AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್‌ಬುಲ್ ಟೆರಿಯರ್ ಸೇರಿದಂತೆ 23 ‘ಅಪಾಯಕಾರಿ’ ಶ್ವಾನ ತಳಿ ನಿಷೇಧಕ್ಕೆ ಕೇಂದ್ರ ಪ್ರಸ್ತಾಪ

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.ಪತ್ರದ ಪ್ರಕಾರ, ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಅಪಾಯಕಾರಿ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ

ಪಿಟ್‌ಬುಲ್ ಟೆರಿಯರ್ ಸೇರಿದಂತೆ 23 'ಅಪಾಯಕಾರಿ' ಶ್ವಾನ ತಳಿ ನಿಷೇಧಕ್ಕೆ ಕೇಂದ್ರ ಪ್ರಸ್ತಾಪ
ಪಿಟ್ ಬುಲ್
ರಶ್ಮಿ ಕಲ್ಲಕಟ್ಟ
|

Updated on: Mar 13, 2024 | 9:04 PM

Share

ದೆಹಲಿ ಮಾರ್ಚ್ 13: ದೇಶಾದ್ಯಂತ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, “ಮಾನವನ ಜೀವಕ್ಕೆ ಅಪಾಯ” ಎಂದು ಪರಿಗಣಿಸಲಾದ 23 “ಅಪಾಯಕಾರಿ” ನಾಯಿ ತಳಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಪ್ರಸ್ತಾಪ ಮುಂದಿಟ್ಟಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.

ನಿಷೇಧಿತ ನಾಯಿ ತಳಿಗಳ ಪಟ್ಟಿ ಹೀಗಿದೆ

ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ.

ಪತ್ರದ ಪ್ರಕಾರ, ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಅಂತಹ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ. ಶ್ವಾನ ಸಾಕಣೆ ಮತ್ತು ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018 ರ ಜಾರಿಗಾಗಿ ಕೇಂದ್ರ ಸರ್ಕಾರವು ಸಹ ಕರೆ ನೀಡಿದೆ.

ಸಮಾಜದಲ್ಲಿ ಸಾಮಾನ್ಯವಾಗಿ ಶೋಷಣೆಗೆ ಒಳಗಾಗುವ ದುರ್ಬಲ ನಾಯಿ ತಳಿಗಳನ್ನು ರಕ್ಷಿಸಲು ಮತ್ತು ಮಾನವರ ಸುರಕ್ಷತೆಗಾಗಿ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಇಂಡಿಯಾದಿಂದ ಮನವಿ ಮಾಡಿದ ನಂತರ ಕೇಂದ್ರದ ಈ ಕ್ರಮವು ಬಂದಿದೆ. ಈ ಬಗ್ಗೆ ಪೇಟಾ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದೆ.

ಇದನ್ನೂ ಓದಿ: ಅಹ್ಮದ್‌ನಗರವನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ತನ್ನ ಅರ್ಜಿಯಲ್ಲಿ, PETA ಹೀಗೆ ಬರೆದಿದೆ: “ಈ ಆದೇಶವು ಮಾನವರು ಮತ್ತು ನಾಯಿಗಳೆರಡಕ್ಕೂ ಪ್ರಮುಖ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖವಾಗಿದೆ. ಪಿಟ್ ಬುಲ್‌ಗಳು ಮತ್ತು ಇತರ ತಳಿಗಳನ್ನು ಆಯುಧಗಳಾಗಿ ಬಳಸಲು ಬೆಳೆಸಲಾಗುತ್ತದೆ ಎಂಬ ಬಲವಾದ, ಸ್ಪಷ್ಟ ಸಂದೇಶವನ್ನು ಕಳುಹಿಸುತ್ತದೆ. ಪಿಟ್ ಬುಲ್‌ಗಳು ಮತ್ತು ಸಂಬಂಧಿತ ತಳಿಗಳನ್ನು ಭಾರತದಲ್ಲಿ ಸಾಮಾನ್ಯವಾಗಿ ಕೈಬಿಡಲಾಗುತ್ತದೆ. ಈ ಕ್ರಮವು ಅವುಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಬಹುದು.

ಕಳೆದ ಕೆಲವು ತಿಂಗಳುಗಳಲ್ಲಿ ದೇಶಾದ್ಯಂತ ನಾಯಿ ಕಡಿತದಿಂದ ಹಲವಾರು ಸಾವುಗಳು ಸಂಭವಿಸಿವೆ. ಮಂಗಳವಾರ, ಹಿಮಾಚಲದ ಬಿಲಾಸ್‌ಪುರ ಪ್ರದೇಶದಲ್ಲಿ ಬೀದಿನಾಯಿಯ ದಾಳಿಯಿಂದ 20 ಜನರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಕಳೆದ ತಿಂಗಳು, ದೆಹಲಿಯಲ್ಲಿ ಪಿಟ್‌ಬುಲ್‌ ಕಡಿತಕ್ಕೊಳಗಾಗಿ ಮಗುವೊಂದು 17 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿತ್ತು. ಕಳೆದ ವಾರ ನಡೆದ ಮತ್ತೊಂದು ಘಟನೆಯಲ್ಲಿ, ಗಾಜಿಯಾಬಾದ್‌ನಲ್ಲಿ ಪಿಟ್ ಬುಲ್ ದಾಳಿ ಮಾಡಿದ ನಂತರ 10 ವರ್ಷದ ಮಗು ತೀವ್ರವಾಗಿ ಗಾಯಗೊಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ