AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮಗಳ ಚರ್ಚೆ ಮುಂದುವರಿಕೆ: ಮೋದಿ ಜೊತೆಗಿನ ಮಾತುಕತೆಯಲ್ಲಿ ಬೈಡೆನ್ ಪುನರುಚ್ಚಾರ

ಅಮೆರಿಕ ಮತ್ತು ಭಾರತ ಸರ್ಕಾರಗಳು ರಷ್ಯಾ-ಉಕ್ರೇನ್ ಸಂಘರ್ಷದ ಪರಿಣಾಮದ ಬಗ್ಗೆ ನಿರಂತರ ಸಮಾಲೋಚನೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು.

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮಗಳ ಚರ್ಚೆ ಮುಂದುವರಿಕೆ: ಮೋದಿ ಜೊತೆಗಿನ ಮಾತುಕತೆಯಲ್ಲಿ ಬೈಡೆನ್ ಪುನರುಚ್ಚಾರ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 12, 2022 | 6:53 AM

Share

ದೆಹಲಿ: ಅಮೆರಿಕ ಮತ್ತು ಭಾರತ ಸರ್ಕಾರಗಳು ರಷ್ಯಾ-ಉಕ್ರೇನ್ ಸಂಘರ್ಷದ ಪರಿಣಾಮದ ಬಗ್ಗೆ ನಿರಂತರ ಸಮಾಲೋಚನೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಹಲವು ವಿಚಾರಗಳನ್ನು ಬೈಡೆನ್ ಚರ್ಚಿಸಿದರು. ಈ ವೇಳೆ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ನಡುವೆ ನೇರ ಮಾತುಕತೆ ನಡೆಯುವುದರಿಂದ ಮಾತ್ರ ಬಿಕ್ಕಟ್ಟು ಶಮನಗೊಳ್ಳಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಉಕ್ರೇನ್​ನ ಬುಚಾ ನಗರದಲ್ಲಿ ರಷ್ಯಾ ಪಡೆಗಳು ನಾಗರಿಕರ ಮೇಲೆ ನಡೆಸಿರುವ ದೌರ್ಜನ್ಯವನ್ನು ‘ಆತಂಕಕಾರಿ’ ಎಂದು ಹೇಳಿದ ನರೇಂದ್ರ ಮೋದಿ, ‘ಈ ಘಟನೆ ಬೆಳಕಿಗೆ ಬಂತ ತಕ್ಷಣವೇ ಭಾರತ ಖಂಡಿಸಿತ್ತು. ಈ ಬಗ್ಗೆ ತನಿಖೆ ನಡೆಯಬೇಕೆಂದು ಒತ್ತಾಯಿಸಿತ್ತು’ ಎಂದು ನರೇಂದ್ರ ಮೋದಿ ಹೇಳಿದರು. ರಷ್ಯಾ ಪರವಾಗಿದೆ ಭಾರತ ಎನ್ನುವ ಅಮೆರಿಕದ ಆರೋಪದ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ರಷ್ಯಾ ಮತ್ತು ಉಕ್ರೇನ್ ನಿಯೋಗಗಳ ನಡುವೆ ನಡೆಯುತ್ತಿರುವ ಮಾತುಕತೆಯು ಸಂಘರ್ಷ ಅಂತ್ಯಗೊಳಿಸಬಹುದು ಎಂದು ಮೋದಿ ಆಶಯ ವ್ಯಕ್ತಪಡಿಸಿದರು. ಉಕ್ರೇನ್​ನಲ್ಲಿ ಭಾರತದ ವಿದ್ಯಾರ್ಥಿ ಮೃತಪಟ್ಟ ವಿಚಾರ ಪ್ರಸ್ತಾಪಿಸಿದ ಮೋದಿ, ಸಂಘರ್ಷದಲ್ಲಿ ಸಿಲುಕಿದ್ದ 20,000 ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕರೆತರಲು ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಈ ಸಂದರ್ಭದಲ್ಲಿ ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೆ ಎಂದು ಮೋದಿ ಹೇಳಿದರು.

ಉಕ್ರೇನ್​ಗೆ ಭಾರತ ಒದಗಿಸುತ್ತಿರುವ ಮಾನವೀಯ ನೆರವನ್ನು ಬೈಡೆನ್ ಶ್ಲಾಘಿಸಿದರು. ‘ಎರಡೂ ದೇಶಗಳ ಹಲವು ಕುಟುಂಬಗಳು ಕೌಟುಂಬಿಕವಾಗಿ ಬೆಸೆದುಕೊಂಡಿವೆ. ವಿಶ್ವಾಸ ಮತ್ತು ಮೌಲ್ಯಗಳು ಭಾರತ ಮತ್ತು ಅಮೆರಿಕದ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿವೆ’ ಎಂದು ಬೈಡೆನ್ ಹೇಳಿದರು.

ಉಕ್ರೇನ್ ಮೇಲಿನ ರಷ್ಯಾ ದಾಳಿಯ ವಿಚಾರದಲ್ಲಿ ಭಾರತ ತಳೆದಿರುವ ನಿಲುವಿನ ಬಗ್ಗೆ ಅಮೆರಿಕ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದೆ. ರಷ್ಯಾದಿಂದ ಕಡಿಮೆ ದರದಲ್ಲಿ ಇಂದನ ಖರೀದಿಸುವ ಭಾರತದ ನಿರ್ಧಾರದ ಬಗ್ಗೆಯೂ ಅಮೆರಿಕ ಕೆಂಗಣ್ಣು ಬೀರಿದೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಾಯಕರ ನೇರ ಮಾತುಕತೆ ಮಹತ್ವ ಪಡೆದುಕೊಂಡಿತ್ತು. ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶಗಳಾಗಿರುವ ಭಾರತ ಮತ್ತು ಅಮೆರಿಕ ಸಹಜವಾಗಿಯೇ ಶಾಂತಿ ಸ್ಥಾಪನೆ ವಿಚಾರದಲ್ಲಿ ಪಾಲುದಾರ ದೇಶಗಳಾಗಿವೆ’ ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: ಮೋದಿ- ಬೈಡನ್ ವರ್ಚುವಲ್ ಸಭೆ: ಉಕ್ರೇನ್ ಜನರಿಗೆ ಭಾರತ ನೀಡಿದ ಮಾನವೀಯ ಬೆಂಬಲವನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ

ಇದನ್ನೂ ಓದಿ: ಚೀನಾದ ದೋಸ್ತ್, ಅಮೆರಿಕಾಗೂ ಬೇಕು ಪಾಕ್​ನ ಭಾವಿ ಪ್ರಧಾನಿ ಷರೀಫ್​ ಖಾಂದಾನ್​ನ ಶೋಕಿಲಾಲ ಶೆಹಬಾಜ್

Published On - 6:51 am, Tue, 12 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್