AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ
ಜೆ.ಪಿ. ನಡ್ಡಾ
ರಾಜೇಶ್ ದುಗ್ಗುಮನೆ
|

Updated on:Dec 10, 2020 | 7:33 PM

Share

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಪಶ್ಚಿಮ ಬಂಗಾಳ ಪ್ರವಾಸದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಮತ್ತೊಂದೆಡೆ ಈ ದಾಳಿ ಕುರಿತು ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ.

ಜೆ.ಪಿ .ನಡ್ಡಾ ನಾರ್ತ್​​ 24 ಪರಗಣಾಸ್​​ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್​ ಘೋಷ್​ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಕಪ್ಪು ಬಾವುಟ ಹಾರಿಸಿದ್ದಾರೆ. ಈ ಉದ್ರಿಕ್ತ ಗುಂಪಿನವರು ಬಿಜೆಪಿ ಕಚೇರಿ ಹೊರ ಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಹಾನಿ ಮಾಡಿದ್ದಾರೆ. ಆದರೆ, ಪೊಲೀಸರು ಇದನ್ನು ತಡೆಯಲು ಮುಂದಾಗಿಲ್ಲ. ಈ ಗುಂಪಿನವರನ್ನು ಜೆ.ಪಿ. ನಡ್ಡಾ ಕಾರಿನ ಬಳಿ ತೆರಳದಂತೆಯೂ ಪೊಲೀಸರು ತಡೆದಿಲ್ಲ. ಇದು ಗಂಭೀರವಾದ ಭದ್ರತಾ ಲೋಪ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಭೇಟಿ ವೇಳೆ ಸಾಕಷ್ಟು ಭದ್ರತಾ ಲೋಪ ಕಂಡು ಬಂದಿದೆ. ಪೊಲೀಸ್​ ಸಿಬ್ಬಂದಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ಆರೋಪಿಸಿದ್ದಾರೆ. ಈ ಪತ್ರ ದೊರೆತ ಬೆನ್ನಲ್ಲೇ ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಜೆ.ಪಿ. ನಡ್ಡಾ ಗುರುವಾರ (ಡಿ.10) ಚುನಾವಣಾ ಪ್ರಚಾರಕ್ಕೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಅವರ ಕಾರಿನ ಮೇಲೆ ಕಲ್ಲುತೂರಾಟ ನಡೆದಿತ್ತು. ಇದನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ, ಭಾರತೀಯ ರಾಜಕೀಯ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಹೇಳಿತ್ತು.

ಜೆ.ಪಿ.ನಡ್ಡಾ ಪ್ರವಾಸದ ವೇಳೆ ಬಿಜೆಪಿ ಮುಖಂಡರ ವಾಹನಗಳ ಮೇಲೆ ಕಲ್ಲು ತೂರಾಟ

Published On - 7:12 pm, Thu, 10 December 20

ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?