AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ಒಮಿಕ್ರಾನ್​ ಕೂಡ ಹೆಚ್ಚುತ್ತಿರುವುದರಿಂದ ದೆಹಲಿಯ ಆರೋಗ್ಯ ತಜ್ಞರು, ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.  ಜನರು ಗುಂಪುಗೂಡಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ.

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 26, 2021 | 9:25 PM

Share

ದೆಹಲಿ: ಒಂದೆಡೆ ಹೊಸವರ್ಷ ಸಮೀಪಿಸುತ್ತಿದೆ..ಇನ್ನೊಂದೆಡೆ ದೇಶದಲ್ಲಿ ಒಮಿಕ್ರಾನ್​ ವೈರಾಣು (Omicron Variant) ಸೋಂಕಿತರ ಸಂಖ್ಯೆಯೂ ಏರುತ್ತಿದೆ. ಹೀಗಿರುವಾಗ ಒಂದೊಂದೇ ರಾಜ್ಯಗಳು ಕಠಿಣ ನಿರ್ಬಂಧ ಹೇರಲು ಶುರುಮಾಡಿವೆ. ಈಗಾಗಲೇ ಕರ್ನಾಟಕ, ಗುಜರಾತ್​, ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಹರ್ಯಾಣಗಳಲ್ಲಿ  ರಾತ್ರಿ ಕರ್ಫ್ಯೂ (Night Curfew) ಸೇರಿ, ಇನ್ನಿತರ ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ರಾಷ್ಟ್ರರಾಜಧಾನಿ ದೆಹಲಿ ಕೂಡ ಅದೇ ಸಾಲಿಗೆ ಸೇರಿದೆ.  ದೆಹಲಿಯಲ್ಲಿ ಕೊವಿಡ್​ 19 ಸೋಂಕು ಮತ್ತು ಒಮಿಕ್ರಾನ್​ ಸೋಂಕಿನ ಪ್ರಮಾಣದಲ್ಲಿ ತುಸು ಏರಿಕೆಯಾದ ಬೆನ್ನಲ್ಲೇ, ಅಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಪ್ರಾರಂಭವಾಗಲಿದೆ. 

ದೆಹಲಿಯಲ್ಲಿ ಸೋಮವಾರ (ಡಿ.27)ದಿಂದ ರಾತ್ರಿ 11ರಿಂದ ಮುಂಜಾನೆ 5ಗಂಟೆವರೆಗೆ ಕರ್ಫ್ಯೂ ಇರಲಿದೆ.  ಕಳೆದ 24ಗಂಟೆಯಲ್ಲಿ 290 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲೀಗ ಶೇ.0.55ರಷ್ಟು ಪಾಸಿಟಿವಿಟಿ ರೇಟ್​ ಇದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.  ದೆಹಲಿಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 14,43,352ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1103 ಆಗಿದೆ. ಸದ್ಯ 583 ಕೊರೊನಾ ರೋಗಿಗಳು ಐಸೋಲೇಶನ್​​ನಲ್ಲಿದ್ದಾರೆ.  ದೆಹಲಿಯಲ್ಲಿ ಶನಿವಾರ 249 ಕೊವಿಡ್​ ಪ್ರಕರಣಗಳು ಪತ್ತೆಯಾಗಿತ್ತು. ಇದು ಜೂನ್​ 13ರ ನಂತರ ದಾಖಲಾದ ಅತ್ಯಂತ ಹೆಚ್ಚಿನ ಸಂಖ್ಯೆಯಾಗಿದೆ.

ಈಗಂತೂ ಒಮಿಕ್ರಾನ್​ ಕೂಡ ಹೆಚ್ಚುತ್ತಿರುವುದರಿಂದ ದೆಹಲಿಯ ಆರೋಗ್ಯ ತಜ್ಞರು, ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.  ಜನರು ಗುಂಪುಗೂಡಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಇನ್ನು ಮುಂಬರುವ ದಿನಗಳಲ್ಲಿ ಒಮಿಕ್ರಾನ್​ ಮಿತಿಮೀರಿದರೂ ಕೂಡ ಸುಮಾರು ಒಂದು ಲಕ್ಷ ರೋಗಿಗಳಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿ, ಬೆಡ್​ಗಳು, ಔಷಧಿಗಳು ಮತ್ತು ಆಕ್ಸಿಜನ್​ ಲಭ್ಯ ಇರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​

Published On - 9:25 pm, Sun, 26 December 21

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು