ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ರಾಹುಲ್​ ಗಾಂಧಿಗೆ ಅಭ್ಯಾಸವಾಗಿಬಿಟ್ಟಿದೆ: ಅಮಿತ್ ಶಾ

ಸಂಸದ ರಾಹುಲ್​ ಗಾಂಧಿಗೆ ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿಬಿಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್​ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಹುಲ್ ಗಾಂಧಿಗೆ ದೇಶದ ಜನರ ಭಾವನೆಗಳಿಗೆ ಧಕ್ಕೆ ತರುವುದೇ ಕೆಲಸ ಎಂದು ಹೇಳಿದರು.

ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ರಾಹುಲ್​ ಗಾಂಧಿಗೆ ಅಭ್ಯಾಸವಾಗಿಬಿಟ್ಟಿದೆ: ಅಮಿತ್ ಶಾ
ಅಮಿತ್ ಶಾImage Credit source: Hindustan Times
Follow us
|

Updated on:Sep 11, 2024 | 12:25 PM

ದೇಶವನ್ನು ವಿಭಜಿಸುವ ಶಕ್ತಿಗಳ ಪರ ನಿಲ್ಲುವುದು, ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ(Rahul Gandhi) ಮತ್ತು ಕಾಂಗ್ರೆಸ್​ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ(Amit Shah) ಹೇಳಿದ್ದಾರೆ. ಸಂಸದ ರಾಹುಲ್​ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮಾತುಗಳು ಮತ್ತು ಮೀಸಲಾತಿ ವಿರೋಧಿ ಅಜೆಂಡಾ ಆಗಿರಬಹುದು ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು. ರಾಹುಲ್ ಗಾಂಧಿಗೆ ದೇಶದ ಜನರ ಭಾವನೆಗಳಿಗೆ ಧಕ್ಕೆ ತರುವುದೇ ಕೆಲಸ ಎಂದು ಹೇಳಿದರು.

ರಾಹುಲ್ ಗಾಂಧಿ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಸೃಷ್ಟಿಸುವ ಕಾಂಗ್ರೆಸ್‌ನ ರಾಜಕೀಯವನ್ನು ಬಹಿರಂಗಪಡಿಸುತ್ತದೆ. ದೇಶದಿಂದ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಹೊರತಂದಿದ್ದಾರೆ.

ಅವರ ಮನಸ್ಸಿನಲ್ಲಿದ್ದ ವಿಚಾರಗಳು ಮಾತಿನ ರೂಪದಲ್ಲಿ ಹೊರಬಂದಿವೆ. ಬಿಜೆಪಿ ಇರುವವರೆಗೂ ಮೀಸಲಾತಿಯನ್ನು ಯಾರೂ ರದ್ದು ಮಾಡಲು ಸಾಧ್ಯವಿಲ್ಲ ಮತ್ತು ದೇಶದ ಭದ್ರತೆಯೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದರು.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಾಯತ್ತತೆಯನ್ನು ಎಂದಿಗೂ ಪುನಃಸ್ಥಾಪಿಸಲಾಗುವುದಿಲ್ಲ: ಅಮಿತ್ ಶಾ

ಅಮೆರಿಕ ಪ್ರವಾಸದ ವೇಳೆ ರಾಹುಲ್ ಗಾಂಧಿ ಅಲ್ಲಿನ ಭಾರತೀಯ ಅಮೆರಿಕನ್ ಸಮುದಾಯದ ನೂರಾರು ಜನರೊಂದಿಗೆ ಸಂವಾದ ನಡೆಸಿದರು. ಆರ್​ಎಸ್​ಎಸ್​ ಕೆಲವು ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಭಾರತದಲ್ಲಿ ಸಿಖ್ಖರಿಗೆ ಪೇಟ ಅಥವಾ ಖಡ ಧರಿಸುವ ಹಕ್ಕಿನ ಬಗ್ಗೆಯೂ ಹೋರಾಟ ನಡೆಯುತ್ತಿದೆ. ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಬೆಂಬಲ ನೀಡಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಗುರುಪತ್ವಂತ್ ಸಿಂಗ್ ಪನ್ನು, ರಾಹುಲ್ ಗಾಂಧಿ ತುಂಬಾ ದಿಟ್ಟ ಹೇಳಿಕೆ ನೀಡಿದ್ದಾರೆ.1947ರಿಂದ ಭಾರತದಲ್ಲಿ ಸಿಖ್ಖರು ಎದುರಿಸುತ್ತಿರುವ ದೌರ್ಜನ್ಯವನ್ನು ತೋರಿಸುತ್ತದೆ ಎಂದು ಪನ್ನು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:24 pm, Wed, 11 September 24

ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ