AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ
ಜೆ.ಪಿ. ನಡ್ಡಾ
ರಾಜೇಶ್ ದುಗ್ಗುಮನೆ
|

Updated on:Dec 10, 2020 | 7:33 PM

Share

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಪಶ್ಚಿಮ ಬಂಗಾಳ ಪ್ರವಾಸದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಮತ್ತೊಂದೆಡೆ ಈ ದಾಳಿ ಕುರಿತು ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ.

ಜೆ.ಪಿ .ನಡ್ಡಾ ನಾರ್ತ್​​ 24 ಪರಗಣಾಸ್​​ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್​ ಘೋಷ್​ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಕಪ್ಪು ಬಾವುಟ ಹಾರಿಸಿದ್ದಾರೆ. ಈ ಉದ್ರಿಕ್ತ ಗುಂಪಿನವರು ಬಿಜೆಪಿ ಕಚೇರಿ ಹೊರ ಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಹಾನಿ ಮಾಡಿದ್ದಾರೆ. ಆದರೆ, ಪೊಲೀಸರು ಇದನ್ನು ತಡೆಯಲು ಮುಂದಾಗಿಲ್ಲ. ಈ ಗುಂಪಿನವರನ್ನು ಜೆ.ಪಿ. ನಡ್ಡಾ ಕಾರಿನ ಬಳಿ ತೆರಳದಂತೆಯೂ ಪೊಲೀಸರು ತಡೆದಿಲ್ಲ. ಇದು ಗಂಭೀರವಾದ ಭದ್ರತಾ ಲೋಪ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಭೇಟಿ ವೇಳೆ ಸಾಕಷ್ಟು ಭದ್ರತಾ ಲೋಪ ಕಂಡು ಬಂದಿದೆ. ಪೊಲೀಸ್​ ಸಿಬ್ಬಂದಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ಆರೋಪಿಸಿದ್ದಾರೆ. ಈ ಪತ್ರ ದೊರೆತ ಬೆನ್ನಲ್ಲೇ ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಜೆ.ಪಿ. ನಡ್ಡಾ ಗುರುವಾರ (ಡಿ.10) ಚುನಾವಣಾ ಪ್ರಚಾರಕ್ಕೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಅವರ ಕಾರಿನ ಮೇಲೆ ಕಲ್ಲುತೂರಾಟ ನಡೆದಿತ್ತು. ಇದನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ, ಭಾರತೀಯ ರಾಜಕೀಯ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಹೇಳಿತ್ತು.

ಜೆ.ಪಿ.ನಡ್ಡಾ ಪ್ರವಾಸದ ವೇಳೆ ಬಿಜೆಪಿ ಮುಖಂಡರ ವಾಹನಗಳ ಮೇಲೆ ಕಲ್ಲು ತೂರಾಟ

Published On - 7:12 pm, Thu, 10 December 20

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು