AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra: ಅಮರನಾಥ ಯಾತ್ರೆಗೆ ಹೈ ಅಲರ್ಟ್; ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಿತು ಉನ್ನತ ಮಟ್ಟದ ಸಭೆ

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಂಚು ಹೂಡುತ್ತಿರುವ ಬಗ್ಗೆ ಗುಪ್ತಚರ ಮಾಹಿತಿ ಮಧ್ಯೆ ಯಾತ್ರೆಯ ವ್ಯವಸ್ಥೆಗಳ ಮೇಲೆಯೂ ಸರ್ಕಾರ ಗಮನಹರಿಸಿದೆ.

Amarnath Yatra: ಅಮರನಾಥ ಯಾತ್ರೆಗೆ ಹೈ ಅಲರ್ಟ್; ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಿತು ಉನ್ನತ ಮಟ್ಟದ ಸಭೆ
ಅಮಿತ್ ಶಾ
ಗಣಪತಿ ಶರ್ಮಾ
|

Updated on:Jun 09, 2023 | 8:08 PM

Share

ನವದೆಹಲಿ: ಜುಲೈ 1 ರಂದು ಆರಂಭಗೊಂಡು ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿರುವ 62 ದಿನಗಳ ಅಮರನಾಥ ಯಾತ್ರೆಯ (Amarnath Yatra) ಸಿದ್ಧತೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ , ಗುಪ್ತಚರ ದಳದ ಮುಖ್ಯಸ್ಥ ತಪನ್ ದೇಕಾ, ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಉಪೇಂದ್ರ ದ್ವಿವೇದಿ ಮತ್ತು ಸಿಆರ್‌ಪಿಎಫ್‌ನ ಡೈರೆಕ್ಟರ್ ಜನರಲ್ ಎಸ್‌ಎಲ್ ಥಾಸೆನ್ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಇತ್ತೀಚೆಗೆ ಜಿ20 ಪ್ರವಾಸೋದ್ಯಮ ಕಾರ್ಯಕಾರಿ ಗುಂಪಿನ ಸಭೆಯು ಯಶಸ್ವಿಯಾಗಿ ನೆರವೇರಿತ್ತು. ಶೃಂಗಸಭೆ ವೇಳೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂಬ ವದಂತಿಗಳೂ ಇದ್ದವು. ಇವೆಲ್ಲದರ ನಡುವೆ ಸುಸೂತ್ರವಾಗಿ ಸಭೆ ಆಯೋಜಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿತ್ತು. ಇದೀಗ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಉಗ್ರರು ಹೊಂಚುಹಾಕುತ್ತಿದ್ದಾರೆ ಎನ್ನಲಾಗಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಂಚು ಹೂಡುತ್ತಿರುವ ಬಗ್ಗೆ ಗುಪ್ತಚರ ಮಾಹಿತಿ ಮಧ್ಯೆ ಯಾತ್ರೆಯ ವ್ಯವಸ್ಥೆಗಳ ಮೇಲೆಯೂ ಸರ್ಕಾರ ಗಮನಹರಿಸಿದೆ.

ಇದನ್ನೂ ಓದಿ: Amarnath Yatra 2023: ಜುಲೈ 1 ರಿಂದ ಅಮರನಾಥ ಯಾತ್ರೆ ಪ್ರಾರಂಭ

ದಕ್ಷಿಣ ಕಾಶ್ಮೀರದಲ್ಲಿ, ಸುಮಾರು 3,880 ಮೀಟರ್ ಎತ್ತರದಲ್ಲಿರುವ ಅಮರನಾಥನ ಪವಿತ್ರ ಗುಹಾ ದೇಗುಲಕ್ಕೆ ವಾರ್ಷಿಕ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಗಲಿದೆ ಮತ್ತು ಆಗಸ್ಟ್ 31 ರವರೆಗೆ ನಡೆಯಲಿದೆ. ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಅಮರನಾಥನ ದರ್ಶನ ಪಡೆಯುತ್ತಾರೆ.

ಕಳೆದ ವರ್ಷ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಿಂದಾಗಿ ಪ್ರವಾಹ ಉಂಟಾಗಿ, ಹತ್ತಾರು ಮಂದಿ ಮೃತಪಟ್ಟಿದ್ದರು. ಅನೇಕ ಯಾತ್ರಾರ್ಥಿಗಳು ತೊಂದರೆ ಅನುಭವಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Fri, 9 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?