AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟ್ ಸಂಸ್ಥೆಗಳಿಗೆ ಭಾರತವೇ ಫೇವರಿಟ್; ಜಾಗತಿಕ ಬಿಕ್ಕಟ್ಟಿನ ನಡುವೆಯೂ ಹೂಡಿಕೆಯ ಮಹಾಪೂರ!

ಜಾಗತಿಕ ತೈಲ ಮತ್ತು ವ್ಯಾಪಾರ ಬಿಕ್ಕಟ್ಟಿನ ನಡುವೆಯೂ ವಿಶ್ವದ ಪ್ರಮುಖ ಕಂಪನಿಗಳು ಭಾರತದಲ್ಲಿ ಭಾರಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿವೆ. ಜಗತ್ತು ವ್ಯಾಪಾರ ಬಿಕ್ಕಟ್ಟು ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಸವಾಲುಗಳನ್ನು ಎದುರಿಸುತ್ತಿದ್ದರೂ ಜಾಗತಿಕ ಕಂಪನಿಗಳ ಬೋರ್ಡ್‌ರೂಮ್‌ಗಳು ಭಾರತದಲ್ಲಿ ಹೊಸ ಹೂಡಿಕೆಗಳನ್ನು ಮಾಡಲು ಸಾಲುಗಟ್ಟಿ ನಿಂತಿವೆ. ಇದು ಭಾರತದ ಪಾಲಿಗೆ ಅತ್ಯಂತ ಸಂತೋಷದ ಸಂಗತಿಯಾಗಿದೆ. ಜಾಗತಿಕ ಸಿಇಒಗಳು ಮತ್ತು ಪ್ರಮುಖ ಕಂಪನಿಗಳು ಭಾರತಕ್ಕಾಗಿ ಘೋಷಿಸಿರುವ ಕೆಲವು ಬೃಹತ್ ಹೂಡಿಕೆಗಳ ವಿವರಗಳು ಇಲ್ಲಿವೆ.

ಕಾರ್ಪೊರೇಟ್ ಸಂಸ್ಥೆಗಳಿಗೆ ಭಾರತವೇ ಫೇವರಿಟ್; ಜಾಗತಿಕ ಬಿಕ್ಕಟ್ಟಿನ ನಡುವೆಯೂ ಹೂಡಿಕೆಯ ಮಹಾಪೂರ!
Indian EconomyImage Credit source: Getty Image
ಸುಷ್ಮಾ ಚಕ್ರೆ
|

Updated on: Jun 25, 2026 | 11:15 PM

Share

ಮುಖ್ಯಾಂಶಗಳು

  • ಭಾರತದಲ್ಲಿ 4 ತಿಂಗಳಿಂದ ಭಾರೀ ಹೂಡಿಕೆ
  • ಸ್ಥಿರವಾಗಿದೆ ಭಾರತದ ಆರ್ಥಿಕ ಬೆಳವಣಿಗೆಯ ದರ
  • ಅಮೆಜಾನ್‌ 48 ಬಿಲಿಯನ್ ಡಾಲರ್ ಹೂಡಿಕೆ

ನವದೆಹಲಿ, ಜೂನ್ 25: ವಿಶ್ವದಾದ್ಯಂತ ಭೌಗೋಳಿಕ ರಾಜಕೀಯ ಉದ್ವಿಗ್ನತೆ, ವ್ಯಾಪಾರ ಬಿಕ್ಕಟ್ಟು ಮತ್ತು ಪಶ್ಚಿಮ ಏಷ್ಯಾದ ಆರ್ಥಿಕ ಸವಾಲುಗಳು ಮುಂದುವರಿದಿದ್ದರೂ, ಜಾಗತಿಕ ಕಾರ್ಪೊರೇಟ್ ವಲಯಕ್ಕೆ ಭಾರತದ ಮೇಲಿರುವ ಭರವಸೆ ಕುಗ್ಗಿಲ್ಲ. ವಿಶ್ವದ ಪ್ರಮುಖ ಉದ್ಯಮ ಸಂಸ್ಥೆಗಳು ಭಾರತವನ್ನು ಮುಂದಿನ ದೂಡ್ಡ ಆರ್ಥಿಕ ಬೆಳವಣಿಗೆಯ ಇಂಜಿನ್ ಎಂದು ಗುರುತಿಸಿದ್ದು, ದೇಶದಲ್ಲಿ ಭಾರಿ ಪ್ರಮಾಣದ ಮಲ್ಟಿ-ಬಿಲಿಯನ್ ಡಾಲರ್ ಹೂಡಿಕೆಗಳನ್ನು (Investments) ಮಾಡಲು ಮುಂದಾಗಿವೆ.

ಇತ್ತೀಚಿನ ತಿಂಗಳುಗಳಲ್ಲಿ ಗೂಗಲ್, ಅಮೆಜಾನ್ ಮತ್ತು ಏರ್‌ಟ್ರಂಕ್‌ನಂತಹ ಜಾಗತಿಕ ದೈತ್ಯರು ಭಾರತದ ಡಿಜಿಟಲ್ ಹಾಗೂ ಕೈಗಾರಿಕಾ ಮೂಲಸೌಕರ್ಯವನ್ನು ವಿಸ್ತರಿಸಲು ಬೃಹತ್ ಯೋಜನೆಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಅಮೆಜಾನ್ ಬಿಗ್ ಪ್ಲಾನ್; ಸಿಇಒ ಆಂಡಿ ಜಸ್ಸಿ-ಮೋದಿ ಭೇಟಿ; ಐದು ವರ್ಷದಲ್ಲಿ 4.5 ಲಕ್ಷ ಕೋಟಿ ರೂ ಹೂಡಿಕೆ ಘೋಷಣೆ

ಗೂಗಲ್ — 15 ಬಿಲಿಯನ್ ಡಾಲರ್ (ಫೆಬ್ರವರಿ 18, 2026):

ಗೂಗಲ್ ಸಂಸ್ಥೆಯು ಭಾರತದಲ್ಲಿ 5 ವರ್ಷಗಳ ಅವಧಿಯ ಸುಮಾರು 15 ಶತಕೋಟಿ ಡಾಲರ್ ಎಐ (AI) ಮೂಲಸೌಕರ್ಯ ಯೋಜನೆಯನ್ನು ಘೋಷಿಸಿದೆ. ಇದು ಸಬ್‌ಸೀ ಕನೆಕ್ಟಿವಿಟಿ (ಸಮುದ್ರಾಂತರ ಸಂಪರ್ಕ), ಡೇಟಾ ಸೆಂಟರ್‌ಗಳು, ಕ್ಲೌಡ್ ಸಾಮರ್ಥ್ಯ ಮತ್ತು ಭಾರತದಲ್ಲಿ ಎಐ ಕೌಶಲ್ಯ ಅಭಿವೃದ್ಧಿಯನ್ನು ಒಳಗೊಂಡಿದೆ.

ಎಬಿಬಿ — 75 ಮಿಲಿಯನ್ ಡಾಲರ್ (ಮಾರ್ಚ್ 9, 2026):

ಎಬಿಬಿ ಕಂಪನಿಯು ಪ್ರಮುಖ ಕೈಗಾರಿಕಾ ವಲಯಗಳಲ್ಲಿ ಉತ್ಪಾದನೆ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಸಾಮರ್ಥ್ಯಗಳನ್ನು ವಿಸ್ತರಿಸಲು ಭಾರತದಲ್ಲಿ 75 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

ಏರ್‌ಟ್ರಂಕ್ — 30 ಬಿಲಿಯನ್ ಡಾಲರ್ (ಜೂನ್ 5, 2026):

ಆಸ್ಟ್ರೇಲಿಯಾದ ಏರ್‌ಟ್ರಂಕ್ ಸಂಸ್ಥೆಯು 2030ರ ವೇಳೆಗೆ 5 ಗಿಗಾವ್ಯಾಟ್ (GW) ಸಾಮರ್ಥ್ಯದ ಡೇಟಾ ಸೆಂಟರ್ ಅನ್ನು ನಿರ್ಮಿಸಲು ಭಾರತದಲ್ಲಿ 30 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಯೋಜನೆಯನ್ನು ಪ್ರಕಟಿಸಿದೆ.

ಸಿಪಿಪಿ ಇನ್ವೆಸ್ಟ್‌ಮೆಂಟ್ಸ್ — 7,000 ಕೋಟಿ ರೂ. (ಜೂನ್ 17, 2026):

ಕೆನಡಾ ಪೆನ್ಷನ್ ಪ್ಲಾನ್ ಇನ್ವೆಸ್ಟ್‌ಮೆಂಟ್ ಬೋರ್ಡ್, ಭಾರತದ ಡಿಜಿಟಲ್ ಮೂಲಸೌಕರ್ಯ ಮತ್ತು ಹೈಪರ್‌ಸ್ಕೇಲ್ ಡೇಟಾ ಸೆಂಟರ್ ಸಾಮರ್ಥ್ಯವನ್ನು ವಿಸ್ತರಿಸಲು ‘CtrlS ಡೇಟಾಸೆಂಟರ್ಸ್’ ಜೊತೆಗೆ 7,000 ಕೋಟಿ ರೂ.ವರೆಗೆ ಹೂಡಿಕೆ ಮಾಡಲು ಬದ್ಧವಾಗಿದೆ.

ಸೈಂಟ್-ಗೋಬೈನ್— 1 ಬಿಲಿಯನ್ ಯುರೋ (ಜೂನ್ 18, 2026):

ಭಾರತವನ್ನು ತನ್ನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಗಳಲ್ಲಿ ಒಂದೆಂದು ಕರೆದಿರುವ ಸೈಂಟ್-ಗೋಬೈನ್ ಸಂಸ್ಥೆಯು, ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ 1 ಬಿಲಿಯನ್ ಯುರೋ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಅಮೆಜಾನ್ — 48 ಬಿಲಿಯನ್ ಡಾಲರ್ (ಜೂನ್ 25, 2026):

ಅಮೆಜಾನ್ ಸಿಇಒ ಆ್ಯಂಡಿ ಜಸ್ಸಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹೊಸ ಎಐ ಮತ್ತು ಕ್ಲೌಡ್ ಮೂಲಸೌಕರ್ಯ ವಿಸ್ತರಣೆ ಸೇರಿದಂತೆ 2030ರ ವೇಳೆಗೆ ಭಾರತದಲ್ಲಿ ಅಮೆಜಾನ್‌ನ ಒಟ್ಟು ಹೂಡಿಕೆಯನ್ನು 48 ಬಿಲಿಯನ್‌ ಡಾಲರ್​​ಗೆ (ಸುಮಾರು 4 ಲಕ್ಷ ಕೋಟಿ ರೂ.) ಏರಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಒರಾಕಲ್​ನಲ್ಲಿ ಒಂದು ವರ್ಷದಲ್ಲಿ ಕೆಲಸ ಕಳೆದುಕೊಂಡ 21,000 ಉದ್ಯೋಗಿಗಳು; ಎಐನಲ್ಲಿ ಹೂಡಿಕೆ ಮಾಡಲಿರುವ ಐಟಿ ದಿಗ್ಗಜ

ಅಮೆಜಾನ್‌ನ 48 ಬಿಲಿಯನ್ ಡಾಲರ್ ಹೂಡಿಕೆಯೊಂದಿಗೆ ಮುಕ್ತಾಯಗೊಂಡ ಈ ಬೃಹತ್ ಒಪ್ಪಂದಗಳ ಸರಣಿಯು ಜಾಗತಿಕ ಮಟ್ಟದಲ್ಲಿ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಜಾಗತಿಕ ಸಿಇಒಗಳು ಭಾರತವನ್ನು ಮುಂದಿನ ದೊಡ್ಡ ಆರ್ಥಿಕ ಬೆಳವಣಿಗೆಯ ಇಂಜಿನ್ ಆಗಿ ನೋಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಮುಂಚಿತವಾಗಿಯೇ ಭಾರತದ ಮಾರುಕಟ್ಟೆ ಪ್ರವೇಶಿಸಿ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

ಜಾಗತಿಕ ಹೂಡಿಕೆಗೆ ಭಾರತವೇ ಮೊದಲ ಆದ್ಯತೆ ಏಕೆ?:

– ಜಾಗತಿಕ ಮಾರುಕಟ್ಟೆಗಳು ಏರಿಳಿತ ಕಾಣುತ್ತಿದ್ದರೂ, ಭಾರತದ ಆರ್ಥಿಕ ಬೆಳವಣಿಗೆಯ ದರ (GDP Growth) ಸ್ಥಿರವಾಗಿದೆ.

– ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಮತ್ತು ತಂತ್ರಜ್ಞಾನದ ಅಳವಡಿಕೆ ವೇಗವಾಗಿ ಹೆಚ್ಚುತ್ತಿರುವುದರಿಂದ, ಜಾಗತಿಕ ಟೆಕ್ ಕಂಪನಿಗಳಿಗೆ ಭಾರತ ಅತ್ಯಂತ ಆಕರ್ಷಕ ಮಾರುಕಟ್ಟೆಯಾಗಿದೆ.

– ಸರ್ಕಾರದ ಪ್ರೋತ್ಸಾಹಕ ಯೋಜನೆಗಳು (PLI Schemes) ಮತ್ತು ಮೂಲಸೌಕರ್ಯ ಅಭಿವೃದ್ಧಿಯು ಜಾಗತಿಕ ಉತ್ಪಾದನಾ ಕಂಪನಿಗಳಿಗೆ ಪೂರಕ ವಾತಾವರಣ ನಿರ್ಮಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ