AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ಒಮಿಕ್ರಾನ್​ ಕೂಡ ಹೆಚ್ಚುತ್ತಿರುವುದರಿಂದ ದೆಹಲಿಯ ಆರೋಗ್ಯ ತಜ್ಞರು, ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.  ಜನರು ಗುಂಪುಗೂಡಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ.

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 26, 2021 | 9:25 PM

Share

ದೆಹಲಿ: ಒಂದೆಡೆ ಹೊಸವರ್ಷ ಸಮೀಪಿಸುತ್ತಿದೆ..ಇನ್ನೊಂದೆಡೆ ದೇಶದಲ್ಲಿ ಒಮಿಕ್ರಾನ್​ ವೈರಾಣು (Omicron Variant) ಸೋಂಕಿತರ ಸಂಖ್ಯೆಯೂ ಏರುತ್ತಿದೆ. ಹೀಗಿರುವಾಗ ಒಂದೊಂದೇ ರಾಜ್ಯಗಳು ಕಠಿಣ ನಿರ್ಬಂಧ ಹೇರಲು ಶುರುಮಾಡಿವೆ. ಈಗಾಗಲೇ ಕರ್ನಾಟಕ, ಗುಜರಾತ್​, ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಹರ್ಯಾಣಗಳಲ್ಲಿ  ರಾತ್ರಿ ಕರ್ಫ್ಯೂ (Night Curfew) ಸೇರಿ, ಇನ್ನಿತರ ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ರಾಷ್ಟ್ರರಾಜಧಾನಿ ದೆಹಲಿ ಕೂಡ ಅದೇ ಸಾಲಿಗೆ ಸೇರಿದೆ.  ದೆಹಲಿಯಲ್ಲಿ ಕೊವಿಡ್​ 19 ಸೋಂಕು ಮತ್ತು ಒಮಿಕ್ರಾನ್​ ಸೋಂಕಿನ ಪ್ರಮಾಣದಲ್ಲಿ ತುಸು ಏರಿಕೆಯಾದ ಬೆನ್ನಲ್ಲೇ, ಅಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಪ್ರಾರಂಭವಾಗಲಿದೆ. 

ದೆಹಲಿಯಲ್ಲಿ ಸೋಮವಾರ (ಡಿ.27)ದಿಂದ ರಾತ್ರಿ 11ರಿಂದ ಮುಂಜಾನೆ 5ಗಂಟೆವರೆಗೆ ಕರ್ಫ್ಯೂ ಇರಲಿದೆ.  ಕಳೆದ 24ಗಂಟೆಯಲ್ಲಿ 290 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲೀಗ ಶೇ.0.55ರಷ್ಟು ಪಾಸಿಟಿವಿಟಿ ರೇಟ್​ ಇದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.  ದೆಹಲಿಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 14,43,352ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1103 ಆಗಿದೆ. ಸದ್ಯ 583 ಕೊರೊನಾ ರೋಗಿಗಳು ಐಸೋಲೇಶನ್​​ನಲ್ಲಿದ್ದಾರೆ.  ದೆಹಲಿಯಲ್ಲಿ ಶನಿವಾರ 249 ಕೊವಿಡ್​ ಪ್ರಕರಣಗಳು ಪತ್ತೆಯಾಗಿತ್ತು. ಇದು ಜೂನ್​ 13ರ ನಂತರ ದಾಖಲಾದ ಅತ್ಯಂತ ಹೆಚ್ಚಿನ ಸಂಖ್ಯೆಯಾಗಿದೆ.

ಈಗಂತೂ ಒಮಿಕ್ರಾನ್​ ಕೂಡ ಹೆಚ್ಚುತ್ತಿರುವುದರಿಂದ ದೆಹಲಿಯ ಆರೋಗ್ಯ ತಜ್ಞರು, ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.  ಜನರು ಗುಂಪುಗೂಡಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಇನ್ನು ಮುಂಬರುವ ದಿನಗಳಲ್ಲಿ ಒಮಿಕ್ರಾನ್​ ಮಿತಿಮೀರಿದರೂ ಕೂಡ ಸುಮಾರು ಒಂದು ಲಕ್ಷ ರೋಗಿಗಳಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿ, ಬೆಡ್​ಗಳು, ಔಷಧಿಗಳು ಮತ್ತು ಆಕ್ಸಿಜನ್​ ಲಭ್ಯ ಇರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​

Published On - 9:25 pm, Sun, 26 December 21

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ