AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಏರಿಕೆಯಾಗುತ್ತಿರುವ ಒಮಿಕ್ರಾನ್​ ಸೋಂಕಿತರ ಸಂಖ್ಯೆ; ಇಂದು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ

ದೇಶದಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣಗಳ ಸಂಖ್ಯೆ  34,758,481 ಆಗಿದ್ದು, ಇಲ್ಲಿಯವರೆಗೆ 478,325 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 78,190 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಕಳೆದ 575 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಸಕ್ರಿಯ ಕೇಸ್​ ಆಗಿದೆ.

ದೇಶದಲ್ಲಿ ಏರಿಕೆಯಾಗುತ್ತಿರುವ ಒಮಿಕ್ರಾನ್​ ಸೋಂಕಿತರ ಸಂಖ್ಯೆ; ಇಂದು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Dec 23, 2021 | 10:15 AM

Share

ದೇಶದಲ್ಲಿ ಕೊವಿಡ್​ 19 ಹೊಸ ತಳಿ ಒಮಿಕ್ರಾನ್​ ರೂಪಾಂತರ (Omicron Variant) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು ಸಂಜೆ 6ಗಂಟೆಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊವಿಡ್​ 19, ಒಮಿಕ್ರಾನ್​ ಪರಿಸ್ಥಿತಿ ಬಗ್ಗೆ ಅವರು ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಭಾರತದಲ್ಲಿ ಸದ್ಯ 200ಕ್ಕೂ ಹೆಚ್ಚು ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿಹೆಚ್ಚು ಅಂದರೆ 57 ಒಮಿಕ್ರಾನ್​ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ 54, ತೆಲಂಗಾಣದಲ್ಲಿ 24, ಕರ್ನಾಟಕದಲ್ಲಿ 19, ರಾಜಸ್ಥಾನ 18, ಕೇರಳದಲ್ಲಿ 15, ಗುಜರಾತ್​ನಲ್ಲಿ 14, ಜಮ್ಮು-ಕಾಶ್ಮೀರದಲ್ಲಿ 3, ಒಡಿಶಾ, ಆಂಧ್ರಪ್ರದೇಶ, ಹೈದರಾಬಾದ್​, ತಮಿಳುನಾಡು, ಉತ್ತರಪ್ರದೇಶ, ಕೇರಳ ರಾಜ್ಯಗಳಲ್ಲೂ ಕೂಡ ಒಮಿಕ್ರಾನ್​ ದಾಖಲಾಗಿದೆ.  ಒಮಿಕ್ರಾನ್​ ಪ್ರಸರಣದಿಂದಾಗಿ ದೇಶದಲ್ಲಿ ಫೆಬ್ರವರಿ ಹೊತ್ತಿಗೆ ಕೊವಿಡ್​ 19 ಮೂರನೆ ಅಲೆ ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. 

ದೇಶದಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣಗಳ ಸಂಖ್ಯೆ  34,758,481 ಆಗಿದ್ದು, ಇಲ್ಲಿಯವರೆಗೆ 478,325 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 78,190 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಕಳೆದ 575 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಸಕ್ರಿಯ ಕೇಸ್​ ಆಗಿದೆ. ಆದರೆ ಇದೀಗ ಒಮಿಕ್ರಾನ್​ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ಮತ್ತೆ ವಾರ್​ ರೂಂಗಳನ್ನು ಸಕ್ರಿಯ ಗೊಳಿಸಿ, ರಾತ್ರಿ ಕರ್ಫ್ಯೂ, ಗುಂಪುಗೂಡುವಿಕೆ ನಿಷೇಧದಂತ ಕ್ರಮಗಳನ್ನು ಕೈಗೊಳ್ಳಲು ಪ್ರಾರಂಭಿಸಿ ಎಂದು ಸೂಚಿಸಿದ್ದಾರೆ. ಈ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸ್ವತಃ ಸಭೆ ನಡೆಸಿ, ಪರಿಸ್ಥಿತಿ ಪರಿಶೀಲನೆ ಮಾಡಲಿದ್ದಾರೆ.

ಒಮಿಕ್ರಾನ್​ ಬಗ್ಗೆ ಆರೋಗ್ಯ ತಜ್ಞರಂತೂ ಪದೇಪದೆ ಎಚ್ಚರಿಕೆ ನೀಡುತ್ತಿದ್ದಾರೆ. ಇದು ಡೆಲ್ಟಾದಷ್ಟು ಮಾರಣಾಂತಿಕವಲ್ಲದೆ ಇದ್ದರೂ, ಅದಕ್ಕಿಂತ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ಹೇಳುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಇದನ್ನೇ ಒತ್ತಿ ಹೇಳಿದೆ. ಕೊವಿಡ್​ 19 ಮುನ್ನೆಚ್ಚರಿಕಾ ಕ್ರಮಗಳನ್ನು ಜನರು ನಿರ್ಲಕ್ಷಿಸಬಾರದು. ಇನ್ನೂ ಲಸಿಕೆ ತೆಗೆದುಕೊಳ್ಳದೆ ಇರುವರು ಕೂಡಲೇ ಹೋಗಿ ಲಸಿಕೆ ತೆಗೆದುಕೊಳ್ಳಬೇಕು ಎಂದು ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಹೇಳಿದ್ದಾರೆ.

ಇದನ್ನೂ ಓದಿ: ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Published On - 9:34 am, Thu, 23 December 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ