AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2021: ಮುಂಬೈನಲ್ಲಿ ಮಹಾ ಮಳೆ; ಮುಂದಿನ ಎರಡು ದಿನ ಆರೆಂಜ್​ ಅಲರ್ಟ್​​, ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳು ಸನ್ನದ್ಧ

Mumbai Rain: ಮುಂಬೈನ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಬೀಳುವ ಸಾಧ್ಯತೆ ಇದೆ. ಹಾಗೇ ಉಪನಗರಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಮುಂಬೈ ಹವಾಮಾನ ಇಲಾಖೆಯ ಉಪ ನಿರ್ದೇಶಕರಾದ ಶುಭಾಂಗಿ ಭೂತೆ ತಿಳಿಸಿದ್ದಾರೆ.

Monsoon 2021: ಮುಂಬೈನಲ್ಲಿ ಮಹಾ ಮಳೆ; ಮುಂದಿನ ಎರಡು ದಿನ ಆರೆಂಜ್​ ಅಲರ್ಟ್​​, ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳು ಸನ್ನದ್ಧ
ಮುಂಬೈ ಮಳೆ
Follow us
TV9 Web
| Updated By: Lakshmi Hegde

Updated on:Jun 13, 2021 | 1:25 PM

ಮುಂಬೈ: ನಗರದಲ್ಲಿ ವಿಪರೀತ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಿಸಿದೆ. ಭಾನುವಾರ ಮತ್ತು ಸೋಮವಾರ ಎರಡೂ ದಿನ ಈ ಆರೆಂಜ್​ ಅಲರ್ಟ್​ ಇರಲಿದೆ. ಶನಿವಾರದವರೆಗೆ ಮುಂಬೈ ನಗರಿಯಲ್ಲಿ ರೆಡ್ ಅಲರ್ಟ್​ ಇತ್ತು. ನಿನ್ನೆ ರಾತ್ರಿಯಿಂದ ಅದನ್ನು ಆರೆಂಜ್​ ಅಲರ್ಟ್​​ಗೆ ಬದಲಿಸಲಾಗಿದೆ. ಅಂದರೆ ಮುಂದಿನ ಎರಡು ದಿನ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದ್ದು, ಜನರು ತೀವ್ರ ಎಚ್ಚರಿಕೆಯಿಂದ ಇರಬೇಕಾಗಿದೆ. ಮುಂಬೈನ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಬೀಳುವ ಸಾಧ್ಯತೆ ಇದೆ. ಹಾಗೇ ಉಪನಗರಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಮುಂಬೈ ಹವಾಮಾನ ಇಲಾಖೆಯ ಉಪ ನಿರ್ದೇಶಕರಾದ ಶುಭಾಂಗಿ ಭೂತೆ ತಿಳಿಸಿದ್ದಾರೆ. ಹಾಗೆ ಮಳೆಯಿಂದಾಗುವ ಅಸ್ತವ್ಯಸ್ತ ಪರಿಸ್ಥಿತಿ ನಿಭಾಯಿಸಲು ಬೃಹನ್​​ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್​ (ಬಿಎಂಸಿ) ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಂಡಿದೆ.

ಎಲ್ಲ ಸಿವಿಕ್​ ಕಂಟ್ರೋಲ್​ ರೂಂಗಳು, ವಿದ್ಯುತ್​ ಸಂಸ್ಥೆಗಳಿಗೆ ಹೈಅಲರ್ಟ್​ ಆಗಿರುವಂತ ನಿರ್ದೇಶನ ನೀಡಲಾಗಿದೆ. ಇನ್ನುಳಿದಂತೆ ಕರಾವಳಿ ಭದ್ರತಾ ಪಡೆ, ನೌಕಾಪಡೆ, ಎನ್​ಡಿಆರ್​ಎಫ್​ ತಂಡಗಳೂ ಸಹ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿವೆ. ಶನಿವಾರ ಬೆಳಗ್ಗೆ 8ಗಂಟೆಗೆ ಕೊನೆಯಾಗುವಂತೆ 24 ಗಂಟೆಯಲ್ಲಿ ಮುಂಬೈನಲ್ಲಿ ಸರಾಸರಿ 79.66 ಎಂಎಂ ಮಳೆಯಾಗಿದೆ. ಹಾಗೇ ಪೂರ್ವ ಮತ್ತು ಪಶ್ವಿಮ ಉಪನಗರಗಳಲ್ಲಿ ಅನುಕ್ರಮವಾಗಿ 92.68 ಎಂಎಂ ಮತ್ತು 89.30 ಮಿಮೀ ಮಳೆಯಾಗಿದೆ.

ಕರ್ನಾಟಕದಲ್ಲಿ ಜೂ.16ರವರೆಗೆ ಭಾರಿ ಮಳೆ ಇನ್ನು ಕರ್ನಾಟಕದಲ್ಲಿ ಸಹ ಮುಂದಿನ ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ಮಾಹಿತಿ ನೀಡಿದ್ದಾರೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಆರೆಂಜ್​ ಅಲರ್ಟ್ ಘೋಷಣೆಯಾಗಿದೆ. ಜೂನ್​ 1ರಿಂದಲೂ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಇದನ್ನೂ ಓದಿ: Salt: ಹೆಚ್ಚು ಉಪ್ಪು ಸೇವಿಸುವ ಅಭ್ಯಾಸವಿದೆಯೇ? ಹಾಗಿದ್ದರೆ ಈ ರೋಗಲಕ್ಷಣಗಳ ಬಗ್ಗೆ ಎಚ್ಚರವಹಿಸಿ

(Amid Heavy Rain Lashes IMD issues Orange alert in Mumbai)

Published On - 1:00 pm, Sun, 13 June 21

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ