AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ನಿಮಿಷವಾದರೂ ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು; ಆಕ್ಸಿಜನ್ ಇಲ್ಲದೆ ರೋಗಿ ಸಾವು

ರಾಜಸ್ಥಾನದ ಭಿಲ್ವಾರಾದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯ ಗೊತ್ತಾದ ಕೂಡಲೆ ಅವರ ಮನೆಯವರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅವರ ಕುಟುಂಬದ ಸದಸ್ಯರು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರು. ಆಸ್ಪತ್ರೆಗೆ ತಲುಪಿದಾಗ ಆ್ಯಂಬುಲೆನ್ಸ್‌ನ ಬಾಗಿಲು ಓಪನ್ ಆಗಲಿಲ್ಲ. ಇದರಿಂದಾಗಿ ಸಮಯ ವ್ಯರ್ಥವಾಯಿತು. ಇದರಿಂದಾಗಿ ಆ್ಯಂಬುಲೆನ್ಸ್​ ಒಳಗಿದ್ದ ಮಹಿಳೆ ಸಾವನ್ನಪ್ಪಿದರು.

15 ನಿಮಿಷವಾದರೂ ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು; ಆಕ್ಸಿಜನ್ ಇಲ್ಲದೆ ರೋಗಿ ಸಾವು
Ambulance
ಸುಷ್ಮಾ ಚಕ್ರೆ
|

Updated on: Jan 21, 2025 | 4:19 PM

Share

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಚಾತುರ್ಯವೊಂದು ನಡೆದಿದೆ. ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್‌ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಿಲ್ಲ. ಇದರಿಂದಾಗಿ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್​ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ.

ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿನ ಮಹಿಳೆಯೊಬ್ಬರು ಯಾವುದೋ ಸಮಸ್ಯೆಯಿಂದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದರು. ಮಹಿಳೆಯ ಆತ್ಮಹತ್ಯಾ ಪ್ರಯತ್ನದ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿದುಬಂದಿತು. ಅವರು ತಕ್ಷಣ ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರು. ಆಸ್ಪತ್ರೆ ತಲುಪಿದಾಗ ಆ್ಯಂಬುಲೆನ್ಸ್ ಬಾಗಿಲು ತೆರೆದಾಗ ಅದು ತೆರೆಯಲಿಲ್ಲ. ಆ್ಯಂಬುಲೆನ್ಸ್​ನ ಬಾಗಿಲು ಸಿಕ್ಕಿಹಾಕಿಕೊಂಡಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ: ಕೇಸ್ ಬುಕ್

ಆ್ಯಂಬುಲೆನ್ಸ್​ ಬಾಗಿಲು ಓಪನ್ ಮಾಡಲು 15 ನಿಮಿಷ ಪ್ರಯತ್ನಪಟ್ಟರೂ ಸಾಧ್ಯವಾಗದೆ ಇದ್ದಾಗ ಕಿಟಕಿ ಒಡೆದು ಒಳಗಿದ್ದ ಆ ಮಹಿಳೆಯನ್ನು ಹೊರಗೆಳೆದರು. ಅಷ್ಟರಲ್ಲಿ ಆ ಮಹಿಳೆ ಸಾವನ್ನಪ್ಪಿದ್ದರು. ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಕೂಡ ಇರಲಿಲ್ಲ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗೆ ಆಸ್ಪತ್ರೆಗೆ ಹೋಗುವ ದಾರಿಯೂ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಇದರಿಂದಾಗಿ, ಆ ಮಹಿಳೆಗೆ ಚಿಕಿತ್ಸೆ ನೀಡಲು ಹೆಚ್ಚಿನ ವಿಳಂಬವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ?
ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ?
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್