AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission 90 Meet: ತೆಲಂಗಾಣ ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ತುರ್ತು ಸಭೆ; ಕುತೂಹಲ ಮೂಡಿಸಿದ ಶಾ ಆಂಧ್ರ ನಡೆ

ಮಂಗಳವಾರ(ಫೆ.28) ದೆಹಲಿಯಲ್ಲಿ ತೆಲಂಗಾಣದ ಬಿಜೆಪಿ ಪಕ್ಷದ ನಾಯಕರೊಂದಿಗೆ ಅಮಿತ್ ಶಾ ತುರ್ತು ಸಭೆ ನಡೆಸಲಿದ್ದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Mission 90 Meet: ತೆಲಂಗಾಣ ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ತುರ್ತು ಸಭೆ; ಕುತೂಹಲ ಮೂಡಿಸಿದ ಶಾ ಆಂಧ್ರ ನಡೆ
ಅಮಿತ್ ಶಾ
TV9 Web
| Edited By: ಆಯೇಷಾ ಬಾನು|

Updated on:Feb 28, 2023 | 7:56 AM

Share

ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಮಂಗಳವಾರ(ಫೆ.28) ದೆಹಲಿಯಲ್ಲಿ ತೆಲಂಗಾಣದ ಬಿಜೆಪಿ ಪಕ್ಷದ ನಾಯಕರೊಂದಿಗೆ ‘ವಿಷನ್ 90’ ಸಭೆ(Mission 90 Meet) ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಂಬರುವ ರಾಜ್ಯ ಚುನಾವಣೆಯಲ್ಲಿ 90 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಪಕ್ಷದ ಗುರಿಯ ಬಗ್ಗೆ ಹಾಗೂ ಅದರ ಸ್ಟ್ರಾಟಜಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಮೂಲಗಳು ಪ್ರಕಾರ, ಸೋಮವಾರ(ಫೆ.27) ಅಮಿತ್ ಶಾ ಅವರ ಕಚೇರಿಯಿಂದ ಕಾರ್ಯಕಾರಿ ಸದಸ್ಯರಿಗೆ ಕರೆ ಬಂದಿದ್ದು, ತುರ್ತು ಸಭೆಗೆ ಅವರನ್ನು ಕರೆಯಲಾಗಿದೆ. ಅಮಿತ್ ಶಾ ಅವರು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಪಕ್ಷದ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಬಲಪಡಿಸುವ ಹಾಗೂ ಪರಿಶೀಲಿಸುವ ಸಾಧ್ಯತೆಯಿದೆ. ಹೀಗಾಗಿ ಮಂಗಳವಾರ ಶಾ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕರೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: PM Narendra Modi: ಇಂದು ಪೋಸ್ಟ್​​​​ ಬಜೆಟ್​​​ ವೆಬಿನಾರ್​​ನ 5ನೇ ದಿನ ಕುರಿತು ಮಾತನಾಡಲಿರುವ ಪ್ರಧಾನಿ ಮೋದಿ

ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ಬಗ್ಗೆಯೂ ಬಿಜೆಪಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಏಕೆಂದರೆ ಹಲವಾರು ತೆಲುಗು ನಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅಮಿತ್ ಶಾ ಅವರು ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಹಾಗೂ ರಾಜ್ಯದಲ್ಲಿ ಬಂಧನ ಪ್ರಕರಣಗಳ ವಿವಿಧ ಸನ್ನಿವೇಶಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.

ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಸೇರಿದಂತೆ ಹಿರಿಯ ಮುಖಂಡರು, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಕೆ. ಅರುಣಾ, ಈಟಾಳ ರಾಜೇಂದರ್, ಡಾ.ಕೆ.ಲಕ್ಷ್ಮಣ್ ಮತ್ತು ವಿಜಯಶಾಂತಿ ಸೇರಿದಂತೆ ಇತರರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಆಂಧ್ರಪ್ರದೇಶದ ತಿರುಪತಿ ಪ್ರವಾಸದಲ್ಲಿರುವ ಹಿರಿಯ ಬಿಜೆಪಿ ನಾಯಕ ಜಿ.ವಿವೇಕ್ ವೆಂಕಟಸ್ವಾಮಿ ಅವರು, ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕೆ.ಕವಿತಾ ಅವರನ್ನು ಸಿಬಿಐ ಬಂಧಿಸಲಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:54 am, Tue, 28 February 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​