AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ
ಜೆ.ಪಿ. ನಡ್ಡಾ
ರಾಜೇಶ್ ದುಗ್ಗುಮನೆ
|

Updated on:Dec 10, 2020 | 7:33 PM

Share

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಪಶ್ಚಿಮ ಬಂಗಾಳ ಪ್ರವಾಸದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಮತ್ತೊಂದೆಡೆ ಈ ದಾಳಿ ಕುರಿತು ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ.

ಜೆ.ಪಿ .ನಡ್ಡಾ ನಾರ್ತ್​​ 24 ಪರಗಣಾಸ್​​ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್​ ಘೋಷ್​ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

200ಕ್ಕೂ ಹೆಚ್ಚು ಜನರು ಕೋಲುಗಳನ್ನು ಹಿಡಿದುಕೊಂಡು ಜೆ.ಪಿ. ನಡ್ಡಾ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಕಪ್ಪು ಬಾವುಟ ಹಾರಿಸಿದ್ದಾರೆ. ಈ ಉದ್ರಿಕ್ತ ಗುಂಪಿನವರು ಬಿಜೆಪಿ ಕಚೇರಿ ಹೊರ ಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಹತ್ತಿ ಹಾನಿ ಮಾಡಿದ್ದಾರೆ. ಆದರೆ, ಪೊಲೀಸರು ಇದನ್ನು ತಡೆಯಲು ಮುಂದಾಗಿಲ್ಲ. ಈ ಗುಂಪಿನವರನ್ನು ಜೆ.ಪಿ. ನಡ್ಡಾ ಕಾರಿನ ಬಳಿ ತೆರಳದಂತೆಯೂ ಪೊಲೀಸರು ತಡೆದಿಲ್ಲ. ಇದು ಗಂಭೀರವಾದ ಭದ್ರತಾ ಲೋಪ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಭೇಟಿ ವೇಳೆ ಸಾಕಷ್ಟು ಭದ್ರತಾ ಲೋಪ ಕಂಡು ಬಂದಿದೆ. ಪೊಲೀಸ್​ ಸಿಬ್ಬಂದಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ದಿಲೀಪ್​ ಘೋಷ್​ ಪತ್ರದಲ್ಲಿ ಆರೋಪಿಸಿದ್ದಾರೆ. ಈ ಪತ್ರ ದೊರೆತ ಬೆನ್ನಲ್ಲೇ ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಜೆ.ಪಿ. ನಡ್ಡಾ ಗುರುವಾರ (ಡಿ.10) ಚುನಾವಣಾ ಪ್ರಚಾರಕ್ಕೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಅವರ ಕಾರಿನ ಮೇಲೆ ಕಲ್ಲುತೂರಾಟ ನಡೆದಿತ್ತು. ಇದನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ, ಭಾರತೀಯ ರಾಜಕೀಯ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಹೇಳಿತ್ತು.

ಜೆ.ಪಿ.ನಡ್ಡಾ ಪ್ರವಾಸದ ವೇಳೆ ಬಿಜೆಪಿ ಮುಖಂಡರ ವಾಹನಗಳ ಮೇಲೆ ಕಲ್ಲು ತೂರಾಟ

Published On - 7:12 pm, Thu, 10 December 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!