ ರಿಟೈಲರ್​ನ ಪೋಸ್ಟರ್​ಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಅಮೆಜಾನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಜನವರಿ 5ರಂದು ಕೋರ್ಟ್ ಮುಂದೆ ಹಾಜರಿರುವಂತೆ ರಾಜ್ ಠಾಕ್ರೆಗೆ ನ್ಯಾಯಾಲಯ ಆದೇಶವನ್ನೂ ನೀಡಿದೆ. ರಾಜ್ ಠಾಕ್ರೆಗೆ ಕೋರ್ಟ್ ನೋಟೀಸ್ ನೀಡಿದ ಬೆನ್ನಲ್ಲೇ MNS ಕಾರ್ಯಕರ್ತರು ಈ ದುಷ್ಕೃತ್ಯ ಎಸಗಿದ್ದಾರೆ.

ಮರಾಠಿಗರ ಭಾಷಾವಾರು ಸ್ವಾಭಿಮಾನ ಅಥವಾ ದುರಭಿಮಾನದ ಕೃತ್ಯಗಳು ಹೊಸದೇನಲ್ಲ. ಹಿಂದೆಯೂ ಹಲವು ಬಾರಿ ಭಾಷೆಯ ವಿಷಯದಲ್ಲಿ ಮರಾಠಿಗರು ತಗಾದೆ ತೆಗೆದಿದ್ದಾರೆ. ಕರ್ನಾಟಕ ಗಡಿ ಭಾಗದಲ್ಲೂ ಮರಾಠಿ-ಕನ್ನಡ ಭಾಷಾ ವಿವಾದಗಳು ಆಗಿವೆ. ಇದೀಗ,  ಅಮೇಜಾನ್ ರಿಟೈಲರ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ವಿರುದ್ಧ ಗುದ್ದಾಟಗಳು ಶುರುವಾಗಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Published On - 12:48 pm, Sat, 26 December 20

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ