ದೇಶದಲ್ಲಿ ಏರಿಕೆಯಾಗುತ್ತಿರುವ ಒಮಿಕ್ರಾನ್​ ಸೋಂಕಿತರ ಸಂಖ್ಯೆ; ಇಂದು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ

| Updated By: Lakshmi Hegde

Updated on: Dec 23, 2021 | 10:15 AM

ದೇಶದಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣಗಳ ಸಂಖ್ಯೆ  34,758,481 ಆಗಿದ್ದು, ಇಲ್ಲಿಯವರೆಗೆ 478,325 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 78,190 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಕಳೆದ 575 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಸಕ್ರಿಯ ಕೇಸ್​ ಆಗಿದೆ.

ದೇಶದಲ್ಲಿ ಏರಿಕೆಯಾಗುತ್ತಿರುವ ಒಮಿಕ್ರಾನ್​ ಸೋಂಕಿತರ ಸಂಖ್ಯೆ; ಇಂದು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ
ಪ್ರಧಾನಿ ನರೇಂದ್ರ ಮೋದಿ
Follow us on

ದೇಶದಲ್ಲಿ ಕೊವಿಡ್​ 19 ಹೊಸ ತಳಿ ಒಮಿಕ್ರಾನ್​ ರೂಪಾಂತರ (Omicron Variant) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಇಂದು ಸಂಜೆ 6ಗಂಟೆಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊವಿಡ್​ 19, ಒಮಿಕ್ರಾನ್​ ಪರಿಸ್ಥಿತಿ ಬಗ್ಗೆ ಅವರು ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಭಾರತದಲ್ಲಿ ಸದ್ಯ 200ಕ್ಕೂ ಹೆಚ್ಚು ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿಹೆಚ್ಚು ಅಂದರೆ 57 ಒಮಿಕ್ರಾನ್​ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ 54, ತೆಲಂಗಾಣದಲ್ಲಿ 24, ಕರ್ನಾಟಕದಲ್ಲಿ 19, ರಾಜಸ್ಥಾನ 18, ಕೇರಳದಲ್ಲಿ 15, ಗುಜರಾತ್​ನಲ್ಲಿ 14, ಜಮ್ಮು-ಕಾಶ್ಮೀರದಲ್ಲಿ 3, ಒಡಿಶಾ, ಆಂಧ್ರಪ್ರದೇಶ, ಹೈದರಾಬಾದ್​, ತಮಿಳುನಾಡು, ಉತ್ತರಪ್ರದೇಶ, ಕೇರಳ ರಾಜ್ಯಗಳಲ್ಲೂ ಕೂಡ ಒಮಿಕ್ರಾನ್​ ದಾಖಲಾಗಿದೆ.  ಒಮಿಕ್ರಾನ್​ ಪ್ರಸರಣದಿಂದಾಗಿ ದೇಶದಲ್ಲಿ ಫೆಬ್ರವರಿ ಹೊತ್ತಿಗೆ ಕೊವಿಡ್​ 19 ಮೂರನೆ ಅಲೆ ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. 

ದೇಶದಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣಗಳ ಸಂಖ್ಯೆ  34,758,481 ಆಗಿದ್ದು, ಇಲ್ಲಿಯವರೆಗೆ 478,325 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 78,190 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಕಳೆದ 575 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಸಕ್ರಿಯ ಕೇಸ್​ ಆಗಿದೆ. ಆದರೆ ಇದೀಗ ಒಮಿಕ್ರಾನ್​ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, ಮತ್ತೆ ವಾರ್​ ರೂಂಗಳನ್ನು ಸಕ್ರಿಯ ಗೊಳಿಸಿ, ರಾತ್ರಿ ಕರ್ಫ್ಯೂ, ಗುಂಪುಗೂಡುವಿಕೆ ನಿಷೇಧದಂತ ಕ್ರಮಗಳನ್ನು ಕೈಗೊಳ್ಳಲು ಪ್ರಾರಂಭಿಸಿ ಎಂದು ಸೂಚಿಸಿದ್ದಾರೆ. ಈ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸ್ವತಃ ಸಭೆ ನಡೆಸಿ, ಪರಿಸ್ಥಿತಿ ಪರಿಶೀಲನೆ ಮಾಡಲಿದ್ದಾರೆ.

ಒಮಿಕ್ರಾನ್​ ಬಗ್ಗೆ ಆರೋಗ್ಯ ತಜ್ಞರಂತೂ ಪದೇಪದೆ ಎಚ್ಚರಿಕೆ ನೀಡುತ್ತಿದ್ದಾರೆ. ಇದು ಡೆಲ್ಟಾದಷ್ಟು ಮಾರಣಾಂತಿಕವಲ್ಲದೆ ಇದ್ದರೂ, ಅದಕ್ಕಿಂತ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ಹೇಳುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಇದನ್ನೇ ಒತ್ತಿ ಹೇಳಿದೆ. ಕೊವಿಡ್​ 19 ಮುನ್ನೆಚ್ಚರಿಕಾ ಕ್ರಮಗಳನ್ನು ಜನರು ನಿರ್ಲಕ್ಷಿಸಬಾರದು. ಇನ್ನೂ ಲಸಿಕೆ ತೆಗೆದುಕೊಳ್ಳದೆ ಇರುವರು ಕೂಡಲೇ ಹೋಗಿ ಲಸಿಕೆ ತೆಗೆದುಕೊಳ್ಳಬೇಕು ಎಂದು ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಹೇಳಿದ್ದಾರೆ.

ಇದನ್ನೂ ಓದಿ: ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್​ ಆನಂದ್​ ಪುತ್ರಿಯ ಮಸ್ತ್​ ಮಾತುಕತೆ

Published On - 9:34 am, Thu, 23 December 21