AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ನಡುವೆ ಪ್ರಧಾನಿ ಮೋದಿ ಇಂದು ಕಚ್ ರೈತರ ಭೇಟಿ, ಸಿಖ್ ಸಮುದಾಯದೊಂದಿಗೆ ಮಾತುಕತೆ

ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಯು 20 ದಿನಗಳಿಂದ ನಡೆಯುತ್ತಿದೆ, ಸರ್ಕಾರದ ಪರವಾಗಿ ಹಲವು ಸಚಿವರು ರೈತರ ಜೊತೆ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಇಂದು ಸಿಖ್ ಸಮುದಾಯದ ರೈತರ ಜೊತೆ ಮಾತನಾಡಲಿದ್ದಾರೆ.

Delhi Chalo ನಡುವೆ ಪ್ರಧಾನಿ ಮೋದಿ ಇಂದು ಕಚ್ ರೈತರ ಭೇಟಿ, ಸಿಖ್ ಸಮುದಾಯದೊಂದಿಗೆ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ (FILE PHOTO)
Follow us
TV9 Web
| Updated By: ganapathi bhat

Updated on:Apr 07, 2022 | 10:43 AM

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಕಚ್ ಪ್ರದೇಶದ ರೈತರನ್ನು ಇಂದು ಭೇಟಿಯಾಗಲಿದ್ದಾರೆ. ಮೋದಿ ತಮ್ಮ ಗುಜರಾತ್ ಭೇಟಿಯ ನಡುವೆ ಈ ಸಭೆ ನಡೆಸಲಿದ್ದು, ಸಿಖ್ ಸಮುದಾಯದ ರೈತರ ಜೊತೆ ಮಾತನಾಡಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಯು 20 ದಿನಗಳಿಂದ ನಡೆಯುತ್ತಿದ್ದು, ಸರ್ಕಾರದ ಪರವಾಗಿ ಹಲವು ಸಚಿವರು ರೈತರ ಜೊತೆ ಮಾತುಕತೆ ನಡೆಸಿದ್ದರು. ಅವರ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಈ ಬಗ್ಗೆ ಪರೋಕ್ಷ ಪ್ರತಿಕ್ರಿಯೆಗಳನ್ನು ನೀಡಿದ್ದ ಮೋದಿ, ರೈತರೊಂದಿಗೆ ನೇರ ಸಂವಾದದಲ್ಲಿ ಭಾಗವಹಿಸಿರಲಿಲ್ಲ. ಮೋದಿಯ ಈ ನಡೆ ಹಲವು ಟೀಕೆಗಳಿಗೆ ಕಾರಣವಾಗಿತ್ತು. ಇಂದು ನಡೆಯುವ ರೈತರ ಜೊತೆಗಿನ ಪ್ರಧಾನಿ ಮಾತುಕತೆಯಲ್ಲಿ ಈ ಎಲ್ಲಾ ಆಕ್ಷೇಪಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ ಎಂದು ಊಹಿಸಲಾಗುತ್ತಿದೆ.

ಕಚ್​ನ ಧೊರ್ಡೊ ಪ್ರದೇಶದಲ್ಲಿ ಪ್ರಧಾನಿ ಮೋದಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿಶ್ವದ ಅತಿದೊಡ್ಡ ಹೈಬ್ರಿಡ್ ನವೀಕರಿಸಬಹುದಾದ ಶಕ್ತಿಕೇಂದ್ರ, ಶುದ್ಧ ಕುಡಿಯುವ ನೀರಿಗಾಗಿ ಡಿಸಾಲಿನೇಷನ್ ಕಾರ್ಖಾನೆ ಮತ್ತು ಹಾಲು ಶೀತಲೀಕರಣ ಕಾರ್ಖಾನೆ ಕಾಮಗಾರಿಗೆ ಅವರು ಅಡಿಗಲ್ಲು ಹಾಕಲಿದ್ದಾರೆ.

ಈ ಮುಖ್ಯ ಕಾರ್ಯಕ್ರಮಗಳಿಗೂ ಮೊದಲು ಮೋದಿ ರೈತರನ್ನು ಭೇಟಿಯಾಗಲಿದ್ದಾರೆ. ಭಾರತ-ಪಾಕ್ ಗಡಿಭಾಗದ ಕಚ್​ನ ರೈತರು ಪ್ರಧಾನಿಯನ್ನು ಸಂವಾದಕ್ಕೆ ಆಹ್ವಾನಿಸಿದ್ದಾರೆ. ಸುಮಾರು 5 ಸಾವಿರದಷ್ಟು ಸಿಖ್ ಕುಟುಂಬಗಳು ಈ ಪ್ರದೇಶದಲ್ಲಿವೆ ಎಂದು ಅಂದಾಜಿಸಲಾಗಿದೆ.

Published On - 1:34 pm, Tue, 15 December 20

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್