ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಕೇವಲ ಪ್ರವಾಸೋದ್ಯಮವನ್ನೇ ನಂಬಿರುವ ಮಾಲ್ಡೀವ್ಸ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧದ ಲೇವಡಿಯಿಂದ ಭಾರಿ ಹೊಡೆತ ಬಿದ್ದಿದೆ. ಈಗಾಗಲೇ ಹಲವು ಮಂದಿ ಮಾಲ್ಡೀವ್ಸ್​ಗೆ ಪ್ರವಾಸಕ್ಕೆಂದು ವಿಮಾನ, ಹೋಟೆಲ್​ಗಳನ್ನು ಬುಕ್​ ಮಾಡಿದವರು ರದ್ದುಗೊಳಿಸಿದ್ದಾರೆ. ಇದೀಗ ಈಸಿಮೈಟ್ರಿಪ್(EaseMyTrip)  ಸಹ ಸಂಸ್ಥಾಪಕ ನಿಶಾಂತ್ ಪಿಟ್ಟಿ ಅವರು ಮಾಲ್ಡೀವ್ಸ್​ಗೆ ತೆರಳಬೇಕಿದ್ದ ಎಲ್ಲಾ ವಿಮಾನಗಳ ಬುಕಿಂಗ್​ಗಳನ್ನು ರದ್ದುಗೊಳಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip
ಮಾಲ್ಡೀವ್ಸ್​
Follow us
|

Updated on: Jan 08, 2024 | 8:05 AM

ಕೇವಲ ಪ್ರವಾಸೋದ್ಯಮವನ್ನೇ ನಂಬಿರುವ ಮಾಲ್ಡೀವ್ಸ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧದ ಲೇವಡಿಯಿಂದ ಭಾರಿ ಹೊಡೆತ ಬಿದ್ದಿದೆ. ಈಗಾಗಲೇ ಹಲವು ಮಂದಿ ಮಾಲ್ಡೀವ್ಸ್​ಗೆ ಪ್ರವಾಸಕ್ಕೆಂದು ವಿಮಾನ, ಹೋಟೆಲ್​ಗಳನ್ನು ಬುಕ್​ ಮಾಡಿದವರು ರದ್ದುಗೊಳಿಸಿದ್ದಾರೆ. ಇದೀಗ ಈಸಿಮೈಟ್ರಿಪ್(EaseMyTrip)  ಸಹ ಸಂಸ್ಥಾಪಕ ನಿಶಾಂತ್ ಪಿಟ್ಟಿ ಅವರು ಮಾಲ್ಡೀವ್ಸ್​ಗೆ ತೆರಳಬೇಕಿದ್ದ ಎಲ್ಲಾ ವಿಮಾನಗಳ ಬುಕಿಂಗ್​ಗಳನ್ನು ರದ್ದುಗೊಳಿಸಿದ್ದಾರೆ.

ನರೇಂದ್ರ ಮೋದಿಯವರ ವಿರುದ್ಧ ಮಾಲ್ಡೀವ್ಸ್​ ಸಚಿವರು ನೀಡಿರುವ ಹೇಳಿಕೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ #BoycottMaldives ಎಂಬುದು ಹೆಚ್ಚು ಟ್ರೆಂಡ್​ ಆಗಿತ್ತು.

ಭಾರತದಿಂದ ಹೆಚ್ಚಿನ ಸಂಖ್ಯೆಯ ಜನರು ಮಾಲ್ಡೀವ್ಸ್‌ಗೆ ಭೇಟಿ ನೀಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಈಗ ದೊಡ್ಡ ಹೊಡೆತ ಬೀಳಬಹುದು ಎಂದು ಅಂದಾಜಿಸಲಾಗಿದೆ.

ನಿಶಾಂತ್ ಪಿಟ್ಟಿ ಎಕ್ಸ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ EaseMyTrip ಎಲ್ಲಾ ಮಾಲ್ಡೀವ್ಸ್ ವಿಮಾನ ಬುಕಿಂಗ್ ಅನ್ನು ರದ್ದುಗೊಳಿಸಿದೆ, ಇದರೊಂದಿಗೆ EaseMyTrip #ChaloLakshadweep ಅಭಿಯಾನವನ್ನು ಪ್ರಾರಂಭಿಸಿದೆ ಎಂಬುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Boycott Maldives: ಪ್ರಧಾನಿ ಮೋದಿಯ ಲಕ್ಷದ್ವೀಪ ಭೇಟಿ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ, ಭಾರತೀಯರು ಮಾಡಿದ್ದೇನು?

ಲಕ್ಷದ್ವೀಪದ ನೀರು ಮತ್ತು ಕಡಲತೀರಗಳು ಮಾಲ್ಡೀವ್ಸ್‌ನಂತೆಯೇ ಉತ್ತಮವಾಗಿವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭೇಟಿ ನೀಡಿದ ಈ ತಾಣವನ್ನು ನಾವು ಮತ್ತಷ್ಟು ಪ್ರಚಾರ ಮಾಡಲಿದ್ದೇವೆ ಜತೆಗೆ ವಿಶೇಷ ಕೊಡುಗೆಯನ್ನೂ ಕೂಡ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾಸಿಗರು ಮಾಲ್ಡೀವ್ಸ್‌ಗೆ ಹೋಗುವ ಬದಲು ಲಕ್ಷದ್ವೀಪಕ್ಕೆ ಭೇಟಿ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಪ್ರಸ್ತುತ ಮಾಲ್ಡೀವ್ಸ್ ಸರ್ಕಾರವು ಚೀನಾದತ್ತ ಒಲವು ತೋರುತ್ತಿದೆ ಎಂಬ ಆರೋಪವೂ ಇದೆ.

ಭಾರತದೊಂದಿಗಿನ ವಿವಾದದ ನಡುವೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ಮುಯಿಝು, ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡುವ ಮೊದಲು ಚೀನಾಕ್ಕೆ ಭೇಟಿ ನೀಡುವುದಾಗಿ ಘೋಷಿಸುವ ಮೂಲಕ ಸಂಪ್ರದಾಯವನ್ನು ಮುರಿದಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಲೇವಡಿ ಮಾಡಿದ್ದ ಮೂವರು ಸಚಿವರನ್ನು ಮಾಲ್ಡೀವ್ಸ್​ ಸರ್ಕಾರ ಅಮಾನತುಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ