AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ವಿವಾದದ ನಡುವೆ ಭಾರತ ತಿರುಗೇಟು; ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್​

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಗಡಿ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಭಾನುವಾರ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾರತದ ಹೈಕಮಿಷನರ್​ ಪ್ರಣಯ್ ವರ್ಮ ಅವರಿಗೆ ಸಮನ್ಸ್​ ನೀಡಿತ್ತು. ಬಾಂಗ್ಲಾದ ಈ ಕ್ರಮಕ್ಕೆ ಭಾರತ ಇಂದು ತಿರುಗೇಟು ನೀಡಿದ್ದು, ಭಾರತ ಕೂಡ ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದೆ. ನವದೆಹಲಿ ಮತ್ತು ಢಾಕಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಚರ್ಚಿಸಲು ಭಾರತೀಯ ವಿದೇಶಾಂಗ ಸಚಿವಾಲಯವು ಇಂದು ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಬರಲು ಸೂಚಿಸಿದೆ.

ಗಡಿ ವಿವಾದದ ನಡುವೆ ಭಾರತ ತಿರುಗೇಟು; ಬಾಂಗ್ಲಾದೇಶದ ಉನ್ನತ ರಾಯಭಾರಿಗೆ ಸಮನ್ಸ್​
India Bangladesh Border
ಸುಷ್ಮಾ ಚಕ್ರೆ
|

Updated on: Jan 13, 2025 | 5:57 PM

Share

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಚರ್ಚಿಸಲು ಭಾರತೀಯ ವಿದೇಶಾಂಗ ಸಚಿವಾಲಯವು ಇಂದು ಬಾಂಗ್ಲಾದೇಶದ ಉಪ ಹೈಕಮಿಷನರ್ ನುರಾಲ್ ಇಸ್ಲಾಂ ಅವರನ್ನು ಕರೆಸಿದೆ. ಗಡಿ ಉದ್ವಿಗ್ನತೆ ಕುರಿತು ಬಾಂಗ್ಲಾದೇಶ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್​ ನೀಡಿದ ನಂತರ ಭಾರತ ಕೂಡ ಬಾಂಗ್ಲಾ ರಾಯಭಾರಿಗೆ ಸಮನ್ಸ್​ ನೀಡಿದೆ. ಈ ಮೂಲಕ ಬಾಂಗ್ಲಾಕ್ಕೆ ಭಾರತ ತಿರುಗೇಟು ನೀಡಿದೆ. ಇದಕ್ಕೂ ಮೊದಲು ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಭಾರತ-ಬಾಂಗ್ಲಾ ಗಡಿಯಲ್ಲಿ 5 ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಬಾಂಗ್ಲಾದೇಶ ಆರೋಪಿಸಿತ್ತು.

ಬಾಂಗ್ಲಾದೇಶದ ಉಪ ಹೈಕಮಿಷನರ್ ನುರಾಲ್ ಇಸ್ಲಾಂ ಭಾರತದ ವಿದೇಶಾಂಗ ಸಚಿವಾಲಯದಿಂದ ಸಮನ್ಸ್ ಪಡೆದ ನಂತರ ಕಾರಿನಲ್ಲಿ ಹೋಗುತ್ತಿರುವ ವಿಡಿಯೋ ಲಭ್ಯವಾಗಿದೆ. ಗಡಿ ಭಾಗದಲ್ಲಿ ಭಾರತ 5 ಸ್ಥಳಗಳಲ್ಲಿ ಬೇಲಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಬಾಂಗ್ಲಾದೇಶ ಆರೋಪಿಸಿತ್ತು. ಆದರೆ, ಬಿಎಸ್​ಎಫ್ ಮತ್ತು ಬಾಂಗ್ಲಾದೇಶದ ಬಿಜಿಬಿ ಈ ಬಗ್ಗೆ ಸಂವಹನ ನಡೆಸುತ್ತಿವೆ. ಗಡಿಯಲ್ಲಿ ಅಪರಾಧಗಳನ್ನು ತಡೆಯಲು ಸಹಕಾರಿ ವಿಧಾನವನ್ನು ಅನುಸರಿಸಲಾಗುತ್ತದೆ ಎಂದು ಭಾರತೀಯ ರಾಯಭಾರಿ ಪ್ರಣಯ್ ವರ್ಮ ಬಾಂಗ್ಲಾಕ್ಕೆ ಹೇಳಿದ್ದರು.

ಇದನ್ನೂ ಓದಿ: ಶೇಖ್ ಹಸೀನಾಗೆ ಮತ್ತೊಂದು ಶಾಕ್; ಬಾಂಗ್ಲಾದೇಶದಿಂದ ಮಾಜಿ ಪ್ರಧಾನಿ ವಿರುದ್ಧ 2ನೇ ಬಂಧನ ವಾರಂಟ್ ಜಾರಿ

4,156 ಕಿಲೋಮೀಟರ್ ಉದ್ದದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 5 ಗೊತ್ತುಪಡಿಸಿದ ಸ್ಥಳಗಳಲ್ಲಿ ಭಾರತ ಬೇಲಿಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂಬ ಬಾಂಗ್ಲಾದೇಶದ ಆರೋಪದ ನಂತರ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಭಾನುವಾರದಂದು ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರನ್ನು ಕರೆಸಿತ್ತು. ಈ ಕ್ರಮಗಳು ಎರಡೂ ದೇಶಗಳ ಗಡಿ ಚಟುವಟಿಕೆಗಳನ್ನು ನಿಯಂತ್ರಿಸುವ ದ್ವಿಪಕ್ಷೀಯ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಪ್ರಣಯ್ ವರ್ಮಾ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆ ಸುಮಾರಿಗೆ ಢಾಕಾದಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಗೆ ತೆರಳಿದರು. ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಶಿಮ್ ಉದ್ದೀನ್ ಅವರೊಂದಿಗಿನ ಅವರ ಸಭೆ ಸುಮಾರು 45 ನಿಮಿಷಗಳ ಕಾಲ ನಡೆಯಿತು ಎಂದು ಸರ್ಕಾರಿ ಸ್ವಾಮ್ಯದ ಬಾಂಗ್ಲಾದೇಶ ಸಂಗ್ಬಾದ್ ಸಂಗ್ಸ್ಥಾ (ಬಿಎಸ್ಎಸ್) ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ವೀಸಾ ವಿಸ್ತರಣೆ ಬೆನ್ನಲ್ಲೇ ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ಈ ಸಭೆಯ ನಂತರ, ಪ್ರಣಯ್ ವರ್ಮಾ ಮಾಧ್ಯಮಗಳಿಗೆ ಮಾತನಾಡಿ, ಭದ್ರತಾ ಕಾರಣಗಳಿಗಾಗಿ ಢಾಕಾ ಮತ್ತು ನವದೆಹಲಿ ಎರಡೂ ಗಡಿ ಬೇಲಿ ಹಾಕುವ ಬಗ್ಗೆ ಒಪ್ಪಂದಗಳನ್ನು ಮಾಡಿಕೊಂಡಿವೆ ಎಂದು ಹೇಳಿದರು. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಬಾಂಗ್ಲಾದೇಶ ಗಡಿ ಕಾವಲು ಪಡೆ (ಬಿಜಿಬಿ) ಈ ವಿಷಯದ ಬಗ್ಗೆ ನಿಯಮಿತವಾಗಿ ಸಂವಹನ ನಡೆಸುತ್ತಿವೆ. ಗಡಿ ಸಂಬಂಧಿತ ಅಪರಾಧಗಳನ್ನು ಪರಿಹರಿಸಲು ಸಹಯೋಗದ ವಿಧಾನವನ್ನು ಉತ್ತೇಜಿಸುವ ಮೂಲಕ ಈ ಒಪ್ಪಂದಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗುವುದು ಎಂದು ವರ್ಮಾ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ