AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬೆಂಗಾವಲು ಪೊಲೀಸ್ ಜೀಪಿಗೆ ಆಂಬ್ಯುಲೆನ್ಸ್ ಡಿಕ್ಕಿ, 6 ಮಂದಿಗೆ ಗಾಯ

ಬೆಂಗಾವಲು ಪಡೆಯಲ್ಲಿದ್ದ ಎಲ್ಲಾ ಕಾರುಗಳು ಇದ್ದಕ್ಕಿದ್ದಂತೆ ತಮ್ಮ ವೇಗವನ್ನು ಕಡಿಮೆಗೊಳಿಸಿದವು. ಆದರೆ ಆಂಬ್ಯುಲೆನ್ಸ್ ಚಾಲಕನಿಗೆ  ನಿಯಂತ್ರಣ ಸಾಧ್ಯವಾಗಲಿಲ್ಲ.ಅದು ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದಿದೆ

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬೆಂಗಾವಲು ಪೊಲೀಸ್ ಜೀಪಿಗೆ ಆಂಬ್ಯುಲೆನ್ಸ್ ಡಿಕ್ಕಿ, 6 ಮಂದಿಗೆ ಗಾಯ
ಪೊಲೀಸ್ ಜೀಪ್
TV9 Web
| Edited By: |

Updated on:Oct 14, 2022 | 3:55 PM

Share

ಲಖನೌ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ (Brajesh Pathak) ಅವರ ಬೆಂಗಾವಲು ಪಡೆಯಲ್ಲಿದ್ದ ಪೊಲೀಸ್ ಜೀಪಿಗೆ ಜತೆಯಲ್ಲಿ ಸಾಗುತ್ತಿದ್ದ ಆಂಬ್ಯುಲೆನ್ಸ್  (ambulance)ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸರು ಹಾಗೂ ಇಬ್ಬರು ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ  ಪೊಲೀಸ್ ಜೀಪ್ ರಸ್ತೆಯ ಇನ್ನೊಂದು ಬದಿಗೆ ಎಸೆಯಲ್ಪಟ್ಟಿತು. ಸೀತಾಪುರ-ಖೇರಿ ರಸ್ತೆಯ ಕೊತ್ವಾಲಿ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತ ಸಂಭವಿಸಿದಾಗ ಬ್ರಜೇಶ್ ಪಾಠಕ್ ಅವರ ತಂಡ ಲಖೀಂಪುರದ ಗೋಲಾ ಗೋಕರ್ಣನಾಥ ಖೇರಿಗೆ ಪ್ರವಾಹ ತಪಾಸಣೆಗೆ ಹೋಗುತ್ತಿತ್ತು ಎಂದು ಪೊಲೀಸ್ ಸರ್ಕಲ್ ಅಧಿಕಾರಿ ಸದರ್, ಪ್ರವೀಣ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರಿದಿ ಮಾಡಿದೆ. ಪೊಲೀಸರು ಮತ್ತು ವೈದ್ಯಾಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಾವಲು ಪಡೆಯಲ್ಲಿದ್ದ ಎಲ್ಲಾ ಕಾರುಗಳು ಇದ್ದಕ್ಕಿದ್ದಂತೆ ತಮ್ಮ ವೇಗವನ್ನು ಕಡಿಮೆಗೊಳಿಸಿದವು. ಆದರೆ ಆಂಬ್ಯುಲೆನ್ಸ್ ಚಾಲಕನಿಗೆ  ನಿಯಂತ್ರಣ ಸಾಧ್ಯವಾಗಲಿಲ್ಲ.ಅದು ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದಿದೆ” ಎಂದು ಕುಮಾರ್ ಹೇಳಿದ್ದಾರೆ.

Published On - 2:30 pm, Fri, 14 October 22

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್